ಶ್ರೀಲಂಕಾದ ಚರ್ಚ್ ನಲ್ಲಿ ಸ್ಫೋಟ 
ವಿದೇಶ

ಶ್ರೀಲಂಕಾ ಸ್ಫೋಟ: ಜಿಹಾದಿ ಸಂಘಟನೆ ಬಗ್ಗೆ ಅಧಿಕಾರಿಗಳಿಗೆ ಮೊದಲೇ ಮಾಹಿತಿ ನೀಡಿದ್ದ ಸ್ಥಳೀಯ ಮುಸ್ಲಿಮರು!

ಶ್ರೀಲಂಕಾದಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಗೆ ಸ್ಥಳೀಯ ಇಸ್ಲಾಮಿಕ್ ಜಿಹಾದಿ ಸಂಘಟನೆಯೇ ಕಾರಣ ಎಂದು ಲಂಕಾ ಸರ್ಕಾರ ಹೇಳಿದೆ.

ಕೊಲಂಬೋ: ಶ್ರೀಲಂಕಾದಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಗೆ ಸ್ಥಳೀಯ ಇಸ್ಲಾಮಿಕ್ ಜಿಹಾದಿ ಸಂಘಟನೆಯೇ  ಕಾರಣ ಎಂದು ಲಂಕಾ ಸರ್ಕಾರ ಹೇಳಿದೆ. ಈ ಜಿಹಾದಿ ಸಂಘಟನೆ ಬೆಳವಣಿಗೆ ಬಗ್ಗೆ ಇಲ್ಲಿನ ಸ್ಥಳೀಯರು ಗುಪ್ತಚರ ಇಲಾಖೆಗೆ ಮೊದಲೇ ಎಚ್ಚರಿಕೆ ನೀಡಿದ್ದರು ಎಂಬುದು ಘಟನೆಗೆ ಸಂಬಂಧಿಸಿದ ತಾಜಾ ಮಾಹಿತಿ.   
ಈಸ್ಟರ್ ಭಾನುವಾರದ ದಿನ ಚರ್ಚ್ ಹಾಗೂ ಇನ್ನಿತರ ಪ್ರದೇಶಗಳ ಮೇಲೆ ಬಾಂಬ್ ದಾಳಿ ನಡೆಸಿ ಸುಮಾರು 300 ಜನರನ್ನು ಹತ್ಯೆ ಮಾಡಿದ್ದು ಲಂಕಾದ ನ್ಯಾಷನಲ್ ಥೌಹೀದ್ ಜಮಾತ್ ಉಗ್ರ ಸಂಘಟನೆ. ಈ ಜಿಹಾದಿ ಉಗ್ರ ಸಂಘಟನೆ ಹಾಗೂ ಅದರ ಮುಖ್ಯಸ್ಥರ ಬಗ್ಗೆ ಶ್ರೀಲಂಕಾದ ಮುಸ್ಲಿಂ ಕೌನ್ಸಿಲ್ ನ ಉಪಾಧ್ಯಕ್ಷ ಹಿಲ್ಮಿ ಅಹ್ಮದ್ ಸೇನಾ ಗುಪ್ತಚರ ಇಲಾಖೆ ಅಧಿಕಾರಿಗಳಿಗೆ  3 ವರ್ಷಗಳ ಹಿಂದೆಯೇ ಮಾಹಿತಿ ನೀಡಿ ಎಚ್ಚರಿಸಿದ್ದರು. 
"ಥೌಹೀದ್ ಜಮಾತ್ ಉಗ್ರ ಸಂಘಟನೆ ಮುಸ್ಲಿಮೇತರ ಸಮುದಾಯಗಳನ್ನು ಟಾರ್ಗೆಟ್ ಮಾಡುವುದನ್ನು ಉತ್ತೇಜಿಸುತ್ತದೆ. ಧರ್ಮದ ಹೆಸರಿನಲ್ಲಿ ಅವರನ್ನು ಹತ್ಯೆ ಮಾಡಬೇಕು ಎಂದು ಆ ಸಂಘಟನೆಯಲ್ಲಿರುವವರು ಹೇಳುತ್ತಾರೆ" ಎಂದು ಅಹ್ಮದ್ ಸಂದರ್ಶನವೊಂದರಲ್ಲಿ ಹೇಳಿದ್ದಾರೆ. ಅಷ್ಟೇ ಅಲ್ಲದೇ ಮೂರು ವರ್ಷಗಳ ಹಿಂದೆ ಈ ಸಂಘಟನೆ ಬಗ್ಗೆ ಎಲ್ಲಾ ದಾಖಲೆಗಳನ್ನೂ ತಾವೇ ಖುದ್ಧಾಗಿ ಹೋಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ನೀಡಿದ್ದೆ.  ಆದರೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT