ಸಂಗ್ರಹ ಚಿತ್ರ 
ವಿದೇಶ

ಭಾರತ ದಾಳಿ ಬಗ್ಗೆ ಮೊದಲೆ ಸೂಚನೆ ನೀಡಿತ್ತು, ನಮ್ಮಿಂದ ಲೋಪವಾಯಿತು: ಶ್ರೀಲಂಕಾ ಪ್ರಧಾನಿ

ಶ್ರೀಲಂಕಾದಲ್ಲಿ ಸರಣಿ ಬಾಂಬ್ ಸ್ಫೋಟಗಳು ಸಂಭವಿಸುತ್ತದೆ ಎಂದು ಭಾರತ ಮೊದಲ ಸೂಚನೆ ನೀಡಿತ್ತು. ಆದರೆ ನಮ್ಮಲ್ಲಿ ನಿಸ್ಸಂಶಯವಾಗಿ ಲೋಪವಾಗಿದೆ ಎಂದು ಪ್ರಧಾನಿ ರನಿಲ್ ವಿಕ್ರಮಸಿಂಘೆ ತಿಳಿಸಿದ್ದಾರೆ.

ಕೊಲೊಂಬೊ: ಶ್ರೀಲಂಕಾದಲ್ಲಿ ಸರಣಿ ಬಾಂಬ್ ಸ್ಫೋಟಗಳು ಸಂಭವಿಸುತ್ತದೆ ಎಂದು ಭಾರತ ಮೊದಲ ಸೂಚನೆ ನೀಡಿತ್ತು. ಆದರೆ ನಮ್ಮಲ್ಲಿ ನಿಸ್ಸಂಶಯವಾಗಿ ಲೋಪವಾಗಿದೆ ಎಂದು ಪ್ರಧಾನಿ ರನಿಲ್ ವಿಕ್ರಮಸಿಂಘೆ ತಿಳಿಸಿದ್ದಾರೆ. 
ಖಾಸಗಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಭಾರತ ನಮ್ಮೊಂದಿಗೆ ಕೆಲ ಗುಪ್ತಚರ ಮಾಹಿತಿಗಳನ್ನು ಹಂಚಿಕೊಂಡಿತ್ತು. ಅದನ್ನು ಬಳಸಿಕೊಳ್ಳುವಲ್ಲಿ ನಮ್ಮಿಂದ ಲೋಪವಾಗಿದೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಚೀನಾ ಮತ್ತು ಪಾಕಿಸ್ತಾನ ಸೇರಿದಂತೆ ಹಲವು ರಾಷ್ಟ್ರಗಳ ಜೊತೆ ನಮ್ಮ ತನಿಖಾ ಸಂಸ್ಥೆಗಳು ನಿರಂತರ ಸಂಪರ್ಕದಲ್ಲಿವೆ. ದೇಶದ ಹೊರಗಿನ ಮಾಹಿತಿ ಕಲೆ ಹಾಕಲು ಇತರ ದೇಶಗಳ ತನಿಖೆ ಸಂಸ್ಥೆಗಳ ನೆರವನ್ನೂ ನಾವು ಕೇಳಿದ್ದೇವೆ ಎಂದರು.
ಇನ್ನು ಬಾಂಬ್ ದಾಳಿಯ ಹೊಣೆಯನ್ನು ಇಸಿಸ್ ಹೊತ್ತುಕೊಂಡಿದ್ದು ನ್ಯೂಜಿಲ್ಯಾಂಡ್ ನ ಕ್ರೈಸ್ಟ್ ಚರ್ಚ್ ನ ಮಸೀದಿಗಳಲ್ಲಿ ನಡೆದಿದ್ದ ಗುಂಡಿನ ದಾಳಿಗೆ ಪ್ರತಿಕಾರವಾಗಿ ಈ ದಾಳಿ ನಡೆಸಿದ್ದಾಗಿ ಹೇಳಿಕೊಂಡಿದೆ.
ಈ ಬಗ್ಗೆ ಮಾತನಾಡಿರುವ ವಿಕ್ರಮಸಿಂಘೆ, ಕ್ರೈಸ್ಟ್ ಚರ್ಚ್ ಮೇಲಿನ ದಾಳಿಗೆ ಪ್ರತಿಕಾರವಾಗಿ ಈ ದಾಳಿ ನಡೆದಿರುವ ಸಾಧ್ಯತೆಗಳಿವೆ. ಆದರೆ ಅದೇ ನಿಖರ ಕಾರಣ ಎಂದು ಸ್ಪಷ್ಟವಾಗಿ ಹೇಳಲು ಸಾಧ್ಯವಿಲ್ಲ. ಇನ್ನು ತನಿಖೆ ನಡೆಸುತ್ತಿರುವ ಪೊಲೀಸರಷ್ಟೇ ಈ ಬಗ್ಗೆ ಸ್ಪಷ್ಟವಾಗಿ ಹೇಳಲು ಸಾಧ್ಯ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT