ಸಂಗ್ರಹ ಚಿತ್ರ 
ವಿದೇಶ

ದೇಶದ್ರೋಹ ಪ್ರಕರಣ: ಪಾಕ್ ಮಾಜಿ ಸರ್ವಾಧಿಕಾರಿ ಪರ್ವೇಜ್ ಮುಷರಫ್ ಗೆ ಗಲ್ಲು ಶಿಕ್ಷೆ: ಮಾಧ್ಯಮಗಳ ವರದಿ

ಪಾಕಿಸ್ತಾನದ ಮಾಜಿ ಸರ್ವಾಧಿಕಾರಿ ಫರ್ವೇಜ್ ಮುಷರಫ್ ಅವರಿಗೆ ಅಲ್ಲಿನ ವಿಶೇಷ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಪೇಶಾವರ್; ಪಾಕಿಸ್ತಾನದ ಮಾಜಿ ಸರ್ವಾಧಿಕಾರಿ ಫರ್ವೇಜ್ ಮುಷರಫ್ ಅವರಿಗೆ ಅಲ್ಲಿನ ವಿಶೇಷ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಅಧಿಕಾರಾವಧಿಯಲ್ಲಿ ಮುಷರಫ್ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಿತ್ತು. 2007ರ ನವೆಂಬರ್ ನಲ್ಲಿ ತಮ್ಮ ಅಧಿಕಾರ ಉಳಿಸಿಕೊಳ್ಳಲು ದೇಶದಲ್ಲಿ ಅನಗತ್ಯ ಮತ್ತು ಬಲವಂತ, ದುರುದ್ದೇಶಪೂರಿತ ಆಂತರಿಕ ತುರ್ತು ಪರಿಸ್ಥಿತಿ ಹೇರಿದ್ದರು. 2013ರವರೆಗೂ ಈ ಪ್ರಕರಣದ ವಿಚಾರಣೆ ನೆನೆಗುದಿಗೆ ಬಿದ್ದಿತ್ತು. ನವಾಜ್ ಷರೀಫ್ ಪ್ರಧಾನಿಯಾಗಿ ಅಧಿಕಾರಿ ಸ್ವೀಕರಿಸಿದ ಬಳಿಕ ಈ ಪ್ರಕರಣದ ವಿಚಾರಣೆಗೆ ಆದೇಶ ನೀಡಿದ್ದರು. ಬಳಿಕ ಮುಷರಫ್ ಲಂಡನ್ ಗೆ ಪಲಾಯನ ಗೈದಿದ್ದರು.

ದೇಶದ್ರೋಹ ಪ್ರಕರಣದಂತಹ ಗಂಭೀರ ಆರೋಪ ಎದುರಿಸುತ್ತಿದ್ದ ಫರ್ವೇಜ್ ಮುಷರಫ್​ ಕಳೆದ ನಾಲ್ಕು ವರ್ಷದ ಹಿಂದೆ ಲಂಡನ್​ ಗೆ ಪಲಾಯನ ಗೈದಿದ್ದರು. ಆದರೆ, ಕಳೆದ ಚುನಾವಣೆ ವೇಳೆಗೆ ಮತ್ತೆ ಪಾಕಿಸ್ತಾನಕ್ಕೆ ಆಗಮಿಸಿದ್ದ ಮುಷರಫ್ ಪ್ರಸ್ತುತ ದುಬೈನಲ್ಲಿ ನೆಲೆಸಿದ್ದಾರೆ ಎನ್ನಲಾಗುತ್ತಿದೆ. ಆದರೆ, ಮುಷರಫ್ ಮೇಲಿನ ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ತೀರ್ಪು ನೀಡಿರುವ ನ್ಯಾಯಾಲಯ ಮರಣ ದಂಡನೆ ಶಿಕ್ಷೆ ವಿಧಿಸಿದೆ.

ಪಾಕಿಸ್ತಾನ ಸೇನೆಯ ಸೇನಾಧಿಕಾರಿಯಾಗಿದ್ದ ಮುಷರಫ್​ 1999 ರಿಂದ 2008ರ ವರೆಗೆ ಪಾಕಿಸ್ತಾನದ ಸರ್ವಾಧಿಕಾರಿ ಅಧಿಕಾರ ನಡೆಸಿದ್ದರು. ಭಾರತ ಮತ್ತು ಪಾಕಿಸ್ತಾನದ ನಡುವೆ ಕಾರ್ಗಿಲ್ ಯುದ್ಧ ಇವರ ಕಾಲದಲ್ಲೇ ನಡೆದಿತ್ತು ಎಂಬುದನ್ನು ಗಮನಿಸಬಹುದು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT