ಸಂಗ್ರಹ ಚಿತ್ರ 
ವಿದೇಶ

ಕ್ರೈಸ್ಟ್ ಚರ್ಚ್ ದಾಳಿಗೆ ಪ್ರತೀಕಾರವಾಗಿ ಕೊಲಂಬೊ ಸರಣಿ ಬಾಂಬ್ ಸ್ಫೋಟ..!

ನ್ಯೂಜಿಲೆಂಡ್ ನ ಕ್ರೈಸ್ಟ್ ಚರ್ಚ್ ನ ಮಸೀದಿಯಲ್ಲಿ ಕಳೆದ ಮಾರ್ಚ್ ನಲ್ಲಿ ನಡೆದಿದ್ದ ಸಾಮೂಹಿಕ ಹತ್ಯೆಗೆ ಪ್ರತೀಕಾರವಾಗಿ ಶ್ರೀಲಂಕಾದಲ್ಲಿ ಉಗ್ರರು ಸರಣಿ ಬಾಂಬ್ ಸ್ಫೋಟ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಕೊಲಂಬೊ: ನ್ಯೂಜಿಲೆಂಡ್ ನ ಕ್ರೈಸ್ಟ್ ಚರ್ಚ್ ನ ಮಸೀದಿಯಲ್ಲಿ ಕಳೆದ ಮಾರ್ಚ್ ನಲ್ಲಿ ನಡೆದಿದ್ದ ಸಾಮೂಹಿಕ ಹತ್ಯೆಗೆ ಪ್ರತೀಕಾರವಾಗಿ ಶ್ರೀಲಂಕಾದಲ್ಲಿ ಉಗ್ರರು ಸರಣಿ ಬಾಂಬ್ ಸ್ಫೋಟ ನಡೆಸಿದ್ದಾರೆ ಎಂದು ಹೇಳಲಾಗಿದೆ.
ಈ ಬಗ್ಗೆ ಶ್ರೀಲಂಕಾದ ರಕ್ಷಣಾ ಉಪ ಸಚಿವ ರುವಾನ್ ವಿಜೆವರ್ದನೆ ಇಂದು ಶ್ರೀಲಂಕಾ ಸಂಸತ್ತಿದೆ ಮಾಹಿತಿ ನೀಡಿದ್ದು, 'ನ್ಯೂಜಿಲೆಂಡ್ ನ  ಕ್ರೈಸ್ಟ್ ಚರ್ಚ್ ನಲ್ಲಿ  ಮುಸ್ಲಿಮರ ಮಸೀದಿಗಳ  ಮೇಲೆ ನಡೆದ ದಾಳಿಗೆ ಪ್ರತಿಕಾರವಾಗಿ   ಈಸ್ಟರ್ ಭಾನುವಾರದಂದು ನ್ಯಾಷನಲ್ ಥೌವೀತ್ ಜಮಾಥ್ ( ಎನ್ ಟಿ ಜೆ)  ಹೆಸರಿನ ಇಸ್ಲಾಮಿಕ್ ತೀವ್ರವಾದಿ ಗುಂಪು  ಸರಣಿ ಬಾಂಬ್  ದಾಳಿಗಳನ್ನು ನಡೆಸಿದೆ ಎಂದು ಪ್ರಾಥಮಿಕ ತನಿಖೆಯ ವೇಳೆ ಬಹಿರಂಗಗೊಂಡಿದೆ  ಎಂದು ಮಾಹಿತಿ ನೀಡಿದ್ದಾರೆ.
ಸಂಸತ್ತಿನಲ್ಲಿ ಮಂಗಳವಾರ ವಿಶೇಷ ಹೇಳಿಕೆ ನೀಡಿರುವ ಸಚಿವ ವಿಜೆವರ್ದನೆ,  'ದಾಳಿ ನೆಡೆಸಿರುವ ತೀವ್ರವಾದಿಗಳ ಗುಂಪು ಅಂತಾರಾಷ್ಟ್ರೀಯ ಭಯೋತ್ಪಾದಕ ಸಂಘಟನೆಯಾದ ಜೆಎಮ್ಐ ನೊಂದಿಗೆ ಸಂಪರ್ಕ ಹೊಂದಿರುವುದು ತನಿಖೆಯ ಮೂಲಕ ಬಹಿರಂಗವಾಗಿದ್ದು, ಈ ಬಗ್ಗೆ ಇನ್ನೂ ತನಿಖೆ ಮುಂದುವರೆದಿದೆ ಎಂದು ಹೇಳಿದ್ದಾರೆ. ಅಂತೆಯೇ ಈ ಗುಂಪಿನ ಪೂರ್ಣ ಮಾಹಿತಿ ನೀಡಲು ನಿರಾಕರಿಸಿದ ಅವರು, 'ಇಂತಹ ಭಯೋತ್ಪಾದಕ ಸಂಘಟನೆಗಳನ್ನು ನಿಷೇಧಿಸಲು ಕ್ರಮ ಕೈಗೊಳ್ಳಲಾಗುವುದು. ಈ ಸಂಘಟನೆಗಳ ಸದಸ್ಯರನ್ನು ನ್ಯಾಯದ ಕಕ್ಷೆಗೆ ಒಳಪಡುವುದನ್ನು ಖಾತರಿ ಪಡಿಸಲಾಗುವುದು. ದಾಳಿಗಳ ಹಿಂದಿರುವ ವ್ಯಕ್ತಿಗಳ ಆಸ್ತಿ-ಪಾಸ್ತಿ ಮುಟ್ಟುಗೋಲುಹಾಕಿಕೊಳ್ಳಲು ಕ್ರಮ ಕೈಗೊಳ್ಳಬೇಕು ಎಂದರು.
ಈಸ್ಟರ್ ಭಾನುವಾರದಂದು  ಶ್ರೀಲಂಕಾದ ಚರ್ಚ್ ಗಳು ಹಾಗೂ  ಪಂಚತಾರಾ ಹೋಟೆಲ್ ಗಳ  ಮೇಲೆ  ಸ್ಥಳೀಯ ಇಸ್ಲಾಮಿಸ್ಟ್ ತೀವ್ರವಾದಿ ಗುಂಪು, ನ್ಯೂಜಿಲೆಂಡ್ ಮಸೀದಿಗಳ ಮೇಲೆ  ನಡೆದ ದಾಳಿಗಳಿಗೆ ಪ್ರತಿಕಾರವಾಗಿ ಭೀಕರ ಬಾಂಬ್  ದಾಳಿ ನಡೆಸಿದ್ದವು ಎಂದು ಪ್ರಾಥಮಿಕ ತನಿಖಾ ಅಂಶಗಳನ್ನು ಉಲೇಖಿಸಿ ಹಿರಿಯ ಸಚಿವರು ಸಂಸತ್ತಿಗೆ ಮಾಹಿತಿ  ನೀಡಿದ್ದಾರೆ.
ಮೂರು ಚರ್ಚ್ ಗಳು ಹಾಗೂ  ಹಲವು ವೈಭೋಪೇತ ಹೋಟೆಲ್ ಗಳ ಮೇಲೆ  ಭಾನುವಾರ ಬೆಳಗ್ಗೆ  ನಡೆಸಲಾದ ಸರಣಿ ಭೀಕರ ಬಾಂಬ್ ದಾಳಿಗಳಲ್ಲಿ ಈ ವರಗೂ 321 ಮಂದಿ ಮೃತಪಟ್ಟಿದ್ದು, 500ಕ್ಕೂ ಹೆಚ್ಚುಮಂದಿ ಗಾಯಗೊಂಡಿದ್ದಾರೆ.  ಎಲ್ ಟಿ ಟಿ ಇ ನೊಂದಿಗಿನ ಅಮಾನವೀಯ ನಾಗರೀಕ ಸಮರ ಅಂತ್ಯಗೊಂಡ 10ವರ್ಷಗಳ ನಂತರ  ನಡೆದ ಈ ದಾಳಿಗಳು ದ್ವೀಪರಾಷ್ಟ್ರದ ಶಾಂತಿಯನ್ನೇ ನುಚ್ಚುನೂರು ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸೌದಿಯಲ್ಲಿ ಬಸ್–ಡೀಸೆಲ್ ಟ್ಯಾಂಕರ್ ಡಿಕ್ಕಿಯಾಗಿ ಘೋರ ದುರಂತ: 45 ಮಂದಿ ಭಾರತೀಯ ಯಾತ್ರಿಕರು ದುರ್ಮರಣ, ಸಹಾಯವಾಣಿ ಆರಂಭ

"ನನಗೆ ಚಿಂತೆಯೇ ಇಲ್ಲ. ಅಲ್ಲಾಹ್ ಜೀವ ಕೊಟ್ಟಿದ್ದಾನೆ.. ಅವನೇ ತೆಗೆದುಕೊಳ್ಳುತ್ತಾನೆ": ಕೋರ್ಟ್ ತೀರ್ಪಿಗೂ ಮೊದಲು ಶೇಖ್ ಹಸೀನಾ!

ಬಿಹಾರದಲ್ಲಿ ಶಾಕಿಂಗ್ ಟ್ವಿಸ್ಟ್: ಎನ್ ಡಿಎಗೆ ಲಾಲೂ ಪ್ರಸಾದ್ ಪುತ್ರ ತೇಜ್ ಪ್ರತಾಪ್ ಯಾದವ್ ಬೆಂಬಲ!

ಬಿಹಾರ: ನ. 20ಕ್ಕೆ ನೂತನ ಸಿಎಂ ಪದ ಗ್ರಹಣ, ಪ್ರಧಾನಿ ಮೋದಿ ಸಮಾರಂಭದಲ್ಲಿ ಭಾಗಿ!

ಸಂಪುಟ ವಿಸ್ತರಣೆಗೆ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್: ಸಿಎಂ ಸಿದ್ದರಾಮಯ್ಯ ಓಟಕ್ಕೆ 'ಬಂಡೆ' ಬ್ರೇಕ್! KN ರಾಜಣ್ಣ ಕಮ್ ಬ್ಯಾಕ್?

SCROLL FOR NEXT