ಪೌರತ್ವ ಮಸೂದೆ ವಿರೋಧಿಸಿ ಪ್ರತಿಭಟನೆ 
ವಿದೇಶ

ಸಿಎಬಿ ಪರಿಣಾಮಗಳನ್ನು ವಿಶ್ವಸಂಸ್ಥೆ ಸೂಕ್ಷ್ಮವಾಗಿ ಗಮನಿಸುತ್ತಿದೆ: ಗುಟೆರಸ್

ಭಾರತದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಸಂಭವನೀಯ ಪರಿಣಾಮಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವುದಾಗಿ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಹೇಳಿದ್ದಾರೆ. 

ವಿಶ್ವಸಂಸ್ಥೆ: ಭಾರತದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಸಂಭವನೀಯ ಪರಿಣಾಮಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವುದಾಗಿ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಹೇಳಿದ್ದಾರೆ. 

ಭಾರತ ಸಂಸತ್ತಿನ ಉಭಯ ಸದನಗಳು ಅಂಗೀಕರಿಸಿರುವ ಪೌರತ್ವ ತಿದ್ದುಪಡಿ ವಿಧೇಯಕದ ಬಗ್ಗೆ ಮಾಹಿತಿ ಇದೆ. ದೇಶದಲ್ಲಿ ವ್ಯಕ್ತವಾಗುವ ಪ್ರತಿಭಟನೆಯ ಬಗ್ಗೆಯೂ ಅರಿವಿದೆ.  ಈ ಶಾಸನದ ಸಂಭವನೀಯ ಪರಿಣಾಮಗಳನ್ನು ವಿಶ್ಲೇಷಿಸುತ್ತಿರುವುದಾಗಿ ಹೇಳಿದ್ದಾರೆ.

ಆಂಟೋನಿಯೊ ಗುಟೆರಸ್ ಅವರ ಉಪ ವಕ್ತಾರ ಫರ್ಹಾನ್ ಹಕ್ ಈ ವಿವರಗಳನ್ನು ತಿಳಿಸಿದ್ದಾರೆ. ಈ ಕಾನೂನಿನ ಸ್ವರೂಪದ  ಬಗ್ಗೆ ಮಾನವ ಹಕ್ಕುಗಳ ಸಂಸ್ಥೆಗಳು ಮತ್ತು ವಿಶ್ವಸಂಸ್ಥೆಯ ಪ್ರತಿನಿಧಿಗಳು ಕಳವಳ ವ್ಯಕ್ತಪಡಿಸಿದ್ದಾರೆ ಎಂದರು.
 
ಪೌರತ್ವ ತಿದ್ದುಪಡಿ ಮಸೂದೆ ಅಂಗೀಕಾರವಾದಾಗಿನಿಂದ  ಭಾರತದ  ಈಶಾನ್ಯ ರಾಜ್ಯಗಳು  ದೊಡ್ಡ ಪ್ರಮಾಣದ   ಪ್ರತಿಭಟನೆಗಳಿಗೆ  ಸಾಕ್ಷಿಯಾಗಿದೆ.
 
ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಲ್ಲಿ ಧಾರ್ಮಿಕ ಕಿರುಕುಳದಿಂದ ಭಾರತಕ್ಕೆ ವಲಸೆ ಬಂದ ಹಿಂದೂ, ಸಿಖ್, ಬೌದ್ಧ, ಜೈನ, ಪಾರ್ಸಿ ಮತ್ತು ಕ್ರಿಶ್ಚಿಯನ್ ನಿರಾಶ್ರಿತರಿಗೆ ಪೌರತ್ವ ಕಲ್ಪಿಸಲು ಹೊಸ ಕಾಯ್ದೆ ಅವಕಾಶ ನೀಡಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT