ಸಂಗ್ರಹ ಚಿತ್ರ 
ವಿದೇಶ

ಸಿರಿಯಾ ಸೋಲಿನ ಪ್ರತೀಕಾರವೇ ಶ್ರೀಲಂಕಾ ದಾಳಿ: ಇಸಿಸ್ ಮುಖ್ಯಸ್ಥ ಬಾಗ್ದಾದಿ

ಸಿರಿಯಾದಲ್ಲಿ ಸಂಘಟನೆಯ ಸೋಲಿಗೆ ಪ್ರತೀಕಾರವಾಗಿ ಶ್ರೀಲಂಕಾದಲ್ಲಿ ದಾಳಿ ನಡೆಸಲಾಗಿದೆ ಎಂದು ಇಸ್ಲಾಮಿಕ್​ ಸ್ಟೇಟ್ ಉಗ್ರ ಸಂಘಟನೆ ಮುಖ್ಯಸ್ಥ ಅಬೂ ಬಕರ್​ ಅಲ್-ಬಾಗ್ದಾದಿ ಹೇಳಿದ್ದಾನೆ.

ಬಾಗ್ದಾದ್: ಸಿರಿಯಾದಲ್ಲಿ ಸಂಘಟನೆಯ ಸೋಲಿಗೆ ಪ್ರತೀಕಾರವಾಗಿ ಶ್ರೀಲಂಕಾದಲ್ಲಿ ದಾಳಿ ನಡೆಸಲಾಗಿದೆ ಎಂದು ಇಸ್ಲಾಮಿಕ್​ ಸ್ಟೇಟ್ ಉಗ್ರ ಸಂಘಟನೆ ಮುಖ್ಯಸ್ಥ ಅಬೂ ಬಕರ್​ ಅಲ್-ಬಾಗ್ದಾದಿ ಹೇಳಿದ್ದಾನೆ.
ಈ ಬಗ್ಗೆ ವಿಡಿಯೋ ಬಿಡುಗಡೆ ಮಾಡಿರುವ ಇಸಿಸ್, ವಿಡಿಯೋದಲ್ಲಿ ತನ್ನ ಸಂಘಟನೆ ಮುಖ್ಯಸ್ಥ ಅಬೂ ಬಕರ್​ ಅಲ್-ಬಾಗ್ದಾದಿ ಮೂಲಕ ಹೇಳಿಕೆ ಕೊಡಿಸಿದೆ. ಈ ಹಿಂದೆ ಅಮೆರಿಕ ವಾಯು ಸೇನೆಯ ಡ್ರೋಣ್ ದಾಳಿಯಲ್ಲಿ ಬಾಗ್ದಾದಿ ಸಾವನ್ನಪ್ಪಿದ್ದ ಎಂದು ಹೇಳಲಾಗಿತ್ತಾದರೂ, ಆತ ಸಾವನ್ನಪ್ಪಿಲ್ಲ ಇನ್ನೂ ಜೀವಂತವಾಗಿದ್ದಾನೆ ಎಂದು ತಿಳಿದುಬಂದಿದೆ.
ಇಸಿಸ್ ನ ಈ ವಿಡಿಯೋದಲ್ಲಿ ಅರೇಬಿಕ್​ ಭಾಷೆಯಲ್ಲಿ ಮಾತನಾಡಿರುವ ಬಾಗ್ದಾದಿ ಶ್ರೀಲಂಕಾದ ದಾಳಿಯ ಕುರಿತೂ ಉಲ್ಲೇಖಿಸಿದ್ದು, ಸಿರಿಯಾದಲ್ಲಿನ ಇಸಿಸ್ ಸೋಲಿಗೆ ಪ್ರತೀಕಾರವಾಗಿ ಶ್ರೀಲಂಕಾದಲ್ಲಿ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ. 
'ಬಘೌಝ್ ನ ಯುದ್ಧ ಇಲ್ಲಿಗೆ ಮುಕ್ತಾಯವಾಗಿದೆ. ಶ್ರೀಲಂಕಾದಲ್ಲಿ ನಡೆಸಿದ ಸರಣಿ ದಾಳಿಯೂ ಈ ಬಘೌಝ್​ ದಾಳಿಗೆ ಪ್ರತಿಕಾರವಾಗಿದೆ.  ಪಶ್ಚಿಮ ರಾಷ್ಟ್ರಗಳ ವಿರುದ್ಧ ಯುದ್ಧ ಸುದೀರ್ಘವಾಗಿದೆ. ಹಾಗೂ ಮೃತಪಟ್ಟಿರುವ ಸದಸ್ಯರ ವಿರುದ್ಧ ಸೇಡು ತೀರಿಸಿಕೊಳ್ಳಲು ಯುದ್ಧ ಮುಂದುವರೆಯಲಿದೆ ಎಂದು ಬಾಗ್ದಾದಿ ಎಚ್ಚರಿಸಿದ್ದಾನೆ. ಇನ್ನು ಈ ವಿಡಿಯೋ ಹೊರಬರುತ್ತಿದ್ದಂತೆ ಎಸ್ ಐಟಿ ತಂಡ ಹಾಗೂ ಇರಾಕ್ ನ ತಜ್ಞರ ತಂಡ ಈತ ಬಾಗ್ದಾದಿಯೇ ಅನ್ನೋದನ್ನೂ ಖಚಿತ ಪಡಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT