ಸಂಗ್ರಹ ಚಿತ್ರ 
ವಿದೇಶ

ಲಯನ್ ವಿಮಾನ ದುರಂತ: 189 ಪ್ರಯಾಣಿಕರು ಜಲ ಸಮಾಧಿಯಾದರೂ ಒಬ್ಬ ಬದುಕುಳಿದಿದ್ದೇಗೆ?

ಇಂಡೋನೇಷ್ಯಾ ಲಯನ್ ಏರ್ ಲೈನ್ಸ್ ವಿಮಾನ ಸಮುದ್ರದಲ್ಲಿ ಪತನಗೊಂಡು 189 ಪ್ರಯಾಣಿಕರು ಜಲಸಮಾಧಿಯಾಗಿದ್ದು ಅದೃಷ್ಟವಶಾತ್ ಒಬ್ಬರು ಮಾತ್ರ ಬದುಕುಳಿದಿದ್ದಾರೆ...

ಜಕಾರ್ತ: ಇಂಡೋನೇಷ್ಯಾ ಲಯನ್ ಏರ್ ಲೈನ್ಸ್ ವಿಮಾನ ಸಮುದ್ರದಲ್ಲಿ ಪತನಗೊಂಡು 189 ಪ್ರಯಾಣಿಕರು ಜಲಸಮಾಧಿಯಾಗಿದ್ದು ಅದೃಷ್ಟವಶಾತ್ ಒಬ್ಬರು ಮಾತ್ರ ಬದುಕುಳಿದಿದ್ದಾರೆ. 
ಟ್ರಾಫಿಕ್ ಜಾಮ್ ನಿಂದ ತೊಂದರೆಗೀಡಾದ ಮಂದಿ ಒಮ್ಮೆ ಹಿಡಿಶಾಪ ಹಾಕದೇ ಇರಲಾರರು. ಆದರೆ ಅದೇ ಟ್ರಾಫಿಕ್ ಜಾಮ್ ಒಬ್ಬರ ಪ್ರಾಣವನ್ನು ಉಳಿಸಿದೆ ಎಂಬುದನ್ನು ನಾವು ನಂಬಲೇಬೇಕು. 
ಲಯನ್ ಏರ್ ವಿಮಾನ ಟೇಕ್ ಆಫ್ ಆದ 13 ನಿಮಿಷಕ್ಕೆ ನಾಪತ್ತೆಯಾಗಿ ಸಮುದ್ರದಲ್ಲಿ ಪತನವಾಗಿತ್ತು. ಇದರಲ್ಲಿ 189 ಪ್ರಯಾಣಿಕರು ಹಾಗೂ 7 ಮಂದಿ ವಿಮಾನ ಸಿಬ್ಬಂದಿ ಜಲ ಸಮಾಧಿಯಾದರು. ಆದರೇ ಅದೇ ವಿಮಾನದಲ್ಲಿ ಪ್ರಯಾಣಿಸಬೇಕಿದ್ದ ಇಂಡೋನೇಷ್ಯಾದ ಸೋನಿ ಸೆಟ್ಯಾವಾನ್ ಎಂಬಾತ ಮಾತ್ರ ಬದುಕುಳಿದಿದ್ದಾರೆ. ಅದು ಟ್ರಾಫಿಕ್ ಜಾಮ್ ನಿಂದಾಗಿ. 
ಸೆಟ್ಯಾವಾನ್ ಇಂಡೋನೇಷ್ಯಾದ ಹಣಕಾಸು ಸಚಿವಾಲಯದ ಅಧಿಕಾರಿಯಾಗಿದ್ದರು. ವಾರಕ್ಕೊಮ್ಮೆ ತನ್ನ ಸಹೋದ್ಯೋಗಿಗಳೊಂದಿಗೆ ಪಂಗ್ಕಲ್ ಪಿನಾಂಗ್ ಗೆ ತೆರಳುತ್ತಿದ್ದರು. ಎಂದಿನಂತೆ ಈ ಬಾರಿಯೂ ಜೆಟಿ 610 ಲಯನ್ ವಿಮಾನವನ್ನು ಬುಕ್ ಮಾಡಿದ್ದರು. ಆದರೆ ಸೊಕೆರ್ನೋ-ಹಟ್ಟಾ ವಿಮಾನ ನಿಲ್ದಾಣದ ದಾರಿಯಲ್ಲಿ ಭಾರೀ ಟ್ರಾಫಿಕ್ ಇದ್ದುದ್ದರಿಂದ ತಡವಾಗಿ ಬಂದ ಆತನಿಗೆ ವಿಮಾನ ಸಿಗದೇ ಬೇರೊಂದು ವಿಮಾನದಲ್ಲಿ ಪ್ರಯಾಣಿಸಿದ್ದರು.
ಸೆಟ್ಯಾವಾನ್ ತಾನು ಪ್ರಯಾಣಿಸಿದ್ದ ವಿಮಾನ ಲ್ಯಾಂಡ್ ಆಗುತ್ತಿದ್ದಂತೆ ಲಯನ್ ವಿಮಾನ ಪತನವಾಗಿದೆ ಎಂಬ ಸುದ್ದಿ ಕೇಳಿ ಒಮ್ಮೆ ಆಘಾತವಾಗಿದೆ. ಪತನಗೊಂಡ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಸ್ನೇಹಿತರನ್ನು ನೆನೆದು ಕಣ್ಣೀರು ಹಾಕಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಸ್ಸಾಂ: ಸೈರಾಂಗ್‌-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ; ಸ್ಥಳದಲ್ಲೇ 7 ಆನೆಗಳ ದಾರುಣ ಸಾವು

ಉ.ಕ. ನಿರ್ಲಕ್ಷ್ಯ ಮಾಡಿದ್ದೇವೆ ಎಂದು ಹೇಳುವ ನೈತಿಕ ಹಕ್ಕು ಬಿಜೆಪಿಯವರಿಗೆ ಇಲ್ಲ, 'ಗ್ಯಾರಂಟಿ ನಿಧಿ'ಯ ಶೇ. 43.63 ಭಾಗ ನೀಡಿದ್ದೇವೆ: ಸಿದ್ದರಾಮಯ್ಯ

Air India Express ಪೈಲಟ್ ನಿಂದ ಸ್ಪೈಸ್ ಜೆಟ್ ಪ್ರಯಾಣಿಕನ ಮೇಲೆ ಹಲ್ಲೆ; ರಕ್ತಸ್ರಾವದಿಂದ ನರಳಿದ ಸಂತ್ರಸ್ತ

Epstein Files ಬಿಡುಗಡೆ: ಟ್ರಂಪ್ ಬಗ್ಗೆ ಹೆಚ್ಚಿನದ್ದಿಲ್ಲ; ಕ್ಲಿಂಟನ್ ಫೋಟೋಗಳು ಬಹಿರಂಗ!

ಬಿಕ್ಲು ಶಿವ ಕೊಲೆ ಕೇಸ್ ನಲ್ಲಿ ಸಿಗದ ನಿರೀಕ್ಷಣಾ ಜಾಮೀನು: ಅಜ್ಞಾತ ಸ್ಥಳಕ್ಕೆ ತೆರಳಿದ ಬಿಜೆಪಿ ಶಾಸಕ ಭೈರತಿ ಬಸವರಾಜು?

SCROLL FOR NEXT