ಸಂಗ್ರಹ ಚಿತ್ರ 
ವಿದೇಶ

ಶ್ರೀಲಂಕಾದಲ್ಲಿ ಸರಣಿ ಬಾಂಬ್ ಸ್ಫೋಟ; ಸಾವಿನ ಸಂಖ್ಯೆ 359ಕ್ಕೆ ಏರಿಕೆ

ಶ್ರೀಲಂಕಾದಲ್ಲಿ ಭಾನುವಾರ ಸಂಭವಿಸಿದ ಭೀಕರ ಸರಣಿ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ಸಾವಿಗೀಡಾದವರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದ್ದು, ಈ ವರೆಗೂ ಸಾವನ್ನಪ್ಪಿದವರ ಸಂಖ್ಯೆ 359ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.

ಕೊಲಂಬೋ: ಶ್ರೀಲಂಕಾದಲ್ಲಿ ಭಾನುವಾರ ಸಂಭವಿಸಿದ ಭೀಕರ ಸರಣಿ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ಸಾವಿಗೀಡಾದವರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದ್ದು, ಈ ವರೆಗೂ ಸಾವನ್ನಪ್ಪಿದವರ ಸಂಖ್ಯೆ 359ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಸ್ವತಃ ಶ್ರೀಲಂಕಾದ ಅಧಿಕಾರಿಗಳು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಈ ವರೆಗೂ ಸರಣಿ ಬಾಂಬ್ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 359ಕ್ಕೆ ಏರಿಕೆಯಾಗಿದ್ದು, ಕೊಲಂಬೋದ ವಿವಿಧ ಆಸ್ಪತ್ರೆಗಳಲ್ಲಿ ಇನ್ನೂ 500ಕ್ಕೂ ಅಧಿಕ ಮಂದಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ ಹಲವರ ಸ್ಥಿತಿ ಇನ್ನೂ ಗಂಭೀರವಾಗಿದ್ದು, ಮುಂದಿನ ದಿನಗಳಲ್ಲಿ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ನಿನ್ನೆಯಷ್ಟೇ ಶ್ರೀಲಂಕಾ ಅಧ್ಯಕ್ಷ ರಣಿಲ್ ವಿಕ್ರಮ ಸಿಂಘೆ ಅವರು ಉಗ್ರ ದಾಳಿ ಕುರಿತು ಭಾರತ ಮೊದಲೇ ಎಚ್ಚರಿಕೆ ನೀಡಿತ್ತು. ಆದರೆ ನಮ್ಮ ಭದ್ರತೆಯಲ್ಲೇ ಲೋಪವಾಗಿದೆ ಎಂದು ವಿಷಾಧ ವ್ಯಕ್ತಪಡಿಸಿದ್ದರು.
ಇನ್ನು ಕಳೆದ ಭಾನುವಾರ ಕೊಲಂಬೋದ ವಿವಿಧ ಪ್ರದೇಶಗಳಲ್ಲಿ ಒಟ್ಟು 7 ಮಂದಿ ಆತ್ಮಹತ್ಯಾ ಬಾಂಬ್ ದಾಳಿಕೋರರು ದಾಳಿ ನಡೆಸಿದ್ದರು. ಚರ್ಚ್, ಶಾಂಗ್ರೀಲಾ ಹೋಟೆಲ್ ಸೇರಿದಂತೆ ಕೊಲಂಬೋದ ವಿವಿಧೆಡೆ ನಡೆದ ಸರಣಿ ಬಾಂಬ್ ಸ್ಫೋಟದಿಂದಾಗಿ 350ಕ್ಕೂ ಅಧಿಕ ಮಂದಿ ಸಾವನ್ನಪ್ಪಿ, 500ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ಈ ದಾಳಿಯ ಹೊಣೆಯನ್ನು ನಿನ್ನೆಯಷ್ಟೇ ಕುಖ್ಯಾತ ಉಗ್ರಸಂಘಟನೆ ಇಸ್ಲಾಮಿಕ್ ಸ್ಟೇಟ್ ಹೊತ್ತುಕೊಂಡಿತ್ತು.
ಅಲ್ಲದೆ ಈ ಹಿಂದೆ ನ್ಯೂಜಿಲೆಂಡ್ ನ ಕ್ರೈಸ್ಟ್ ಚರ್ಚ್ ನಲ್ಲಿ ನಡೆದ ಮುಸ್ಲಿಮರ ಸಾಮೂಹಿಕ ಹತ್ಯೆಗೆ ಪ್ರತೀಕಾರವಾಗಿ ಈ ದಾಳಿ ನಡೆಸಿದ್ದೇವೆ ಎಂದು ಘೋಷಣೆ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ; ಸಿದ್ದರಾಮಯ್ಯ ಘೋಷಣೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT