ವಿವಿಐಪಿ ಚಾಪರ್ ಹಗರಣ: ಕ್ರಿಶ್ಚಿಯನ್‌ ಮೈಕಲ್‌ ಗಡೀಪಾರಿಗೆ ದುಬೈ ನ್ಯಾಯಾಲಯ ಆದೇಶಿಸಿಲ್ಲ! 
ವಿದೇಶ

ವಿವಿಐಪಿ ಚಾಪರ್ ಹಗರಣ: ಕ್ರಿಶ್ಚಿಯನ್‌ ಮೈಕಲ್‌ ಗಡೀಪಾರಿಗೆ ದುಬೈ ನ್ಯಾಯಾಲಯ ಆದೇಶಿಸಿಲ್ಲ!

ಬಹುಕೋಟಿ ವಿವಿಐಪಿ ಚಾಪರ್ ಹಗರಣಕ್ಕೆ ಸಂಬಂಧಿಸಿದಂತೆ ಭಾರತಕ್ಕೆ ಬೇಕಾಗಿರುವ ಬ್ರಿಟನ್ ಮೂಲದ ಮಧ್ಯವರ್ತಿ ಕ್ರಿಶ್ಚಿಯನ್‌ ಮೈಕಲ್‌ ಗಡಿಪಾರಿಗೆ ದುಬೈನ ಯಾವ ನ್ಯಾಯಾಲಯವೂ ಆದೇಶ ನೀಡಿಲ್ಲ.

ದುಬೈ: ಬಹುಕೋಟಿ ವಿವಿಐಪಿ ಚಾಪರ್ ಹಗರಣಕ್ಕೆ ಸಂಬಂಧಿಸಿದಂತೆ ಭಾರತಕ್ಕೆ ಬೇಕಾಗಿರುವ ಬ್ರಿಟನ್ ಮೂಲದ ಮಧ್ಯವರ್ತಿ ಕ್ರಿಶ್ಚಿಯನ್‌ ಮೈಕಲ್‌ ಗಡಿಪಾರಿಗೆ ದುಬೈನ ಯಾವ ನ್ಯಾಯಾಲಯವೂ ಆದೇಶ ನೀಡಿಲ್ಲ.
ಲಭ್ಯವಿರುವ ಮಾಹಿತಿಗಳ ಪ್ರಕಾರ, ಯುಎಇ ಸರ್ಕಾರವು ಓರ್ವ ಬ್ರಿಟೀಷ್ ನಾಗರಿಕನನ್ನು ಮೂರನೇ ರಾಷ್ಟ್ರವೊಂದಕ್ಕೆ ಗಡೀಪಾರು ಮಾಡಬಹುದೆ ಎಂದು ದುಬೈ ನ್ಯಾಯಾಲಯದಲ್ಲಿ ಪ್ರಶ್ನಿಸಿತ್ತು. ಇದಕ್ಕೆ ನ್ಯಾಯಾಲಯವು ತನ್ನ ಅಭಿಪ್ರಾಯವನ್ನಷ್ಟೇ ವ್ಯಕ್ತಪಡಿಸಿತ್ತು ಹೊರತು ಆದೇಶ ನಿಡಿರಲಿಲ್ಲ ಎನ್ನಲಾಗಿದೆ.
ಮಾದ್ಯಮಗಳ ವರದಿಯಂತೆ ಭಾರತಕ್ಕೆ ಮೈಕಲ್‌ ಹಸ್ತಾಂತರ ಕುರಿತು ಯಾವ ನ್ಯಾಯಾಲಯವೂ ಆದೇಶ ನೀಡಿಲ್ಲ  ಎಂದು ತಿಳಿದು ಬಂದಿದೆ.
ಈ ವಿಷಯಕ್ಕೆ ಸಂಬಂಧಿಸಿದ ಎಲ್ಲ ವಿವರಗಳನ್ನು ಖಚಿತಪಡಿಸಿಕೊಳ್ಳಲು ಭಾರತೀಯ  ವಿದೇಶಾಂಗ ವ್ಯವಹಾರಗಳ ಸಚಿವಾಲಯ ಯುಎಇಯಲ್ಲಿನ ತನ್ನ ದೂತಾವಾಸಕ್ಕೆ ನಿರ್ದೇಶನ ನೀಡಿದೆ.
ಮೈಕಲ್‌ ವಶಕ್ಕೆ ಸಂಬಂಧಿಸಿ ಯುಎಇಯ ಅಧಿಕಾರಿಗಳಿಂದ ಭಾರತ ಯಾವುದೇ ಅಧಿಕೃತ ಸಂವಹನವನ್ನು ಸ್ವೀಕರಿಸಲಿಲ್ಲ ಎಂದು ಸರ್ಕಾರದ ಮೂಲಗಳು ಹೇಳಿದೆ.
3,600 ಕೋಟಿ ರೂ. ಮೌಲ್ಯದ ಅಗಸ್ಟಾ ವೆಸ್ಟ್‌ಲ್ಯಾಂಡ್‌ ವಿವಿಐಪಿ ಚಾಪರ್ ಹಗರಣಕ್ಕೆ ಸಂಬಂಧಿಸಿದಂತೆ ಕ್ರಿಶ್ಚಿಯನ್‌ ಮೈಕಲ್‌ ಭಾರತಕ್ಕೆ ಬೇಕಾದ ವ್ಯಕ್ತಿಯಾಗಿದ್ದಾನೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT