ಸಂಗ್ರಹ ಚಿತ್ರ 
ವಿದೇಶ

ಪೌರತ್ವ ಮಸೂದೆ ಭಾರತದ ಜ್ಯಾತ್ಯಾತೀತತೆಯನ್ನು ದುರ್ಬಲಗೊಳಿಸಬಹುದು: ಬಾಂಗ್ಲಾದೇಶ

ಪ್ರಧಾನಿ ಮೋದಿ ಸರ್ಕಾರ ಜಾರಿಗೆ ತರಲು ಇಚ್ಚಿಸಿರುವ ಪೌರತ್ವ ತಿದ್ದುಪಡಿ ಮಸೂದೆಯಿಂದಾಗಿ ಭಾರತದ ಜಾತ್ಯಾತೀತೆ ದುರ್ಬಲಗೊಳ್ಳಬಹುದು ಎಂದು ಬಾಂಗ್ಲಾದೇಶ ಅಭಿಪ್ರಾಯಪಟ್ಟಿದೆ.

ಢಾಕಾ: ಪ್ರಧಾನಿ ಮೋದಿ ಸರ್ಕಾರ ಜಾರಿಗೆ ತರಲು ಇಚ್ಚಿಸಿರುವ ಪೌರತ್ವ ತಿದ್ದುಪಡಿ ಮಸೂದೆಯಿಂದಾಗಿ ಭಾರತದ ಜಾತ್ಯಾತೀತೆ ದುರ್ಬಲಗೊಳ್ಳಬಹುದು ಎಂದು ಬಾಂಗ್ಲಾದೇಶ ಅಭಿಪ್ರಾಯಪಟ್ಟಿದೆ.

ಈ ಕುರಿತಂತೆ ಮಾತನಾಡಿರುವ ಬಾಂಗ್ಲಾದೇಶ ವಿದೇಶಾಂಗ ಸಚಿವ ಎಕೆ ಅಬ್ದುಲ್ ಮೊಮೆನ್ ಅವರು, ಭಾರತ ಐತಿಹಾಸಿಕ ಜಾತ್ಯಾತೀತೆಯನ್ನು ಹೊಂದಿದೆ. ಆದರೆ ಹಾಲಿ ಮೋದಿ ಸರ್ಕಾರ ಜಾರಿಗೆ ತರಲು ಇಚ್ಛಿಸಿರುವ ಪೌರತ್ವ ತಿದ್ದುಪಡಿ ಮಸೂದೆ ಭಾರತದ ಭವ್ಯ ಜಾತ್ಯಾತೀತ ನಿಲುವನ್ನೇ ಅಲುಗಾಡಿಸಿ ಅದನ್ನು ದುರ್ಬಲಗೊಳಿಸಬಹುದು ಎಂದು ಹೇಳಿದ್ದಾರೆ.

ಅಂತೆಯೇ ಇದೇ ವೇಳೆ ಭಾರತ ಮತ್ತು ಬಾಂಗ್ಲಾದೇಶ ಅತ್ಯುತ್ತಮ ಸೌಹಾರ್ಧ ಸಂಬಂಧ ಹೊಂದಿದ್ದು, ಇದೇ ಕಾರಣಕ್ಕೆ ಭಾರತೀಯ ಅಲ್ಪ ಸಂಖ್ಯಾತರು ಮಾತ್ರವಲ್ಲದೇ ಬಾಂಗ್ಲಾದೇಶದ ನಾಗರಿಕರೂ ಕೂಡ ಪೌರತ್ವ ತಿದ್ದುಪಡಿ ಮಸೂದೆ ಕುರಿತಂತೆ ಆತಂಕಕ್ಕೊಳಗಾಗಿದ್ದಾರೆ ಎಂದು ಹೇಳಿದರು. ಇದೇ ವೇಳೆ ಅಕ್ರಮ ಬಾಂಗ್ಲಾ ವಲಸಿಗರ ಕುರಿತು ಭಾರತದ ಗೃಹ ಸಚಿವರ ಹೇಳಿಕೆಯನ್ನು ತಳ್ಳಿಹಾಕಿದ ಮೊಮೆನ್ ಅವರು, ಅಮಿತ್ ಶಾ ಅವರಿಗೆ ಯಾರು ಈ ಮಾಹಿತಿ ನೀಡಿದರೋ ತಿಳಿದಿಲ್ಲ. ಆದರೆ ಅದು ಸತ್ಯಕ್ಕೆ ದೂರವಾದದ್ದು ಎಂದು ಹೇಳಿದರು. 

ಅಲ್ಪ ಸಂಖ್ಯಾತರ ದಬ್ಬಾಳಿಕೆ ಹೇಳಿಕೆ ಸರಿಯಲ್ಲ. ಬಹುಶಃ ಅಮಿತ್ ಶಾ ಅವರಿಗೆ ತಪ್ಪು ಮಾಹಿತಿ ಲಭ್ಯವಾಗಿರಬಹುದು. ಬಾಂಗ್ಲಾದೇಶದಲ್ಲಿ ಅಲ್ಪ ಸಂಖ್ಯಾತರನ್ನು ಅತ್ಯಂತ ಗೌರವಯುತವಾಗಿ ನಡೆಸಿಕೊಳ್ಳಲಾಗುತ್ತಿದೆ. ಅಲ್ಪ ಸಂಖ್ಯಾತರ ಕುರಿತಂತೆ ನಮ್ಮ ದೇಶ ಸಾಕಷ್ಟು ಅತ್ಯುತ್ತಮ ನಿರ್ಣಯಗಳನ್ನು ಕೈಗೊಂಡಿದೆ. ಇಲ್ಲಿ ಎಲ್ಲ ಧರ್ಮೀಯರು ಎಲ್ಲ ಹಕ್ಕುಗಳನ್ನು ಅನುಭವಿಸುತ್ತಿದ್ದಾರೆ. ಅವರ ಸರ್ವ ಸ್ವತಂತ್ರರು ಎಂದು ಮೊಮೆನ್ ಹೇಳಿದ್ದಾರೆ.

ಇನ್ನು ಭಾರತದಲ್ಲಿ ತೀವ್ರ ಚರ್ಚೆ ಹುಟ್ಟುಹಾಕಿರುವ ಪೌರತ್ವ ಮಸೂದೆಯನ್ನು ನಿನ್ನೆ ರಾಜ್ಯಸಭೆಯಲ್ಲಿ ಅಂಗೀಕರಿಸಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT