ತಾಂಜೇನಿಯ ದೋಣಿ ದುರಂತ: 136 ಮಂದಿ ಸಾವು, ಹಲವರು ನಾಪತ್ತೆ 
ವಿದೇಶ

ತಾಂಜೇನಿಯ ದೋಣಿ ದುರಂತ: 136 ಮಂದಿ ಸಾವು, ಹಲವರು ನಾಪತ್ತೆ

ತಾಂಜೇನಿಯಾದ ವಿಕ್ಟೋರಿಯಾ ಸರೋವರದಲ್ಲಿ ಪ್ರಯಾಣಿಕರ ದೋಣಿಯೊಂದು ಮಗುಚಿದ ಕಾರಣ ಕನಿಷ್ಟ 136 ಜನ ಸಾವನ್ನಪ್ಪಿದ್ದಾರೆ.

ದಾರ್ ಏಸ್ ಸಲಾಮ್(ತಾಂಜೇನಿಯಾ): ತಾಂಜೇನಿಯಾದ ವಿಕ್ಟೋರಿಯಾ ಸರೋವರದಲ್ಲಿ ಪ್ರಯಾಣಿಕರ ದೋಣಿಯೊಂದು ಮಗುಚಿದ ಕಾರಣ ಕನಿಷ್ಟ 136 ಜನ ಸಾವನ್ನಪ್ಪಿದ್ದಾರೆ.
ನೀರಲ್ಲಿ ಮುಳುಗಿದವರ ಪತ್ತೆಗೆ ಪೋಲೀಸರು ಹಾಗೂ ಸೇನಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದು ಇದುವರೆಗೆ 136 ಮಂದಿಯ ಮೃತದೇಹ ಹೊರತೆಗೆಯಲಾಗಿದೆ. ಸಾವಿನ ಸಂಖ್ಯೆ ಇನ್ನೂ ಹೆಚುವ ಸಾಧ್ಯತೆ ಇದೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು 
ದೋಣಿಯಲ್ಲಿ ಸುಮಾರು 300ಪ್ರಯಾಣಿಕರು ಹಾಗೂ ಸರಕುಗಳನ್ನು ಸಾಗಣೆ ಮಾಡಲಾಗುತ್ತಿತು.ಗುರುವಾರ ಮಧ್ಯಾಹ್ನ ಉತಾರ ದ್ವೀಪದ ಹಡ್ಗುಕಟ್ಟೆಗೆ ೫೦ ಮೀ. ಅಂತರದಲ್ಲಿ ಮಗುಚಿದೆ.
ದುರಂತದ ಕುರಿತಂತೆ ತಾಂಜೇನಿಯಾ ಅಧ್ಯಕ್ಷ  ಜಾನ್ ಮಗುಫುಲಿ ನಾಲ್ಕು ದಿನಗಳ ಶೋಕಾಚರಣೆ ಘೊಷಿಸಿದ್ದಾರೆ. ಅಲ್ಲದೆ ಘಟನೆಯನ್ನು ರಾಜಕೀಯಕ್ಕೆ ಬಳಸಿಕೊಳ್ಲಬಾರದೆಂದು ಎಚ್ಚರಿಕೆ ನೀಡಿದ್ದಾರೆ.
ಗೊತ್ತುಪಡಿಸಿದ ಅಧಿಕಾರಿಗಳು ತನಿಖೆ ಕೈಗೊಳ್ಳುತ್ತಾರೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
`
ದುರಂತಕ್ಕೀಡಾದ ದೋಣಿಯಲ್ಲಿ ಬಾಳೆಗೊನೆ, ಮೆಕ್ಕೆಜೋಳ ಹಾಗೂ ಸಿಮೆಂಟ್ ಚೀಲಗಳನ್ನೂ ತುಂಬಲಾಗಿತ್ತು. ಅದರ ನೈಜ ಸಾಮರ್ಥ್ಯಕ್ಕಿಂತ ದುಪ್ಪಟ್ಟು ಭಾರ ಹೇರಲಾಗಿತ್ತು ಎನ್ನಲಾಗಿದೆ. ಆದರೆ ಘಟನೆಗೆ ನೈಜ ಕಾರಣ ಇನ್ನೂ ಪತ್ತೆಯಾಗಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT