ಸಂಗ್ರಹ ಚಿತ್ರ 
ವಿದೇಶ

ಶ್ರೀಲಂಕಾ ಸರಣಿ ಬಾಂಬ್ ಸ್ಫೋಟ: ಮಂಗಳೂರು ಮಹಿಳೆ ಸೇರಿ 3 ಭಾರತೀಯರ ಸಾವು!

ಶ್ರೀಲಂಕಾದಲ್ಲಿ ನಡೆದ ಭೀಕರ ಸರಣಿ ಬಾಂಬ್ ಸ್ಫೋಟದಲ್ಲಿ ಮಂಗಳೂರಿನ ಮಹಿಳೆ ಸೇರಿ ಮೂವರು ಭಾರತೀಯರು ಮೃತಪಟ್ಟಿದ್ದಾರೆ.

ಮಂಗಳೂರು/ಕೊಲಂಬೋ: ಶ್ರೀಲಂಕಾದಲ್ಲಿ ನಡೆದ ಭೀಕರ ಸರಣಿ ಬಾಂಬ್ ಸ್ಫೋಟದಲ್ಲಿ ಮಂಗಳೂರಿನ ಮಹಿಳೆ ಸೇರಿ ಮೂವರು ಭಾರತೀಯರು ಮೃತಪಟ್ಟಿದ್ದಾರೆ. 
ಬೈಕಂಪಾಡಿ ಮೂಲದ ಕುಕ್ಕಾಡಿಯ ರಝೀನಾ ಖಾದರ್ ಕುಕ್ಕಾಡಿ ಮೃತ ದುರ್ದೈವಿ. ಇನ್ನು ಇಬ್ಬರು ಭಾರತೀಯರು ಮೃತಪಟ್ಟಿದ್ದಾರೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಹೇಳಿದ್ದಾರೆ. 
ಕ್ರಿಶ್ಚಿಯನ್ನರ  ಪವಿತ್ರ ದಿನವಾದ ಇಂದು ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ರಕ್ತದೋಕುಳಿ ಹರಿದಿದೆ.ಎಂಟು ಕಡೆ ನಡೆದ ಆತ್ಮಾಹುತಿ ಬಾಂಬರ್ ದಾಳಿಯಿಂದಾಗಿ  35 ವಿದೇಶಿಯರು ಸೇರಿದಂತೆ 207 ಜನರು ಮೃತಪಟ್ಟಿದ್ದಾರೆ. 400 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ನ್ಯೂಸ್ ಏಜೆನ್ಸಿ ಎಎಫ್ ಪಿ ವರದಿ ಮಾಡಿದೆ.
ಬಹುತೇಕ ಆತ್ಮಾಹುತಿ ಬಾಂಬರ್ ದಾಳಿಯಾಗಿದ್ದು, ಈ ದಾಳಿಯ ಹಿಂದೆ ಉಗ್ರರ ಕೈವಾಡದ ಶಂಕೆ ವ್ಯಕ್ತವಾಗಿದ್ದು, ಏಳು ಮಂದಿ ಶಂಕಿತ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಶ್ರೀಲಂಕಾ ರಕ್ಷಣಾ ಸಚಿವ ರುವಾನ್ ವಿಜೆವರ್ದನೆ  ತಿಳಿಸಿದ್ದಾರೆ.
ಕೊಲಂಬೊದಲ್ಲಿನ ಮೂರು ಹೋಟೆಲ್ ಹಾಗೂ ಚರ್ಚ್ ನಲ್ಲಿ ಮೊದಲ ಬಾಂಬ್ ಸ್ಟೋಟಿಸಿದ್ದರೆ, ಕೊಲಂಬೊ ಹೊರವಲಯದಲ್ಲಿನ ಇನ್ನಿತರ ಎರಡು ಚರ್ಚ್ ಗಳಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯುತ್ತಿದ್ದಾಗ ಬಾಂಬ್ ಸ್ಟೋಟಿಸಿದೆ. ತದನಂತರ ದಾಹಿವಾಲಾದಲ್ಲಿನ ರಾಷ್ಟ್ರೀಯ ಪ್ರಾಣಿ ಸಂಗ್ರಹಾಲಯದಲ್ಲಿನ ಎದುರುಗಡೆಯ ಹೋಟೆಲ್ ನಲ್ಲಿ ಮತ್ತೊಂದು ಬಾಂಬ್ ಸ್ಟೋಟಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT