ಸಂಗ್ರಹ ಚಿತ್ರ 
ವಿದೇಶ

ಜೆಯುಡಿ, ಎಫ್ ಐಎಫ್ ಕಾರ್ಯಚಟುವಟಿಕೆ ಮುಂದುವರಿಕೆಗೆ ಪಾಕ್ 'ಸುಪ್ರೀಂ' ಆದೇಶ

ಮಹತ್ವದ ಬೆಳವಣಿಗೆಯಲ್ಲಿ ಉಗ್ರ ಹಫೀಜ್ ಸಯ್ಯೀದ್ ನೇತೃತ್ವದ ಜಮಾತ್ ಉದ್ ದವಾ (ಜೆಯುಡಿ) ಸೇರಿದಂತೆ ಹಲವು ಸಂಘಟನೆಗಳ ಕಾರ್ಯಚಟುವಟಿಕೆ ಮುಂದುವರಿಕೆಗೆ ಪಾಕಿಸ್ತಾನ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.

ಲಾಹೋರ್: ಮಹತ್ವದ ಬೆಳವಣಿಗೆಯಲ್ಲಿ ಉಗ್ರ ಹಫೀಜ್ ಸಯ್ಯೀದ್ ನೇತೃತ್ವದ ಜಮಾತ್ ಉದ್ ದವಾ (ಜೆಯುಡಿ) ಸೇರಿದಂತೆ ಹಲವು ಸಂಘಟನೆಗಳ ಕಾರ್ಯಚಟುವಟಿಕೆ ಮುಂದುವರಿಕೆಗೆ ಪಾಕಿಸ್ತಾನ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.
ಈ ಹಿಂದೆ ಮುಂಬೈ ದಾಳಿಯೂ ಸೇರಿದಂತೆ ಪಾಕಿಸ್ತಾನದಲ್ಲಿ ನಡೆದಿದ್ದ ವಿವಿಧ ಭಯೋತ್ಪಾದಕ ದಾಳಿಗಳಲ್ಲಿ ಹಫೀಜ್ ಸಯ್ಯೀದ್ ನ ಜೆಯುಡಿ ಹಸ್ತಕ್ಷೇಪ ಮತ್ತು ಉಗ್ರ ಚಟುವಟಿಕೆ ಹಿನ್ನಲೆಯಲ್ಲಿ ಪಾಕಿಸ್ತಾನ ಸರ್ಕಾರ ಜೆಯುಡಿ, ಎಫ್ ಐಎಫ್ ಸೇರಿದಂತೆ ಹಲವು ಸಂಘಟನೆಗಳ ಕಾರ್ಯಚಟುವಟಿಕೆ ಮೇಲೆ ನಿಷೇಧ ಹೇರಿತ್ತು. ಇದನ್ನು ಪ್ರಶ್ನಿಸಿ ಸಂಘಟನೆಗಳು ಲಾಹೋರ್ ಕೋರ್ಟ್ ಮೊರೆ ಹೋಗಿದ್ದವು. ಅದರಂತೆ ಲಾಹೋರ್ ಕೋರ್ಟ್ ಸೂಕ್ತ ಸಾಕ್ಷ್ಯಾಧಾರಗಳ ಕೊರತೆ ಹಿನ್ನಲೆಯಲ್ಲಿ ಸಂಘಟನೆಗಳ ಕಾರ್ಯ ಚಟುವಟಿಕೆ ಮುಂದುವರಿಕೆಗೆ ಆದೇಶ ನೀಡಿತ್ತು.
ಈ ಆದೇಶ ಪ್ರಶ್ನಿಸಿ ಪಾಕಿಸ್ತಾನ ಕೋರ್ಟ್ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಇಂದು ಈ ಪ್ರಕರಣದ ತೀರ್ಪು ನೀಡಿರುವ ಪಾಕಿಸ್ತಾನ ಸುಪ್ರೀಂ ಕೋರ್ಟ್ ಜೆಯುಡಿ ಮತ್ತು ಎಫ್ ಐಎಫ್ ಸಂಘಟನೆಗಳ ಕಾರ್ಯಚಟುವಟಿಕರೆ ಮುಂದುವರಿಕೆಗೆ ಆದೇಶ ನೀಡಿದೆ. ಆ ಮೂಲಕ ಪಾಕಿಸ್ತಾನ ಸರ್ಕಾರಕ್ಕೆ ತೀವ್ರ ಮುಖಭಂಗವಾದಂತಾಗಿದೆ.
ಇನ್ನು ಸುಪ್ರೀಂ ಆದೇಶ ಹೊರ ಬೀಳುತ್ತಿದ್ದಂತೆಯೇ ಸಂತಸ ವ್ಯಕ್ತಪಡಿಸಿರುವ ಜೆಯುಡಿ ಸಂಘಟನೆ, ಇದು ನ್ಯಾಯಕ್ಕೆ ಸಿಕ್ಕ ಗೆಲುವಾಗಿದ್ದು. ಸಂಘಟನೆ ಅಡಿಯಲ್ಲಿ 300 ಮದರಸಾಗಳು, ಶಾಲೆಗಳು, ಆಸ್ಪತ್ರೆಗಳು, ಮುದ್ರಣ ಸಂಸ್ಥೆ ಇದ್ಜು, ಪ್ರತ್ಯೇಕ ಆ್ಯಂಬುಲೆನ್ಸ್ ಸೇವೆ ಮತ್ತು 50 ಸಾವಿರಕ್ಕೂ ಅಧಿಕ ಸ್ವಯಂ ಸೇವಕರು ಕೂಡ ಸೇವೆ ಮಾಡುತ್ತಿದ್ದಾರೆ. ಸರ್ಕಾರದ ಪಕ್ಷಪಾತ ಧೋರಣೆಯಿಂದಾಗಿ ಇವುಗಳ ಕಾರ್ಯ ನಿರ್ವಹಣೆ ಕಷ್ಟಕರವಾಗಿತ್ತು. ಇದೀಗ ಸುಪ್ರೀಂ ಆದೇಶ ತಮಗೆ ಆನೆ ಬಲ ತಂದಿದೆ ಎಂದು ಜೆಯುಡಿ ವಕ್ತಾರರು ತಿಳಿಸಿದ್ದಾರೆ.
ಈ ಹಿಂದೆ ಇದೇ ಉಗ್ರ ಹಫೀಜ್ ಸಯ್ಯೀದ್ ಪಾಕಿಸ್ತಾನ ಸಾರ್ವತ್ರಿಕ ಚುನಾವಣೆಯಲ್ಲೂ ರಾಜಕೀಯ ಪಕ್ಷವೊಂದರ ಬೆಂಬಲದೊಂದಿಗೆ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ರಾಜಕೀಯದಲ್ಲೂ ಹಸ್ತಕ್ಷೇಪ ಮಾಡಿದ್ದ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

SCROLL FOR NEXT