ಯುವತಿ ನುಸ್ರತ್ ಜಹಾನ್ ರಫಿ ಹತ್ಯೆ ಖಂಡಿಸಿ ಬಾಂಗ್ಲಾ ಮಹಿಳೆಯರ ಪ್ರತಿಭಟನೆ 
ವಿದೇಶ

ಬಾಂಗ್ಲಾದೇಶ: ಲೈಂಗಿಕ ಕಿರುಕುಳ ನೀಡಿದ್ದ ಶಿಕ್ಷಕನ ಆದೇಶದ ಮೇರೆಗೆ ವಿದ್ಯಾರ್ಥಿನಿಯ ಸಜೀವ ದಹನ

ತನಗೆ ಶಾಲೆಯ ಮುಖ್ಯೋಪಾಧ್ಯಾಯ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ದೂರು ನೀಡಿದ ...

ಢಾಕಾ; ತನಗೆ ಶಾಲೆಯ ಮುಖ್ಯೋಪಾಧ್ಯಾಯ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ದೂರು ನೀಡಿದ ಯುವತಿಯನ್ನು ಬೆಂಕಿಯಿಂದ ಸುಟ್ಟು ಕೊಂದುಹಾಕಿದ ಬೆಚ್ಚಿಬೀಳಿಸುವ ಘಟನೆ ಮುಸ್ಲಿಂ ರಾಷ್ಟ್ರ ಬಾಂಗ್ಲಾದೇಶದಲ್ಲಿ ನಡೆದಿದೆ.
19 ವರ್ಷದ ನುಸ್ರತ್ ಜಹಾನ್ ರಫಿಯ ಸಾವು ಕಳೆದ ವಾರ ದಕ್ಷಿಣ ಏಷ್ಯಾದಲ್ಲಿ ವ್ಯಾಪಕ ಖಂಡನೆಗೆ ಕಾರಣವಾಗಿತ್ತು. ಸಾವಿನ ಹಿಂದೆ ಭಾಗಿಯಾದ ಎಲ್ಲರನ್ನೂ ಶಿಕ್ಷಿಸುವುದಾಗಿ ಪ್ರಧಾನ ಮಂತ್ರಿ ಭರವಸೆ ನೀಡಿದ್ದರು.
ತನ್ನ ವಿರುದ್ಧ ಪೊಲೀಸರಿಗೆ ನೀಡಿದ್ದ ಲೈಂಗಿಕ ಕಿರುಕುಳ ದೂರನ್ನು  ಹಿಂತೆಗೆದುಕೊಳ್ಳುವಂತೆ ನುಸ್ರತ್ ರಫಿ ವಿರುದ್ಧ ಶಿಕ್ಷಕ ಮತ್ತು ಆತನ ಬೆಂಬಲಿಗರು ಒತ್ತಡ ಹೇರಿದ್ದರು. ಆದರೆ ನುಸ್ರತ್ ನಿರಾಕರಿಸಿದಾಗ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಸುಟ್ಟುಹಾಕಲಾಗಿದೆ.
ಘಟನೆಗೆ ಸಂಬಂಧಪಟ್ಟಂತೆ ಇಂದು ಬಂದಿತರಾಗಿರುವ 17 ಮಂದಿ ಪೊಲೀಸರಿಗೆ ನೀಡಿರುವ ಹೇಳಿಕೆಯಲ್ಲಿ ಪ್ರಾಂಶುಪಾಲರ ಆದೇಶದ ಮೇರೆಗೆ ಆಕೆಯನ್ನು ಕೊಂದಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ನುಸ್ರತ್ ರಫಿ ಕೇಸನ್ನು ಹಿಂತೆಗೆದುಕೊಳ್ಳುವಂತೆ ಒತ್ತಡ ಹೇರಬೇಕೆಂದು, ನಿರಾಕರಿಸಿದರೆ ಕೊಂದು ಹಾಕುವಂತೆ ಮುಖ್ಯ ಶಿಕ್ಷಕ ತನ್ನ ಬೆಂಬಲಿಗರಿಗೆ ಆದೇಶ ನೀಡಿದ್ದ ಎಂದು ಹಿರಿಯ ಪೊಲೀಸ್ ಅಧಿಕಾರಿ ಮೊಹಮ್ಮದ್ ಇಕ್ಬಾಲ್ ತಿಳಿಸಿದ್ದಾರೆ.
ಮದರಸಾದಲ್ಲಿ ಕಲಿಯುತ್ತಿದ್ದ ನುಸ್ರತ್‌ ಜಹಾನ್‌ ರಫಿ ಎಂಬ 19 ವರ್ಷದ ಯುವತಿ, ತನ್ನ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ವಿರುದ್ಧ ದೂರು ನೀಡಿದ್ದಳು. ದುರ್ದೈವ ಎಂದರೆ ಸಂತ್ರಸ್ತ ಹುಡುಗಿಯ ನೆರವಿಗೆ ಬರಬೇಕಾದವರು, ಮದರಸಾದ ಘನತೆಗೆ ಧಕ್ಕೆ ತಂದಿದ್ದಾಳೆ ಎಂದು ಸೀಮೆಯೆಣ್ಣೆ ಸುರಿದು ಬೆಂಕಿ ಹಚ್ಚಿ ಹತ್ಯೆ ಮಾಡಿದ್ದಾರೆ. ಈ ಘಟನೆ ಧರ್ಮದ ಕಪಿಮುಷ್ಠಿಯಲ್ಲಿ ನಲುಗುತ್ತಿರುವ ಬಾಂಗ್ಲಾದೇಶದಂತಹ ರಾಷ್ಟ್ರಗಳಲ್ಲಿ ಹೆಣ್ಣಿನ ದಯನೀಯ ಸ್ಥಿತಿಯನ್ನು ಜಗತ್ತಿಗೆ ಸಾರುತ್ತಿದೆ.
ಕಳೆದ ಮಾರ್ಚ್‌ 27ರಂದು ವಿದ್ಯಾರ್ಥಿಯನ್ನು ಕಚೇರಿಗೆ ಕರೆಸಿಕೊಂಡ ಹೆಡ್‌ಮಾಸ್ಟರ್‌ ಲೈಂಗಿಕ ಕಿರುಕುಳ ನೀಡಿದ್ದಾನೆ. ಮುಂದಿನ ಅನಾಹುತವನ್ನು ಅರಿತ ವಿದ್ಯಾರ್ಥಿನಿ ಆತನಿಂದ ತಪ್ಪಿಸಿಕೊಂಡು ಓಡಿ ಹೋಗಿದ್ದಾಳೆ. ಮದರಸಾದಲ್ಲಿ ನಡೆದ ಘಟನೆಯನ್ನು ಪೋಷಕರಿಗೆ ವಿವರಿಸಿದ್ದಾಳೆ. ಹತ್ತಿರದ ಪೊಲೀಸ್‌ ಠಾಣೆಗೆ ಪೋಷಕರ ಸಮೇತ ಹೋಗಿ ಹೆಡ್‌ಮಾಸ್ಟರ್‌ ವಿರುದ್ಧ ದೂರು ನೀಡಲು ಯತ್ನಿಸಿದ್ದಾಳೆ. ದೂರು ದಾಖಲಿಸಿಕೊಳ್ಳದ ಪೊಲೀಸರು ಆಕೆಯ ವಿರುದ್ಧವೇ ದೌರ್ಜನ್ಯ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT