ಬಂಧಿತ ಪತ್ರಕರ್ತರು 
ವಿದೇಶ

ಮಯನ್ಮಾರ್: ರಹಸ್ಯ ದಾಖಲೆ ಹೊಂದಿದ್ದ ಆರೋಪ, ರಾಯಿಟರ್ಸ್ ನ 2 ಪತ್ರಕರ್ತರಿಗೆ 7 ವರ್ಷ ಜೈಲು!

ರೊಹಿಂಗ್ಯನ್ನರ ಕಗ್ಗೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಹಸ್ಯ ಕಾರ್ಯಾಚರಣೆ ನಡೆಸಿದ್ದ ರಾಯಿಟರ್ಸ್ ಸುದ್ದಿ ಸಂಸ್ಥೆಯ ಇಬ್ಬರು ಪತ್ರಕರ್ತರಿಗೆ ಮಯನ್ಮಾರ್ ಕೋರ್ಟ್ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಯಂಗೋನ್: ರೊಹಿಂಗ್ಯನ್ನರ ಕಗ್ಗೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಹಸ್ಯ ಕಾರ್ಯಾಚರಣೆ ನಡೆಸಿದ್ದ ರಾಯಿಟರ್ಸ್ ಸುದ್ದಿ ಸಂಸ್ಥೆಯ ಇಬ್ಬರು ಪತ್ರಕರ್ತರಿಗೆ ಮಯನ್ಮಾರ್ ಕೋರ್ಟ್ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಕಳೆದ ಡಿಸೆಂಬರ್ ನಲ್ಲಿ ನಡೆದಿದ್ದ ರೊಹಿಂಗ್ಯಾ ಕಗ್ಗೊಲೆ ಪ್ರಕರಣದ ವರದಿ ಮಾಡಿದ್ದ ವಾ ಲೋನ್ ಮತ್ತು ಕ್ಯಾ ಸೂ ಓ ಪತ್ರಕರ್ತರಿಗೆ ಮಯನ್ಮಾರ್ ಕೋರ್ಟ್ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಇಬ್ಬರೂ ಪತ್ರಕರ್ತರ ವಿರುದ್ಧ ಅಧಿಕೃತ ರಹಸ್ಯ ದಾಖಲೆ ರಕ್ಷಣೆ ಕಾಯ್ದೆಯಡಿ ದೂರು ದಾಖಲಾಗಿತ್ತು.
ಇನ್ನು ಪತ್ರಿಕಾ ಸ್ವಾತಂತ್ರ್ಯ ಹಾಗೂ ಮಾನವ ಹಕ್ಕುಗಳ ಸಂಘಟನೆಯ ಕಾರ್ಯಕರ್ತರು ಪತ್ರಕರ್ತರ ಬಂಧನಕ್ಕೆ ಜಾಗತಿಕ ಮಟ್ಟದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು. ಹಲವಾರು ದೇಶಗಳಲ್ಲಿ ಪ್ರತಿಭಟನೆ ಸಹ ನಡೆದಿತ್ತು.
ಏನಿದು ಘಟನೆ?
ಕಳೆದ ಡಿಸೆಂಬರ್​ನಲ್ಲಿ ಮಯನ್ಮಾರ್​ನ ರಖಿನೇ ರಾಜ್ಯದಲ್ಲಿ ಸುಮಾರು ನೂರು ಮಂದಿ ರೋಹಿಂಗ್ಯಾ ಮುಸ್ಲಿಮರ ಕಗ್ಗೊಲೆ ನಡೆದಿತ್ತು. ಈ ವೇಳೆ ಪುರುಷರು, ಮಹಿಳೆಯರು ಹಾಗೂ ಸಾಕಷ್ಟು ಮಂದಿ ಬಾಲಕರು ಸಾವನ್ನಪ್ಪಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಅಂತಾರಾಷ್ಟ್ರೀಯ ಸುದ್ದಿಸಂಸ್ಥೆ ರಾಯಿಟರ್ಸ್​ನ ಈ ಇಬ್ಬರು ಪತ್ರಕರ್ತರು ತನಿಖಾ ಪತ್ರಿಕೋದ್ಯಮ ಆರಂಭಿಸಿದ್ದರು. ಈ ವೇಳೆ ಮಯನ್ಮಾರ್ ಮಿಲಿಟರಿ ಶಿಸ್ತುಕ್ರಮದ ಸಮಯದಲ್ಲಿ ಈ ಕೊಲೆಗಳು ನಡೆದಿದ್ದವು ಎಂದು ವರದಿ ನೀಡಿದ್ದರು. 
ಈ ಸಂಬಂಧ ತನಿಖೆ ನಡೆಸಿದ್ದ ಮಯನ್ಮಾರ್ ಪೊಲೀಸರು ರೆಸ್ಟೊರೆಂಟ್ ಒಂದರಲ್ಲಿ ಕೆಲವು ರಹಸ್ಯ ಪೇಪರ್ ಗಳನ್ನು ನೀಡಿದ ಸಂದರ್ಭದಲ್ಲಿ ಬಂಧಿಸಿದ್ದರು. ಈ ವೇಳೆ ಇಬ್ಬರು ಪತ್ರಕರ್ತರ ವಿರುದ್ಧ ಅಧಿಕೃತ ರಹಸ್ಯ ಮಾಹಿತಿ ರಕ್ಷಣಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದ ಸುಧೀರ್ಘ ವಿಚಾರಣೆ ನಡೆಸಿದ ಕೋರ್ಟ್ ಇಂದು ತನ್ನ ತೀರ್ಪು ನೀಡಿದ್ದು, ಅನಧಿಕೃತವಾಗಿ ತನಿಖೆ ನಡೆಸಿ ಗೌಪ್ಯ ಮಾಹಿತಿ ಸೋರಿಕೆ ಮಾಡಿದ್ದಾರೆ ಎಂಬ ಆರೋಪ ಸಾಬೀತಾಗಿದೆ ಎಂದು ಹೇಳಿದೆ. ಅಲ್ಲದೆ ಇಬ್ಬರೂ ಪತ್ರಕರ್ತರಿಗೂ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸ್ಫೋಟ ಪ್ರಕರಣದಲ್ಲಿ ಮೊದಲ ಬಂಧನ: i20 ಕಾರಿನ ಮಾಲೀಕ ಆಮಿರ್ Arrest; ಡಾ. ಉಮರ್ ಜೊತೆ ಸೇರಿ ದಾಳಿಗೆ ಸಂಚು!

KPCC ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ?: ದೆಹಲಿಯಲ್ಲಿ ಸಿಡಿದೆದ್ದ ಡಿಸಿಎಂ ಡಿ.ಕೆ ಶಿವಕುಮಾರ್!

ಹೂಕೋಸು ಫೋಟೋ ಹಾಕಿ ಬಿಹಾರದ NDA ಗೆಲುವು ಸಂಭ್ರಮಿಸಿದ ಅಸ್ಸಾಂ ಬಿಜೆಪಿ ಸಚಿವ!: ಮುಸ್ಲಿಮ್ ನರಮೇಧ ನೆನಪಿಸಿದ್ದಕ್ಕೆ ಕಾಂಗ್ರೆಸ್ ಕೆಂಡ!

ಕುಟುಂಬದ ಮೇಲೆ ದಾಳಿ ಮಾಡುವವರನ್ನು...: ಸಹೋದರಿ ರೋಹಿಣಿಗೆ ಆದ ಅಪಮಾನಕ್ಕೆ ಸಿಡಿದ ತೇಜ್ ಪ್ರತಾಪ್ ಯಾದವ್; ತಂದೆ ಲಾಲು ಪ್ರಸಾದ್ ಗೆ ಹೇಳಿದ್ದೇನು?

ಬೆಂಗಳೂರಿನಲ್ಲಿ ಲೈವ್ ಕಾರ್ಯಕ್ರಮದ ವೇಳೆ ಗಾಯಕನ ಪ್ಯಾಂಟ್ ಎಳೆದು ಅವಮಾನ, Video Viral!

SCROLL FOR NEXT