ಡೊನಾಲ್ಡ್ ಟ್ರಂಪ್ 
ವಿದೇಶ

ಅಧಿಕಾರ ದುರುಪಯೋಗ ಆರೋಪ: ಅಮೆರಿಕಾ ಅಧ್ಯಕ್ಷ ಟ್ರಂಪ್'ಗೆ ಸಂಸತ್ ವಾಗ್ದಂಡನೆ

ಅಧಿಕಾರ ದುರುಪಯೋಗಪಡಿಸಿಕೊಂಡ ಆರೋಪಕ್ಕೆ ತುತ್ತಾಗಿರುವ ಅಮೆರಿಕಾ ಆಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಅಮೆರಿಗಾದ ಸಂಸತ್ತಿನ ಕೆಳಮನೆಯಾದ ಹಾಗೂ ಡೆಮಾಕ್ರಟ್ ಬಹುಮತವಿರುವ ಹೌಸ್ ಆಫ್ ರೆಪ್ರೆಸೆಂಟೇಟಿವ್ (ಜನಪ್ರತಿನಿಧಿ ಸಭೆ) ಬುಧವಾರ ವಾಗ್ದಂಡನೆಗೆ ಗುರಿಪಡಿಸಿದೆ. 

ವಾಷಿಂಗ್ಟನ್: ಅಧಿಕಾರ ದುರುಪಯೋಗಪಡಿಸಿಕೊಂಡ ಆರೋಪಕ್ಕೆ ತುತ್ತಾಗಿರುವ ಅಮೆರಿಕಾ ಆಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಅಮೆರಿಗಾದ ಸಂಸತ್ತಿನ ಕೆಳಮನೆಯಾದ ಹಾಗೂ ಡೆಮಾಕ್ರಟ್ ಬಹುಮತವಿರುವ ಹೌಸ್ ಆಫ್ ರೆಪ್ರೆಸೆಂಟೇಟಿವ್ (ಜನಪ್ರತಿನಿಧಿ ಸಭೆ) ಬುಧವಾರ ವಾಗ್ದಂಡನೆಗೆ ಗುರಿಪಡಿಸಿದೆ.
 
ಈ ಮೂಲಕ ವಾಗ್ದಂಡನೆಗೆ ಗುರಿಯಾದ 3ನೇ ಅಧ್ಯಕ್ಷ ಎಂಬ ಅಪಖ್ಯಾತಿಗೆ ಡೊನಾಲ್ಡ್ ಟ್ರಂಪ್ ಗುರಿಯಾಗಿದ್ದಾರೆಂದು ಹೇಳಲಾಗುತ್ತಿದೆ. 

ಮುಂದಿನ ತಿಂಗಳು ಸಂಸತ್ತಿನ ಮೇಲ್ಮನೆಯಾದ ಸೆನಟ್ ನಲ್ಲಿ ವಾಗ್ದಂಡನೆ ಪ್ರಕ್ರಿಯೆಯ ಮೇಲೆ ಮತದಾನ ನಡೆಯಲಿದೆ. ಆದರೆ, ಸೆನೆಟ್ ನಲ್ಲಿ ಡೊನಾಲ್ಡ್ ಟ್ರಂಪ್ ನೇತೃತ್ವದ ರಿಪಬ್ಲಿಕ್ ಪಕ್ಷ ಬಹುಮತ ಹೊಂದಿರುವ ಕಾರಣದಿಂದ ವಾಗ್ದಂಡನೆ ಪ್ರಕ್ರಿಯೆಗೆ ಸೋಲಾಗುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. 

ಹೀಗಾಗಿ ಟ್ರಂಪ್ ಪದಚ್ಯುತಿ ಆಗುವ ಭೀತಿ ಇಲ್ಲ. ಇದೇ ವೇಳೆ ಹೌಸ್ ಆಫ್ ರೆಪ್ರೆಸೆಂಟೇಟಿವ್ ತಮ್ಮನ್ನು ವಾಗ್ದಂಡನೆ ಪ್ರಕ್ರಿಯೆ ಗುರಿಪಡಿಸಿದ್ದಕ್ಕೆ ಟ್ರಂಪ್ ಅವರು ಸರಣಿ ಟ್ವೀಟ್ ಮಾಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಟ್ರಂಪ್ ಅವರಿಗೆ ವಾಗ್ದಂಡನೆ ವಿಧಿಸುವ ಕುರಿತಂತೆ ಹೌಸ್ ಆಫ್ ರೆಪ್ರೆಸೆಂಟೇಟಿವ್ ನಲ್ಲಿ ಬುಧವಾರ ಸುಮಾರು 6 ಗಂಟೆಗಳ ಕಾಲ ಸುದೀರ್ಘ ಚರ್ಚೆ ನಡೆಸಲಾಯಿತು. ಬಳಿಕ ವಾಗ್ದಂಡನೆಯನ್ನು ಮತಕ್ಕೆ ಹಾಕಲಾಯಿತು. 435 ಸದಸ್ಯರ ಹೌಸ್ ಆಫ್ ರೆಪ್ರೆಸೆಂಟೇಟಿವ್ ನಲ್ಲಿ ವಾಗ್ದಂಡನೆ ಪ್ರಕ್ರಿಯೆ ಪಾಸಾಗಲು 216 ಮತಗಳ ಅಗತ್ಯವಿದ್ದು, ಈ ಸದನದಲ್ಲಿ ವಿಪಕ್ಷದವಾದ ಡೆಮಾಕ್ರಟ್ ಪಕ್ಷದ 232 ಸದಸ್ಯರಿದ್ದಾರೆ. 

ಮುಂಬರುವ ಅಧ್ಯಕ್ಷೀಯ ಚುನಾವಣೆಯಲ್ಲಿ ತಮ್ಮ ಎದುರಾಳಿಯಾಗಬಹುದಾದ ಜೋ ಬಿಡೆನ್ ಅವರ ವ್ಯಕ್ತಿತ್ವಕ್ಕೆ ಚ್ಯುತಿ ತರುವ ಮಾಹಿತಿಯನ್ನು ಬಹಿರಂಗಪಡಿಸುವಂತೆ ಟ್ರಂಪ್ ಅವರು ಉಕ್ರೇನ್ ಅಧ್ಯಕ್ಷ ವ್ಲಾದಿಮಿರ್ ಝೆಲೆನ್ಸ್ಕಿ ಅವರ ಮೇಲೆ ಒತ್ತರ ಹೇರುತ್ತಿದ್ದಾರೆಂಬ ಗಂಭೀರ ಆರೋಪ ಕೇಳಿಬಂದಿದೆ. ಇದಕ್ಕಾಗಿ ಅಮೆರಿಕಾದಿಂದ ಉಕ್ರೇನ್ ಸೇನಾ ಕಾರ್ಯಾಚಱಣೆಗಾಗಿ ಬಿಡುಗಡೆಯಾದ 400 ಮಿಲಿಯನ್ ಡಾಲರ್'ನ್ನು ಟ್ರಂಪ್ ತಡೆಹಿಡಿದಿದ್ದಾರೆನ್ನಲಾಗುತ್ತಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT