ಸಂಗ್ರಹ ಚಿತ್ರ 
ವಿದೇಶ

ಯುದ್ಧಕ್ಕೆ ಸಿದ್ಧ, ಆದರೂ ಜನರ ಹಿತಾಸಕ್ತಿಗಾಗಿ ಶಾಂತಿ ಮಾರ್ಗ ಅನುಸರಿಸುತ್ತೇವೆ: ರಾವತ್ ಹೇಳಿಕೆಗೆ ಪಾಕಿಸ್ತಾನ

ಜಮ್ಮು-ಕಾಶ್ಮೀರದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರರು ಮೂವರು ಪೊಲೀಸರನ್ನು ಮನೆಗಳಿಗೇ ನುಗ್ಗಿ ಗುಂಡಿಟ್ಟು ಕೊಂದ ಘಟನೆ ಬೆನ್ನಲ್ಲೇ ಭಾರತ ಹಾಗೂ ಪಾಕಿಸ್ತಾನಗಳು ಮತ್ತೆ ಯುದ್ಧದ ಮಾತು ಆರಂಭಿಸಿವೆ...

ಇಸ್ಲಾಮಾಬಾದ್: ಜಮ್ಮು-ಕಾಶ್ಮೀರದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರರು ಮೂವರು ಪೊಲೀಸರನ್ನು ಮನೆಗಳಿಗೇ ನುಗ್ಗಿ ಗುಂಡಿಟ್ಟು ಕೊಂದ ಘಟನೆ ಬೆನ್ನಲ್ಲೇ ಭಾರತ ಹಾಗೂ ಪಾಕಿಸ್ತಾನಗಳು ಮತ್ತೆ ಯುದ್ಧದ ಮಾತು ಆರಂಭಿಸಿವೆ. 
ಘಟನೆ ಬಗ್ಗೆ ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು ನಿನ್ನೆಯಷ್ಟೇ ತೀವ್ರವಾಗಿ ಕಿಡಿಕಾರಿದ್ದರು. ಕಾಶ್ಮೀರದಲ್ಲಿ ಅನಾಗರೀಕ ಕೃತ್ಯಗಳನ್ನು ಪ್ರಚೋದಿಸುತ್ತಿರುವ ಪಾಕಿಸ್ತಾನ ಸೇನೆ ಹಾಗೂ ಉಗ್ರರಿಗೆ ತಿರುಗೇಟು ನೀಡುವ ಸಮಯ ಇದೀಗ ಬಂದಿದೆ ಎಂದು ಹೇಳಿದ್ದರು. 
ಕಣವೆ ರಾಜ್ಯಾದಾದ್ಯಂತ ಬರ್ಬರ ಕೃತ್ಯಗಳನ್ನು ಎಸಗುತ್ತಿರುವ ಪಾಕಿಸ್ತಾನ ಸೇನೆ ಹಾಗೂ ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಸಮಯ ಬಂದಿದೆ. ಆದರೆ, ಅವರು ಹಿಡಿದ ಮಾರ್ಗ ಅನಾಗರಿಕ ಮಾರ್ಗ ನಾವು ಹಿಡಿಯಲ್ಲ. ಆದಾಗ್ಯೂ, ಅವರಿಗೆ ತಕ್ಕ ಪ್ರತಿಕ್ರಿಯೆ ನೀಡಲಾಗುತ್ತದೆ ನಾವು ಅನುಭವಿಸಿದ ನೋವನ್ನು ಅವರು ಅನುಭವಿಸಬೇಕು ಎಂದು ಗುಡುಗಿದ್ದರು. 
ಈ ಹೇಳಿಕೆಗೆ ಇದೀಗ ಪ್ರತಿಕ್ರಿಯೆ ನೀಡಿರುವ ಪಾಕಿಸ್ತಾನ ಸೇನಾ ವಕ್ತಾರ ಆಸೀಫ್ ಗಫೂರ್ ಅವರು, ಭಾರತದ ವಿರುದ್ಧದ ಯುದ್ಧಕ್ಕೆ ನಾವೂ ಸಿದ್ಧ. ಆದರೆ, ಜನರ ಹಿತಾಸಕ್ತಿಗಾಗಿ ಶಾಂತಿ ಮಾರ್ಗವನ್ನು ಅನುಸರಿಸುತ್ತೇವೆಂದು ಹೇಳಿದ್ದಾರೆ. 
ಅತೀ ದೀರ್ಘಕಾಲೀನವಾಗಿ ಭಯೋತ್ಪಾದನೆ ವಿರುದ್ಧ ಪಾಕಿಸ್ತಾನ ಹೋರಾಡುತ್ತಿದೆ. ನಮಗೆ ಶಾಂತಿಯ ಮೌಲ್ಯ ತಿಳಿದಿದೆ. ನಮ್ಮ ಶಾಂತಿ ಪಾಲನೆಂಯೇ ದೌರ್ಬಲ್ಯವೆಂದು ಭಾವಿಸಿದ್ದಲ್ಲಿ ಅದು ತಪ್ಪು. ನಮ್ಮದು ಅಣ್ವಸ್ತ್ರ ರಾಷ್ಟ್ರ. ನಾವೂ ಯುದ್ಧಕ್ಕೆ ಸಿದ್ಧ ಎಂದು ಹೇಳಿಕೊಂಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT