ಸಂಗ್ರಹ ಚಿತ್ರ 
ವಿದೇಶ

ಶ್ರೀಲಂಕಾದಲ್ಲಿ ಮುಂದುವರೆದ ಉಗ್ರ ದಾಳಿ: ಮನೆಯಲ್ಲೇ ಪ್ರಾರ್ಥನೆ ಸಲ್ಲಿಸುವಂತೆ ಧಾರ್ಮಿಕ ಮುಖಂಡರ ಸಲಹೆ!

ಸರಣಿ ಬಾಂಬ್ ಸ್ಫೋಟದಿಂದ ತತ್ತರಿಸಿ ಹೋಗಿರುವ ಶ್ರೀಲಂಕಾದಲ್ಲಿ ಆತಂಕ ಮುಂದುವರೆದಿದ್ದು, ಮುಂಜಾಗ್ರತಾ ಕ್ರಮವಾಗಿ ಪ್ರಾರ್ಥನೆಗಾಗಿ ಮಸೀದಿ ಮತ್ತು ಚರ್ಚೆ ಗಳಿಗೆ ಆಗಮಿಸಿದಂತೆ ಧಾರ್ಮಿಕ ಮುಖಂಡರು ಸಲಹೆ ನೀಡಿದ್ದಾರೆ.

ಕೊಲಂಬೋ: ಸರಣಿ ಬಾಂಬ್ ಸ್ಫೋಟದಿಂದ ತತ್ತರಿಸಿ ಹೋಗಿರುವ ಶ್ರೀಲಂಕಾದಲ್ಲಿ ಆತಂಕ ಮುಂದುವರೆದಿದ್ದು, ಮುಂಜಾಗ್ರತಾ ಕ್ರಮವಾಗಿ ಪ್ರಾರ್ಥನೆಗಾಗಿ ಮಸೀದಿ ಮತ್ತು ಚರ್ಚೆ ಗಳಿಗೆ ಆಗಮಿಸಿದಂತೆ ಧಾರ್ಮಿಕ ಮುಖಂಡರು ಸಲಹೆ ನೀಡಿದ್ದಾರೆ.
ಶ್ರೀಲಂಕಾದ ಕ್ಯಾಥೋಲಿಕ್ ಚರ್ಚ್ ಗಳ ಒಕ್ಕೂಟ ಹಾಗೂ ಆಲ್ ಸಿಲೋನ್ ಜಮಾಯುತುಲ್ ಉಲ್ಲಮ ಮುಸ್ಲಿಂ ಸಂಘಟನೆ ಇಂತಹುದೊಂದು ಕರೆ ನೀಡಿದ್ದು, ಮನೆಗಳಲ್ಲೇ ಪ್ರಾರ್ಥನೆ ಸಲ್ಲಿಸುವಂತೆ ಸಲಹೆ ನೀಡಿದೆ. ಲಂಕಾದಲ್ಲಿ ಪರಿಸ್ಥಿತಿ ಗಂಭೀರವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ಸಾಮೂಹಿಕ ಪ್ರಾರ್ಥನೆ ಬೇಡ  ಎಂದು ಸಲಹೆ ನೀಡಿದ್ದಾರೆ. 
ಇನ್ನು ಶ್ರೀಲಂಕಾದಲ್ಲಿ ಮತ್ತೆ ಸರಣಿ ಬಾಂಬ್ ಸ್ಫೋಟವಾಗಿದ್ದು, ನಿನ್ನೆ ಕಾಲ್ ಮುನೈನಗರದಲ್ಲಿ ಮೂರು ಕಡೆ ಸರಣಿ ಬಾಂಬ್ ಸ್ಫೋಟ ಸಂಭವಿಸಿ, ಇಬ್ಬರು ಮೃತಪಟ್ಟಿದ್ದರು. ಅಲ್ಲದೆ ಇದೇ ಪ್ರಾಂತ್ಯದಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರು ನಡುವೆ ಗುಂಡಿನ ಕಾಳಗ ನಡೆಯುತ್ತಿದೆ. ಈಶಾನ್ಯ ಶ್ರೀಲಂಕಾದಲ್ಲಿ ಉಗ್ರರ ಅಡಗುದಾಣಗಳ ಮೇಲೆ ಲಂಕಾ ಸೇನೆ ದಾಳಿ ಮಾಡಿದೆ. ಈ ವೇಳೆ ಇಬ್ಬರು ಶಂಕಿತ ಉಗ್ರರು ಸಾವನ್ನಪ್ಪಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT