ಸ್ಫೋಟಗೊಂಡ ಸ್ಥಳ 
ವಿದೇಶ

ಶ್ರೀಲಂಕಾದಲ್ಲಿ ಸರಣಿ ಬಾಂಬ್ ಸ್ಫೋಟ: ರಾಜ್ಯದ ಐವರು ಜೆಡಿಎಸ್ ಮುಖಂಡರು ಸಾವು

ಶ್ರೀಲಂಕಾದ ಕೊಲಂಬಾದಲ್ಲಿ ಈಸ್ಟರ್ ಹಬ್ಬದ ದಿನವಾದ ಭಾನುವಾರ ನಡೆದ ಸರಣಿ ಬಾಂಬ್ ಸ್ಪೋಟದಲ್ಲಿ ಐವರು ಕನ್ನಡಿಗರು ಮೃತಪಟ್ಟಿದ್ದು,...

ಕೊಲಂಬಾ: ಶ್ರೀಲಂಕಾದ ಕೊಲಂಬಾದಲ್ಲಿ ಈಸ್ಟರ್ ಹಬ್ಬದ ದಿನವಾದ ಭಾನುವಾರ ನಡೆದ ಸರಣಿ ಬಾಂಬ್ ಸ್ಪೋಟದಲ್ಲಿ ಐವರು ಕನ್ನಡಿಗರು ಮೃತಪಟ್ಟಿದ್ದು, ಇಬ್ಬರು ನಾಪತ್ತೆಯಾಗಿದ್ದಾರೆ.
ಬೆಂಗಳೂರಿನಿಂದ ಶ್ರೀಲಂಕಾಕ್ಕೆ ಪ್ರವಾಸ ಹೋಗಿದ್ದ ಏಳು ಜೆಡಿಎಸ್ ಮುಖಂಡರ ಪೈಕಿ ಐವರು ಮೃತಪಟ್ಟಿದ್ದು, ಇನ್ನು ಇಬ್ಬರು ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿದ್ದಾರೆ.
ಸ್ಫೋಟದಲ್ಲಿ ಮೃತಪಟ್ಟವರನ್ನು ಎಂ. ರಂಗಪ್ಪ, ಬೆಂಗಳೂರಿನ ಕೆಜಿ ಹನುಮಂತರಾಯಪ್ಪ, ಲಕ್ಷ್ಮಿನಾರಾಯಣ, ತುಮಕೂರಿನ ರಮೇಶ್ ಹಾಗೂ ಶಿವಣ್ಣ ಎಂದು ಗುರುತಿಸಲಾಗಿದೆ.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ವೀರಪ್ಪಮೊಯ್ಲಿ ಪರ ಮತ ಪ್ರಚಾರ ಮುಗಿಸಿದ ಬಳಿಕ ಇವರೆಲ್ಲ ಶ್ರೀಲಂಕಾಗೆ ಪ್ರವಾಸ ಕೈಗೊಂಡಿದ್ದು, ಅಲ್ಲಿಯ ಶಾಂಗ್ರಿಲ್ಲಾ ಹೋಟೆಲ್‌ನಲ್ಲಿ ತಂಗಿದ್ದರು. 
ಭೀಕರ ಸರಣಿ ಬಾಂಬ್ ಸ್ಫೋಟದಲ್ಲಿ ಹಲವು ಭಾರತೀಯರು ಸೇರಿ 290 ಮಂದಿ ಸಾವಿಗೀಡಾಗಿದ್ದಾರೆ. ಅಲ್ಲದೆ ಸುಮಾರು 500 ಮಂದಿ ಗಾಯಗೊಂಡಿದ್ದಾರೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಭಾನುವಾರ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT