ತಾಂಜೇನಿಯ ದೋಣಿ ದುರಂತ: 136 ಮಂದಿ ಸಾವು, ಹಲವರು ನಾಪತ್ತೆ 
ವಿದೇಶ

ತಾಂಜೇನಿಯ ದೋಣಿ ದುರಂತ: 136 ಮಂದಿ ಸಾವು, ಹಲವರು ನಾಪತ್ತೆ

ತಾಂಜೇನಿಯಾದ ವಿಕ್ಟೋರಿಯಾ ಸರೋವರದಲ್ಲಿ ಪ್ರಯಾಣಿಕರ ದೋಣಿಯೊಂದು ಮಗುಚಿದ ಕಾರಣ ಕನಿಷ್ಟ 136 ಜನ ಸಾವನ್ನಪ್ಪಿದ್ದಾರೆ.

ದಾರ್ ಏಸ್ ಸಲಾಮ್(ತಾಂಜೇನಿಯಾ): ತಾಂಜೇನಿಯಾದ ವಿಕ್ಟೋರಿಯಾ ಸರೋವರದಲ್ಲಿ ಪ್ರಯಾಣಿಕರ ದೋಣಿಯೊಂದು ಮಗುಚಿದ ಕಾರಣ ಕನಿಷ್ಟ 136 ಜನ ಸಾವನ್ನಪ್ಪಿದ್ದಾರೆ.
ನೀರಲ್ಲಿ ಮುಳುಗಿದವರ ಪತ್ತೆಗೆ ಪೋಲೀಸರು ಹಾಗೂ ಸೇನಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದು ಇದುವರೆಗೆ 136 ಮಂದಿಯ ಮೃತದೇಹ ಹೊರತೆಗೆಯಲಾಗಿದೆ. ಸಾವಿನ ಸಂಖ್ಯೆ ಇನ್ನೂ ಹೆಚುವ ಸಾಧ್ಯತೆ ಇದೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು 
ದೋಣಿಯಲ್ಲಿ ಸುಮಾರು 300ಪ್ರಯಾಣಿಕರು ಹಾಗೂ ಸರಕುಗಳನ್ನು ಸಾಗಣೆ ಮಾಡಲಾಗುತ್ತಿತು.ಗುರುವಾರ ಮಧ್ಯಾಹ್ನ ಉತಾರ ದ್ವೀಪದ ಹಡ್ಗುಕಟ್ಟೆಗೆ ೫೦ ಮೀ. ಅಂತರದಲ್ಲಿ ಮಗುಚಿದೆ.
ದುರಂತದ ಕುರಿತಂತೆ ತಾಂಜೇನಿಯಾ ಅಧ್ಯಕ್ಷ  ಜಾನ್ ಮಗುಫುಲಿ ನಾಲ್ಕು ದಿನಗಳ ಶೋಕಾಚರಣೆ ಘೊಷಿಸಿದ್ದಾರೆ. ಅಲ್ಲದೆ ಘಟನೆಯನ್ನು ರಾಜಕೀಯಕ್ಕೆ ಬಳಸಿಕೊಳ್ಲಬಾರದೆಂದು ಎಚ್ಚರಿಕೆ ನೀಡಿದ್ದಾರೆ.
ಗೊತ್ತುಪಡಿಸಿದ ಅಧಿಕಾರಿಗಳು ತನಿಖೆ ಕೈಗೊಳ್ಳುತ್ತಾರೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
`
ದುರಂತಕ್ಕೀಡಾದ ದೋಣಿಯಲ್ಲಿ ಬಾಳೆಗೊನೆ, ಮೆಕ್ಕೆಜೋಳ ಹಾಗೂ ಸಿಮೆಂಟ್ ಚೀಲಗಳನ್ನೂ ತುಂಬಲಾಗಿತ್ತು. ಅದರ ನೈಜ ಸಾಮರ್ಥ್ಯಕ್ಕಿಂತ ದುಪ್ಪಟ್ಟು ಭಾರ ಹೇರಲಾಗಿತ್ತು ಎನ್ನಲಾಗಿದೆ. ಆದರೆ ಘಟನೆಗೆ ನೈಜ ಕಾರಣ ಇನ್ನೂ ಪತ್ತೆಯಾಗಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್ ಶಾಕ್: ಪ್ರದೋಷ್‌ ಮಾಫಿ ಸಾಕ್ಷಿಗೆ ಕೋರ್ಟ್‌ ಅಸ್ತು

ಪ್ರತಿಪಕ್ಷಗಳು ಸಂಪುಟದಿಂದ ವಜಾಕ್ಕೆ ಆಗ್ರಹಿಸುತ್ತಿರುವ ಮಧ್ಯೆ ಸಚಿವ ಬಿ. ನಾಗೇಂದ್ರಗೆ ಹೈಕೋರ್ಟ್ ಬಿಗ್ ರಿಲೀಫ್!

ಸಂಪುಟ ವಿಸ್ತರಣೆ ಮುನಿಸು ಕೊನೆಗೂ ಶಮನ: ರಾಜೀನಾಮೆ ವಾಪಸ್ ಪಡೆದ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್

ರಾಜ್‌ಗಢದಲ್ಲಿ ಭಾರೀ ಮಳೆ: 11 ಪ್ರಯಾಣಿಕರ ಸಮೇತ ಚರಂಡಿಯಲ್ಲಿ ಕೊಚ್ಚಿ ಹೋದ ವ್ಯಾನ್; 9 ಮಂದಿ ಸಾವು!

ದೇಶದ ಅತ್ಯಂತ ದುಬಾರಿ ಪೆಂಟ್‌ಹೌಸ್! ಈ ಐಷಾರಾಮಿ ಮನೆ 271 ಕೋಟಿಗೆ ಮಾರಾಟ!