ಸಂಗ್ರಹ ಚಿತ್ರ 
ವಿದೇಶ

ಐದು ಕೋಟಿ ಫೇಸ್ ಬುಕ್‌ ಖಾತೆಗಳು ಹ್ಯಾಕ್‌?: ಪಾಸ್ ವರ್ಡ್ ಬದಲಿಸುವ ಅಗತ್ಯವಿಲ್ಲ ಎಂದ ಜುಕರ್ ಬರ್ಗ್!

ಖ್ಯಾತ ಸಾಮಾಜಿಕ ಜಾಲತಾಣ ಫೇಸ್ ಬುಕ್ ನ ಸುಮಾರು 5 ಕೋಟಿಗೂ ಅಧಿಕ ಬಳಕೆದಾರರ ಖಾತೆಗಳು ಹ್ಯಾಕ್ ಆಗಿರುವ ಸಾಧ್ಯತೆಗಳಿವೆ ಎಂಬ ಸುದ್ದಿ ಬೆನ್ನಲ್ಲೇ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಫೇಸ್ ಬುಕ್ ಸಂಸ್ಥಾಪಕ ಮಾರ್ಕ್ ಜುಕರ್ ಬರ್ಗ್ ಪಾಸ್ ವರ್ಡ್ ಗಳ ಬದಲಿಸುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ನವದೆಹಲಿ: ಖ್ಯಾತ ಸಾಮಾಜಿಕ ಜಾಲತಾಣ ಫೇಸ್ ಬುಕ್ ನ ಸುಮಾರು 5 ಕೋಟಿಗೂ ಅಧಿಕ ಬಳಕೆದಾರರ ಖಾತೆಗಳು ಹ್ಯಾಕ್ ಆಗಿರುವ ಸಾಧ್ಯತೆಗಳಿವೆ ಎಂಬ ಸುದ್ದಿ ಬೆನ್ನಲ್ಲೇ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಫೇಸ್ ಬುಕ್ ಸಂಸ್ಥಾಪಕ ಮಾರ್ಕ್ ಜುಕರ್ ಬರ್ಗ್ ಪಾಸ್ ವರ್ಡ್ ಗಳ ಬದಲಿಸುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಈ ಬಗ್ಗೆ ಖುದ್ದು ಫೇಸ್ ಬುಕ್ ಸಂಸ್ಥೆ ಹೇಳಿಕೆ ನೀಡಿದ್ದು, ಸುಮಾರು ಐದು ಕೋಟಿಗೂ ಅಧಿಕ ಬಳಕೆದಾರರ ಖಾತೆಗಳಲ್ಲಿ ಭದ್ರತಾ ಸಮಸ್ಯೆಯನ್ನು ಪತ್ತೆ ಹಚ್ಚಲಾಗಿದೆ ಎಂದು ಹೇಳಿಕೆ ನೀಡಿದೆ. 
ಈ ಬಗ್ಗೆ ಫೇಸ್ ಬುಕ್ ಸಂಸ್ಥೆ ಶುಕ್ರವಾರ ಹೇಳಿಕೆ ಬಿಡುಗಡೆ ಮಾಡಿದ್ದು, 'ಫೇಸ್‌ಬುಕ್‌ನ 'ವ್ಯೂವ್‌ ಆ್ಯಸ್‌' ಎಂಬ ಫೀಚರ್‌ ಅನ್ನು ಹ್ಯಾಕರ್‌ಗಳು ಕದ್ದಿರುವ ಶಂಕೆ ಇದೆ. ಇದರಿಂದ ಹ್ಯಾಕರ್ ಗಳು ಸುಲಭವಾಗಿ ಜನರ ಖಾತೆಗಳನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳಬಹುದು. ಈಗ ತಾನೇ ಈ ನಿಟ್ಟಿನಲ್ಲಿ ಪರಿಶೀಲನೆ ನಡೆಸುತ್ತಿದ್ದೇವೆ. ಫೇಸ್‌ಬುಕ್‌ ಖಾತೆಗಳು ದುರುಪಯೋಗವಾಗಿದೆಯೇ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದೆ.
ಅಂತೆಯೇ ಇದೇ ವಿಚಾರವಾಗಿ ಫೇಸ್ ಬುಕ್ ಸಂಸ್ಥೆಯ ಸಂಸ್ಥಾಪಕ ಮಾರ್ಕ್ ಜುಕರ್ ಬರ್ಗ್ ಕೂಡ ಆತಂಕ ವ್ಯಕ್ತಪಡಿಸಿದ್ದು, ಬಳಕೆದಾರರು ತಮ್ಮ ಪ್ರೊಫೈಲ್‌ ಇತರರಿಗೆ ಹೇಗೆ ಕಾಣಲಿದೆ ಎಂಬುದನ್ನು ವೀಕ್ಷಿಸಲು 'ವ್ಯೂವ್‌ ಆ್ಯಸ್‌' ಫೀಚರ್‌ ಇದೆ. ಆದರೆ ಇದನ್ನು ಹ್ಯಾಕ್ ಮಾಡಿರುವ ಶಂಕೆ ಇದೆ. ಆದರೆ ಬಳಕೆದಾರರು ಆತಂಕ ಪಡುವ ಅಗತ್ಯವಿಲ್ಲ. ಖಾತೆಯ ಪಾಸ್ ವರ್ಡ್ ಗಳನ್ನೂ ಬದಲಿಸುವ ಅಗತ್ಯವಿಲ್ಲ ಎಂದು ಜುಕರ್ ಬರ್ಗ್ ಹೇಳಿದ್ದಾರೆ.
ಇದೇ ವೇಳೆ ತಾವು ಈ ಸಂಬಂಧ ಎಫ್ ಬಿಐ ನಿರಂತರ ಸಂಪರ್ಕದಲ್ಲಿದ್ದು, ಹ್ಯಾಕರ್ ಗಳ ಕುರಿತು ಮಾಹಿತಿ ಕಲೆ ಹಾಕುತ್ತಿದ್ದೇವೆ ಎಂದು ಹೇಳಿದ್ದಾರೆ. ಅಂತೆಯೇ ಭದ್ರತಾ ಲೋಪದ ಕುರಿತು ಸಂಸ್ಥೆಯಲ್ಲೇ ಆಂತರಿಕ ತನಿಖೆ ಕೂಡ ನಡೆಸಲಾಗುತ್ತಿದೆ ಎಂದು ಅವರು ಸ್ಪಷ್ಟ ಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

"ಕೇಸರಿ ಧರಿಸುವ ಯೋಗ ಗುರು ಸಭ್ಯತೆಯ ಎಲ್ಲಾ ಮಿತಿಗಳನ್ನು ಮೀರಿದ್ದಾರೆ": ಬಾಬಾ ರಾಮ್‌ದೇವ್ ವಿರುದ್ಧ ಕಂಗನಾ ಮತ್ತೆ ಕಿಡಿ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!