ಶ್ರೀಲಂಕಾ ಚರ್ಚ್ ಮೇಲೆ ಭೀಕರ ಸರಣಿ ಬಾಂಬ್ ದಾಳಿ 
ವಿದೇಶ

ಶ್ರೀಲಂಕಾ ಚರ್ಚ್ ಮೇಲೆ ಭೀಕರ ಸರಣಿ ಬಾಂಬ್ ದಾಳಿ: 10 ದಿನಗಳ ಮೊದಲೇ ದಾಳಿ ಕುರಿತು ಎಚ್ಚರಿಕೆ ನೀಡಿದ್ದ ಪೊಲೀಸ್ ಮುಖ್ಯಸ್ಥ!

ಈಸ್ಟರ್ ಸಂಡೇ ದಿನ ಶ್ರೀಲಂಕಾದ ಮೂರು ಚರ್ಚ್ ಗಳಲ್ಲಿ ಬಾಂಬ್ ದಾಳಿಗಳಾಗಿದ್ದು 137 ಜನರು ಸಾವಿಗೀಡಾಗಿದ್ದಾರೆ. ಇದರ ಬೆನ್ನಲ್ಲೇ ಸ್ಪೋಟಕ ಮಾಹಿತಿಯೊಂದು ಹೊರಬಂದಿದ್ದು ಹತ್ತು ದಿನಗಳ ಹಿಂದೆಯೇ ....

ಕೊಲಂಬೋ: ಈಸ್ಟರ್ ಸಂಡೇ ದಿನ ಶ್ರೀಲಂಕಾದ ಮೂರು ಚರ್ಚ್ ಗಳಲ್ಲಿ ಬಾಂಬ್ ದಾಳಿಗಳಾಗಿದ್ದು 137 ಜನರು ಸಾವಿಗೀಡಾಗಿದ್ದಾರೆ. ಇದರ ಬೆನ್ನಲ್ಲೇ ಸ್ಪೋಟಕ ಮಾಹಿತಿಯೊಂದು ಹೊರಬಂದಿದ್ದು ಹತ್ತು ದಿನಗಳ ಹಿಂದೆಯೇ ಶ್ರೀಲಂಕಾದ ಪಾರಂಪರಿಕ ಚರ್ಚ್ ಗಳ ಮೇಲೆ ಬಾಂಬ್ ದಾಳಿ ನಡೆಯಲಿದೆ ಎಂದು ಶ್ರೀಲಂಕಾದ ಪೊಲೀಸ್ ಮುಖ್ಯಸ್ಥ ಎಚ್ಚರಿಕೆ ನೀಡಿದ್ದರು.
ಪೊಲೀಸ್ ಮುಖ್ಯಸ್ಥ ಪೂಜೂತ್ ಜಯಸುಂದರ  ಅವರು ಏಪ್ರಿಲ್ 11ರಂದು ಶ್ರೀಲಂಕಾದ  ಉನ್ನತ ತನಿಖಾಧಿಕಾರಿಗಳಿಗೆ ಈ ಕುರಿತು ಎಚ್ಚರಿಕೆ ನೀಡಿದ್ದರು ಎಂದು ಎ.ಎಫ್.ಪಿ ಸುದ್ದಿಸಂಸ್ಥೆ ವರದಿ ಮಾಡಿದೆ.
"ಪ್ರಮುಖ ಚರ್ಚುಗಳು ಮತ್ತು ಕೊಲಂಬೋದಲ್ಲಿನ ಭಾರತೀಯ  ಹೈಕಮಿಷನರ್ ಕಛೇರಿಯನ್ನು ಗುರಿಯಾಗಿಟ್ಟು  ಆತ್ಮಹತ್ಯೆ ದಾಳಿಯನ್ನು ನಡೆಸಲು ಎನ್.ಟಿ.ಜೆ (ನ್ಯಾಷನಲ್ ಥೌಹೀತ್ ಜಮಾಥ್) ಸಂಘಟನೆ ಯೋಜಿಸುತ್ತಿದೆ ಎಂದು ಒಂದು ವಿದೇಶಿ ಗುಪ್ತಚರ ಸಂಸ್ಥೆ ವರದಿ ಮಾಡಿದೆ" ಎಂದು ಜಯಸುಂದರ ಎಚ್ಚರಿಕೆ ನೀಡಿದ್ದರು.
ಎನ್ ಟಿಜೆ ಶ್ರೀಲಂಕಾದಲ್ಲಿನ ಒಂದು ಮೂಲಭೂತವಾದಿ ಮುಸ್ಲಿಂ ಸಂಘಟನೆಯಾಗಿದ್ದು ಅದು ಬೌದ್ಧ ಪ್ರತಿಮೆಗಳ ನಾಶದ ಘಟನೆ ನಡೆದಾಗ ಜಗತ್ತಿನ ಗಮನ ಸೆಳೆದಿತ್ತು..

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

SCROLL FOR NEXT