ಸಂಗ್ರಹ ಚಿತ್ರ 
ವಿದೇಶ

ಕಡಲ್ಗಳ್ಳರಿಂದ 20 ಭಾರತೀಯರ ಅಪಹರಣ

ವಾಣಿಜ್ಯ ಹಡಗಿನಲ್ಲಿ ಪ್ರಯಾಣ ಮಾಡುತ್ತಿದ್ದ 20 ಭಾರತೀಯರನ್ನು ಆಫ್ರಿಕಾದ ಪಶ್ಚಿಮ ಕರಾವಳಿ ತೀರದ ಬಳಿ ಕಡಲ್ಗಳ್ಳರು ಅಪಹರಣ ಮಾಡಿದ್ದಾರೆ.

ನವದೆಹಲಿ: ವಾಣಿಜ್ಯ ಹಡಗಿನಲ್ಲಿ ಪ್ರಯಾಣ ಮಾಡುತ್ತಿದ್ದ 20 ಭಾರತೀಯರನ್ನು ಆಫ್ರಿಕಾದ ಪಶ್ಚಿಮ ಕರಾವಳಿ ತೀರದ ಬಳಿ ಕಡಲ್ಗಳ್ಳರು ಅಪಹರಣ ಮಾಡಿದ್ದಾರೆ.

ಅಪಹೃತ ಒತ್ತೆಯಾಳುಗಳ ಬಿಡುಗಡೆಗೆ, ಸುರಕ್ಷತೆಗೆ ವಿಶೇಷ ಗಮನ ಹರಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಹೇಳಿದ್ದಾರೆ. ಭಾರತ ಸರ್ಕಾರ ಈ ವಿಚಾರವನ್ನು ನೈಜೀರಿಯಾ ಸರ್ಕಾರದ ಗಮನಕ್ಕೆ ತಂದಿದೆ ಎನ್ನಲಾಗಿದೆ.

ಹಾಂಕಾಂಗ್ ಮೂಲದ ಹಡಗಿನಲ್ಲಿದ್ದ 18 ಮಂದಿ ಭಾರತೀಯರನ್ನು ಕಡಲ್ಗಳ್ಳರು ನೈಜೀರಿಯಾ ಕರಾವಳಿಯಲ್ಲಿ ಅಪಹರಿಸಿದ 10 ದಿನಗಳಲ್ಲೇ ಅಂಥ ಮತ್ತೊಂದು ಘಟನೆ ವರದಿಯಾಗಿದೆ.

"ಡಿಸೆಂಬರ್ 15ರಂದು ಎಂಟಿ ಡ್ಯೂಕ್ ಹಡಗಿನಲ್ಲಿದ್ದ 20 ಮಂದಿ ಭಾರತೀಯ ಸಿಬ್ಬಂದಿಯನ್ನು ಕಡಲ್ಗಳ್ಳರು ಅಪಹರಿಸಿರುವ ಬಗ್ಗೆ ಆತಂಕಿತರಾಗಿದ್ದೇವೆ" ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಹೇಳಿದ್ದಾರೆ. ಇದು ಒಂದು ವರ್ಷದಲ್ಲಿ ಕಡಲ್ಗಳ್ಳರು ಭಾರತೀಯರನ್ನು ಗುರಿ ಮಾಡಿದ ಮೂರನೇ ಘಟನೆಯಾಗಿದೆ. ಈ ವಿಚಾರವನ್ನು ಅಬುಜಾದಲ್ಲಿ ನೈಜೀರಿಯಾ ಅಧಿಕಾರಿಗಳ ಗಮಕ್ಕೆ ತರಲಾಗಿದೆ. ಜತೆಗೆ ಇತರ ನೆರೆ ರಾಷ್ಟ್ರಗಳ ಗಮನಕ್ಕೂ ತರಲಾಗಿದೆ ಎಂದು ವಿವರಿಸಿದ್ದಾರೆ.

ಅಪಹೃತ ಒತ್ತೆಯಾಳುಗಳ ಸುರಕ್ಷತೆಗೆ ಆದ್ಯಗಮನ ಹರಿಸಿ, ನೈಜೀರಿಯಾ ಅಧಿಕಾರಿಗಳು ಮತ್ತು ಇತರ ಹಕ್ಕುದಾರರ ಜತೆ ನಿಕಟವಾಗಿ ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ಕುಮಾರ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT