ಶ್ರೀಲಂಕಾದ ಚರ್ಚ್ ನಲ್ಲಿ ಸ್ಫೋಟ 
ವಿದೇಶ

ಶ್ರೀಲಂಕಾ ಸ್ಫೋಟ: ಜಿಹಾದಿ ಸಂಘಟನೆ ಬಗ್ಗೆ ಅಧಿಕಾರಿಗಳಿಗೆ ಮೊದಲೇ ಮಾಹಿತಿ ನೀಡಿದ್ದ ಸ್ಥಳೀಯ ಮುಸ್ಲಿಮರು!

ಶ್ರೀಲಂಕಾದಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಗೆ ಸ್ಥಳೀಯ ಇಸ್ಲಾಮಿಕ್ ಜಿಹಾದಿ ಸಂಘಟನೆಯೇ ಕಾರಣ ಎಂದು ಲಂಕಾ ಸರ್ಕಾರ ಹೇಳಿದೆ.

ಕೊಲಂಬೋ: ಶ್ರೀಲಂಕಾದಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಗೆ ಸ್ಥಳೀಯ ಇಸ್ಲಾಮಿಕ್ ಜಿಹಾದಿ ಸಂಘಟನೆಯೇ  ಕಾರಣ ಎಂದು ಲಂಕಾ ಸರ್ಕಾರ ಹೇಳಿದೆ. ಈ ಜಿಹಾದಿ ಸಂಘಟನೆ ಬೆಳವಣಿಗೆ ಬಗ್ಗೆ ಇಲ್ಲಿನ ಸ್ಥಳೀಯರು ಗುಪ್ತಚರ ಇಲಾಖೆಗೆ ಮೊದಲೇ ಎಚ್ಚರಿಕೆ ನೀಡಿದ್ದರು ಎಂಬುದು ಘಟನೆಗೆ ಸಂಬಂಧಿಸಿದ ತಾಜಾ ಮಾಹಿತಿ.   
ಈಸ್ಟರ್ ಭಾನುವಾರದ ದಿನ ಚರ್ಚ್ ಹಾಗೂ ಇನ್ನಿತರ ಪ್ರದೇಶಗಳ ಮೇಲೆ ಬಾಂಬ್ ದಾಳಿ ನಡೆಸಿ ಸುಮಾರು 300 ಜನರನ್ನು ಹತ್ಯೆ ಮಾಡಿದ್ದು ಲಂಕಾದ ನ್ಯಾಷನಲ್ ಥೌಹೀದ್ ಜಮಾತ್ ಉಗ್ರ ಸಂಘಟನೆ. ಈ ಜಿಹಾದಿ ಉಗ್ರ ಸಂಘಟನೆ ಹಾಗೂ ಅದರ ಮುಖ್ಯಸ್ಥರ ಬಗ್ಗೆ ಶ್ರೀಲಂಕಾದ ಮುಸ್ಲಿಂ ಕೌನ್ಸಿಲ್ ನ ಉಪಾಧ್ಯಕ್ಷ ಹಿಲ್ಮಿ ಅಹ್ಮದ್ ಸೇನಾ ಗುಪ್ತಚರ ಇಲಾಖೆ ಅಧಿಕಾರಿಗಳಿಗೆ  3 ವರ್ಷಗಳ ಹಿಂದೆಯೇ ಮಾಹಿತಿ ನೀಡಿ ಎಚ್ಚರಿಸಿದ್ದರು. 
"ಥೌಹೀದ್ ಜಮಾತ್ ಉಗ್ರ ಸಂಘಟನೆ ಮುಸ್ಲಿಮೇತರ ಸಮುದಾಯಗಳನ್ನು ಟಾರ್ಗೆಟ್ ಮಾಡುವುದನ್ನು ಉತ್ತೇಜಿಸುತ್ತದೆ. ಧರ್ಮದ ಹೆಸರಿನಲ್ಲಿ ಅವರನ್ನು ಹತ್ಯೆ ಮಾಡಬೇಕು ಎಂದು ಆ ಸಂಘಟನೆಯಲ್ಲಿರುವವರು ಹೇಳುತ್ತಾರೆ" ಎಂದು ಅಹ್ಮದ್ ಸಂದರ್ಶನವೊಂದರಲ್ಲಿ ಹೇಳಿದ್ದಾರೆ. ಅಷ್ಟೇ ಅಲ್ಲದೇ ಮೂರು ವರ್ಷಗಳ ಹಿಂದೆ ಈ ಸಂಘಟನೆ ಬಗ್ಗೆ ಎಲ್ಲಾ ದಾಖಲೆಗಳನ್ನೂ ತಾವೇ ಖುದ್ಧಾಗಿ ಹೋಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ನೀಡಿದ್ದೆ.  ಆದರೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ