ಅಮಿತ್ ಶಾ 
ವಿದೇಶ

ಪೌರತ್ವ ಮಸೂದೆ: ಅಮಿತ್ ಶಾ ವಿರುದ್ಧ ನಿರ್ಬಂಧಕ್ಕೆ ಅಮೆರಿಕಾ ನಿಯೋಗ ಆಗ್ರಹ

ವಿವಾದಿತ ಪೌರತ್ವ (ತಿದ್ದುಪಡಿ) ಮಸೂದೆಗೆ ತೀವ್ರ ಆತಂಕ ವ್ಯಕ್ತಪಡಿಸಿರುವ ಅಂತರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರಯದ ಫೆಡರಲ್ ಯುಎಸ್ ಆಯೋಗವು, ಗೃಹ ಸಚಿವ ಅಮಿತ್ ಶಾ ವಿರುದ್ಧ ನಿರ್ಬಂಧ ಹೇರುವಂತೆ ಅಮೆರಿಕಾವನ್ನು ಆಗ್ರಹಿಸಿದೆ. 

ವಾಷಿಂಗ್ಟನ್: ವಿವಾದಿತ ಪೌರತ್ವ (ತಿದ್ದುಪಡಿ) ಮಸೂದೆಗೆ ತೀವ್ರ ಆತಂಕ ವ್ಯಕ್ತಪಡಿಸಿರುವ ಅಂತರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರಯದ ಫೆಡರಲ್ ಯುಎಸ್ ಆಯೋಗವು, ಗೃಹ ಸಚಿವ ಅಮಿತ್ ಶಾ ವಿರುದ್ಧ ನಿರ್ಬಂಧ ಹೇರುವಂತೆ ಅಮೆರಿಕಾವನ್ನು ಆಗ್ರಹಿಸಿದೆ. 

ಪೌರತ್ವ ಮಸೂದೆ ತಪ್ಪು ದಿಕ್ಕಿನಲ್ಲಿ ಅಪಾಯಕಾರಿ ತಿರುವು ಪಡೆದುಕೊಳ್ಳಲಿದೆ ಎಂದು ನಿಯೋಗ ಆತಂಕ ವ್ಯಕ್ತಪಡಿಸಿದ್ದು, ಸಂಸತ್ತಿನ ಉಭಯ ಸದನಗಳಲ್ಲಿ ಮಸೂದೆ ಅಂಗೀಕಾರವಾದ ಕೂಡಲೇ ಗೃಹ ಸಚಿವ ಅಮಿತ್ ಶಾ ವಿರುದ್ಧ ನಿರ್ಬಂಧ ಹೇರಬೇಕೆಂದು ಆಗ್ರಹಿಸಿದೆ. 

ಪ್ರಸ್ತುತ ಲೋಕಸಭೆಯಲ್ಲಿ ಮಂಡನೆಗೊಂಡಿರುವ ಮಸೂದೆ ಅನ್ವಯ ಡಿ.31, 2014ರ ವರೆಗೂ ಧಾರ್ಮಿಕ ದಬ್ಬಾಳಿಕೆಗೆ ಒಳಗಾಗಿ ಬಾಂಗ್ಲಾದೇಶ, ಪಾಕಿಸ್ತಾನ, ಆಫ್ಘಾನಿಸ್ತಾನದಿಂದ ಓಡಿ ಬಂದಿರುವ ಹಿಂದೂ, ಸಿಖ್, ಬುದ್ಧ, ಜೈನ್, ಪಾರ್ಸಿ ಹಾಗೂ ಕ್ರೈಸ್ತ ಸಮುದಾಯಗಳ ಸದಸ್ಯರುಗಳನ್ನು ಅಕ್ರಮ ವಲಸಿಗರೆಂದು ಪರಿಗಣಿಸಲಾಗುವುದಿಲ್ಲ. ಆದರೆ, ಅವರಿಗೆ ಭಾರತೀಯ ಪೌರತ್ವವನ್ನು ನೀಡಲಾಗುತ್ತದೆ. 

ಸಂಸತ್ತಿನಲ್ಲಿ ಮಂಡಿಸಲಾಗಿರುವ ಮಸೂದೆ ಅತ್ಯಂತ ಸಮಸ್ಯೆಯಿಂದ ಕೂಡಿದ್ದು, ಪೌರತ್ವ ತಿದ್ದುಪಡಿ ಮಸೂದೆಯು ಧಾರ್ಮಿಕ ತಾರತಮ್ಯವನ್ನು ಕಾನೂನು ಬದ್ಧಗೊಳಿಸಲಿದೆಯೇ? ಎಂದು ನಿಯೋಗ ಪ್ರಶ್ನಿಸಿದೆ. 

ಒಂದು ವೇಳೆ ಉಭಯ ಸದನಗಳಲ್ಲಿ ಮಸೂದೆ ಅಂಗೀಕಾರಗೊಂಡಿದ್ದೇ ಆದರೆ, ಅಮೆರಿಕಾ ಸರ್ಕಾರ ಗೃಹ ಸಚಿವ ಅಮಿತ್ ಶಾ ಹಾಗೂ ಇತರೆ ಪ್ರಮುಖ ನಾಯಕರ ಮೇಲೆ ನಿರ್ಬಂಧ ಹೇರಬೇಕು ಎಂದು ಆಗ್ರಹಿಸಿದೆ. 

ವಿವಾದಿತ ರಾಷ್ಟ್ರೀಯ ಪೌರತ್ವ (ತಿದ್ದುಪಡಿ) ಮಸೂದೆಗೆ ಲೋಕಸಬೆ ಅಸ್ತು ಎಂದು ಹೇಳಿದೆ. ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಆಫ್ಘಾನಿಸ್ತಾನಗಳಲ್ಲಿನ ಧಾರ್ಮಿಕ ಉಪದ್ರವಗಳಿಂದ ಬೇಸತ್ತು, ಅಲ್ಲಿಂದ ಭಾರತಕ್ಕೆ ಬಂದಿರುವ ಹಿಂದು, ಸಿಖ್, ಬೌದ್ಧ, ಜೈನ, ಪಾರ್ಸಿ ಹಾಗೂ ಕ್ರೈಸ್ತರಿಗೆ ಭಾರತೀಯ ಪೌರತ್ವ ಉದ್ದೇಶವು ಮಸೂದೆಗೆ ಇದೆ. ಇನ್ನು ವಿಧೇಯಕವು ರಾಜ್ಯಸಭೆಯಲ್ಲಿ ಮಂಡನೆಯಾಗಿ ಅಲ್ಲೂ ಅನುಮೋದನೆ ಪಡೆದುಕೊಂಡಿದ್ದೇ ಆದರೆ, ಇವರಿಗೆಲ್ಲಾ ಬಾರತೀಯ ಪೌರತ್ವ ಲಭಿಸಲಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯಾರೋ ಒಬ್ಬರಿಂದ ಪಕ್ಷ ಅಧಿಕಾರಕ್ಕೆ ಬಂದಿಲ್ಲ: ಖರ್ಗೆ ಹೇಳಿಕೆ ಬೆಂಬಲಿಸಿದ ಎಂ.ಬಿ ಪಾಟೀಲ; ಡಿಕೆಶಿಗೆ ಪರೋಕ್ಷ ಟಾಂಗ್

U19 ಏಷ್ಯಾ ಕಪ್ ಫೈನಲ್‌: ಪಾಕ್ ವಿರುದ್ಧ ಸೋತರೂ ನಖ್ವಿ ಕೈಯಿಂದ ಪದಕ ಸ್ವೀಕರಿಸದ India ಯುವ ಪಡೆ, Video!

G RAM G ಮಸೂದೆ: ಬಿಜೆಪಿಯಿಂದ ಎರಡನೇ ಬಾರಿ 'ಮಹಾತ್ಮ ಗಾಂಧಿ ಹತ್ಯೆ'; ಚಿದಂಬರಂ ಕಿಡಿ

ನಾಯಕತ್ವ ಬದಲಾವಣೆ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಗರಂ; ನಾಯಕರಿಗೆ ಖಡಕ್ ಸಂದೇಶ

ಜಮ್ಮುವಿನ NIA ಕಚೇರಿ ಬಳಿ ಚೀನಾ ನಿರ್ಮಿತ ರೈಫಲ್ ಟೆಲಿಸ್ಕೋಪ್ ಪತ್ತೆ; ಭದ್ರತೆ ಹೆಚ್ಚಳ

SCROLL FOR NEXT