ಚಾಬಹರ್ ಬಂದರು 
ವಿದೇಶ

ಪಾಕ್, ಚೀನಾಗೆ ಭಾರಿ ಹಿನ್ನಡೆ: ತಿಂಗಳಲ್ಲೇ ಇರಾನ್ ಚಾಬಹರ್ ಬಂದರು ನಿಯಂತ್ರಣ ಭಾರತಕ್ಕೆ!

ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಕಿಸ್ತಾನ ಮತ್ತು ಚೀನಾ ದೇಶಗಳಿಗೆ ಭಾರಿ ಹಿನ್ನಡೆಯಾಗಿದ್ದು, ಪಾಕ್, ಚೀನಾ ವಿರೋಧದ ನಡುವೆಯೇ ಇರಾನ್ ತನ್ನ ಚಾಬಹರ್ ಬಂದರು ನಿಯಂತ್ರಣವನ್ನು ಭಾರತಕ್ಕೆ ಹಸ್ತಾಂತರ ಮಾಡಲಿದೆ.

ನವದೆಹಲಿ: ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಕಿಸ್ತಾನ ಮತ್ತು ಚೀನಾ ದೇಶಗಳಿಗೆ ಭಾರಿ ಹಿನ್ನಡೆಯಾಗಿದ್ದು, ಪಾಕ್, ಚೀನಾ ವಿರೋಧದ ನಡುವೆಯೇ ಇರಾನ್ ತನ್ನ ಚಾಬಹರ್ ಬಂದರು ನಿಯಂತ್ರಣವನ್ನು ಭಾರತಕ್ಕೆ ಹಸ್ತಾಂತರ ಮಾಡಲಿದೆ.
ಈ ಹಿಂದೆ ಭಾರತ ಮತ್ತು ಇರಾನ್ ಮಾಡಿಕೊಂಡಿದ್ದ ಚಾಬಹರ್ ಒಪ್ಪಂದದ ಅನ್ವಯ ಇನ್ನೊಂದು ತಿಂಗಳಲ್ಲಿ ಚಾಬಹರ್ ಬಂದರು ನಿಯಂತ್ರಣ ಭಾರತದ ಪಾಲಾಗಲಿದೆ. ಈ ಬಗ್ಗೆ ಭಾರತಕ್ಕೆ ಆಗಮಿಸಿರುವ ಇರಾನ್ ನ ಸಚಿವ ಅಬ್ಬಾಸ್ ಅಖೌಂಡಿ ಅವರು ಗುರುವಾರ ಹೇಳಿದ್ದಾರೆ. 
ನೀತಿ ಆಯೋಗದ ಆಹ್ವಾನದ ಮೇರೆಗೆ ಮೊಬಿಲಿಟಿ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಅಖೌಂಡಿ ಭಾರತಕ್ಕೆ ಆಗಮಿಸಿದ್ದು, ಈ ವೇಳೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿಚರ್ಚೆ ನಡೆಸಿದರು. ಈ ವೇಳೆ ಚಾಬಹರ್ ಬಂದರು ನಿಯಂತ್ರಣವನ್ನು ಭಾರತಕ್ಕೆ ನೀಡಲು ನಾವು ಸಿದ್ಧರಿದ್ದೇವೆ. ಇನ್ನೊಂದು ತಿಂಗಳಲ್ಲಿ ಈ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಒಪ್ಪಂದದ ಅನ್ವಯ ನಾವು ಕೂಡ ಭಾರತದ ಒಂದು ಬಂದರನ್ನು ಕಳೆದ ಒಂದೂವರೆ ವರ್ಷದಿಂದ ಬಳಕೆ ಮಾಡಿಕೊಳ್ಳುತ್ತಿದ್ದೆವೆ ಎಂದು ಅಖೌಂಡಿ ತಿಳಿಸಿದರು.
ಭಾರತದ ಪಶ್ಚಿಮ ಕರಾವಳಿಯಿಂದ ಚಾಬಹರ್ ಬಂದರು ನಿಯಂತ್ರಣ ಸುಲಭ ಸಾಧ್ಯ. ಅಲ್ಲದೆ ಈ ಬಂದರಿನ ಮೇಲೆ ನಿಯಂತ್ರಣ ಸಾಧಿಸಿದರೆ ಪಾಕಿಸ್ತಾನ ಮತ್ತು ಚೀನಾ ದೇಶಗಳಿಗೆ ಭಾರತ ದೊಡ್ಡ ಮಟ್ಟದಲ್ಲಿ ತಿರುಗೇಟು ನೀಡಿದಂತಾಗುತ್ತದೆ. ಅಲ್ಲದೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಪ್ರಾಬಲ್ಯ ಕೂಡ ಹೆಚ್ಚಿದಂತಾಗುತ್ತದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಕೇವಲ ಬಂದರು ಮಾತ್ರವಲ್ಲದೇ ಭಾರತ ಇರಾನ್ ನ ಬ್ಯಾಂಕಿಂಗ್ ವಲಯದಲ್ಲೂ ಭಾರಿ ಪ್ರಮಾಣದ ಹೂಡಿಕೆ ಮಾಡಿದ್ದು, ಇದಕ್ಕೆ ಇರಾನ್ ನ ಸೆಂಟ್ರಲ್ ಬ್ಯಾಂಕ್ ಕೂಡ ಅನುಮೋದನೆ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT