ಸಂಗ್ರಹ ಚಿತ್ರ 
ವಿದೇಶ

ರೊಹಿಂಗ್ಯಾ ಬಿಕ್ಕಟ್ಟನ್ನು ಇನ್ನಷ್ಟು ಉತ್ತಮವಾಗಿ ನಿರ್ವಹಿಸಬಹುದಿತ್ತು: ಆಂಗ್ ಸಾನ್ ಸೂಕಿ

ರೊಹಿಂಗ್ಯಾ ಬಿಕ್ಕಟ್ಟನ್ನು ಇನ್ನಷ್ಟು ಉತ್ತಮವಾಗಿ ನಿರ್ವಹಿಸಬಹುದಿತ್ತು ಎಂದು ಮಯನ್ಮಾರ್ ನಾಯಕಿ ಮತ್ತು ಖ್ಯಾತ ನೊಬೆಲ್ ಪ್ರಶಸ್ತಿ ವಿಜೇತೆ ಆಂಗ್ ಸಾನ್ ಸೂಕಿ ಹೇಳಿದ್ದಾರೆ.

ನೇಪಿಡಾ: ರೊಹಿಂಗ್ಯಾ ಬಿಕ್ಕಟ್ಟನ್ನು ಇನ್ನಷ್ಟು ಉತ್ತಮವಾಗಿ ನಿರ್ವಹಿಸಬಹುದಿತ್ತು ಎಂದು ಮಯನ್ಮಾರ್ ನಾಯಕಿ ಮತ್ತು ಖ್ಯಾತ ನೊಬೆಲ್ ಪ್ರಶಸ್ತಿ ವಿಜೇತೆ ಆಂಗ್ ಸಾನ್ ಸೂಕಿ ಹೇಳಿದ್ದಾರೆ.
ರೊಹಿಂಗ್ಯಾ ಬಿಕ್ಕಟ್ಟಿನ ಕುರಿತು ಇದೇ ಮೊದಲ ಬಾರಿಗೆ ಮಾತನಾಡಿರುವ ಆಂಗ್ ಸಾನ್ ಸೂಕಿ, ರೊಹಿಂಗ್ಯಾ ಬಿಕ್ಕಟ್ಟನ್ನು ಇನ್ನಷ್ಟು ಉತ್ತಮವಾಗಿ ನಿರ್ವಹಿಸಬಹುದಿತ್ತು. ಈ ಬಗ್ಗೆ ಸಾಕಷ್ಚು ಮಾರ್ಗಗಳು ಕೂಡ ಇದ್ದವು. ಆದರೆ ಯೋಚನೆ ಮಾಡುವಷ್ಟು ಸಮಯಾವಕಾಶವಿರಲಿಲ್ಲ ಎಂದು ಹೇಳಿದ್ದಾರೆ. ಇದೇ ವೇಳೆ ಮಯನ್ಮಾರ್ ಸೈನಿಕರ ವಿರುದ್ಧ ಕೇಳಿ ಬಂದಿರುವ ಹಿಂಸಾಚಾರ ಮತ್ತು ಸಾಮೂಹಿಕ ಲೈಂಗಿಕ ಕಿರುಕುಳ ದಂತಹ ಗಂಭೀರ ಆರೋಪಗಳನ್ನು ಸೂಕಿ ತಳ್ಳಿ ಹಾಕಿದ್ದು, ನಾವು ಪಾರದರ್ಶಕರವಾಗಿ ಕಾರ್ಯ ನಿರ್ವಹಿಸಿದ್ದೇವೆ. ಅಂತೆಯೇ ನಾವು ಎಲ್ಲ ವರ್ಗದ ಜನರಿಗೂ ನಿಷ್ಪಕ್ಷಪಾತ ನ್ಯಾಯ ಒದಗಿಸಬೇಕಿತ್ತು. ಹೀಗಾಗಿ ಕೆಲ ಕಠಿಣ ನಿರ್ಣಯಗಳು ಅನಿವಾರ್ಯವಾಗಿತ್ತು ಎಂದು ಹೇಳುವ ಮೂಲಕ ಸೂಕಿ ಮಯನ್ಮಾರ್ ಸೈನಿಕರ ಬೆನ್ನಿಗೆ ನಿಂತಿದ್ದಾರೆ.
ಕಾನೂನು ಮತ್ತು ದೇಶದ ನೀತಿ ನಿಯಮಾವಳಿಗಳು ಎಲ್ಲರಿಗೂ ಒಂದೇ.. ನಾನು ಇಂತವರಿಗೆ ಮಾತ್ರ ನಿಯಮ ಎಂದು ಆಯ್ಕೆ ಮಾಡಲು ಸಾಧ್ಯವಿಲ್ಲ. ದೇಶದ ಹಿತದೃಷ್ಟಿಯಿಂದ ಕಠಿಣ ಕ್ರಮ ಅನಿವಾರ್ಯವಾಗಿತ್ತು ಎಂದು ಸೂಕಿ ಹೇಳಿದ್ದಾರೆ.
ಇನ್ನು ರೊಹಿಂಗ್ಯಾ ಹಿಂಸಾಚಾರದ ಹಿನ್ನಲೆಯಲ್ಲಿ ಮಯನ್ಮಾರ್ ನ ರಾಖೀನ್ ರಾಜ್ಯದಲ್ಲಿ ಪರಿಸ್ಥಿತಿ ಅವಲೋಕನಕ್ಕ ನಿಯೋಜನೆಗೊಂಡಿದ್ದ ವಿಶ್ವಸಂಸ್ಥೆಯ ಸಮಿತಿಯೊಂದು ಎರಡು ವಾರಗಳ ಹಿಂದೆ ತನ್ನ ವರದಿ ನೀಡಿದ್ದು, ವರದಿಯಲ್ಲಿ ರೊಹಿಂಗ್ಯಾ ಮುಸ್ಲಿಮರ ಹೊರದೂಡಲು ಮಯನ್ಮಾರ್ ಸೈನಿಕರು ಹಿಂಸಾಚಾರ ನಡೆಸಿದ್ದರು. ಈ ವೇಳೆ ರೊಹಿಂಗ್ಯಾ ಮಹಿಳೆಯರ ಮೇಲಿನ ಸಾಮೂಹಿಕ ಅತ್ಯಾಚಾರ ದಂತಹ ಪ್ರಕರಣಗಳೂ ಹಿಂಸಾಚಾರ ಭಾಗವಾಗಿತ್ತು ಎಂದು ವರದಿ ನೀಡಲಾಗಿತ್ತು. ಈ ವರದಿ ಬಹಿರಂಗ ಬೆನ್ನಲ್ಲೇ ಮಯನ್ಮಾರ್ ಸೈನಿಕರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT