ಸಂಗ್ರಹ ಚಿತ್ರ 
ವಿದೇಶ

ದುಬೈಗೆ ಹೊರಟಿದ್ದ ವಿಮಾನದ ಹೈಜಾಕ್ ಗೆ ವಿಫಲಯತ್ನ; ಓರ್ವ ಬಂದೂಕುಧಾರಿ ಬಂಧನ

ಢಾಕಾದಿಂದ ದುಬೈಗೆ ಹಾರಿದ್ದ ವಿಮಾನವೊಂದನ್ನು ಹೈಜಾಕ್ ಮಾಡಲು ಯತ್ನಿಸಿರುವ ಆಘಾತಕಾರಿ ಘಟನೆ ವರದಿಯಾಗಿದೆ.

ಢಾಕಾ: ಢಾಕಾದಿಂದ ದುಬೈಗೆ ಹಾರಿದ್ದ ವಿಮಾನವೊಂದನ್ನು ಹೈಜಾಕ್ ಮಾಡಲು ಯತ್ನಿಸಿರುವ ಆಘಾತಕಾರಿ ಘಟನೆ ವರದಿಯಾಗಿದೆ.
ಬಾಂಗ್ಲಾದೇಶ ರಾಜಧಾನಿ ಢಾಕಾದಿಂದ ದುಬೈಗೆ ಹೋಗುತ್ತಿದ್ದ ವಿಮಾನವೊಂದನ್ನು ದುಷ್ಕರ್ಮಿಗಳು ಹೈಜಾಕ್ ಮಾಡಲು ಯತ್ನಿಸಿದ ಘಟನೆ ವರದಿಯಾಗಿದ್ದು, ವಿಮಾನದೊಳಗಿದ್ದ ಬಂದೂಕುಧಾರಿಯೊಬ್ಬ ಗುಂಡು ಹಾರಿಸುತ್ತಾ ಕಾಕ್ ಪಿಟ್ ಗೆ ನುಗ್ಗಲು ಯತ್ನಿಸಿದ್ದಾನೆ. ಈ ವೇಳೆ ವಿಮಾನವನ್ನು ಚಿತ್ತಗಾಂಗ್ ಏರ್​ಪೋರ್ಟ್ ನಲ್ಲಿ ಸಂಜೆ 5:15ಕ್ಕೆ ತುರ್ತಾಗಿ ಲ್ಯಾಂಡಿಂಗ್ ಮಾಡಿಸಿದ್ದಾನೆ. ಆಗ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಒಬ್ಬ ಹೈಜಾಕರ್ ನನ್ನು ಹಿಡಿಯುವಲ್ಲಿ ಸಫಲರಾಗಿದ್ದಾರೆ ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ.
ಬಾಂಗ್ಲಾದೇಶದ ಬಿಮಾನ್ ಬಾಂಗ್ಲಾದೇಶ ಏರ್ ಲೈನ್ಸ್ ಗೆ ಸೇರಿದ ಬಿಜಿ-147 ವಿಮಾನದಲ್ಲಿ ಈ ಘಟನೆ ನಡೆದಿದ್ದು, ಅದೃಷ್ಟಕ್ಕೆ ವಿಮಾನದ ಯಾವುದೇ ಪ್ರಯಾಣಿಕರಿಗೆ ಜೀವಹಾನಿಯಾಗಿರುವ ಮಾಹಿತಿ ಬಂದಿಲ್ಲ. ಆದರೆ ಘಟನೆಯಲ್ಲಿ ವಿಮಾನದ ಕೆಲ ಸಿಬ್ಬಂದಿಗೆ ಗುಂಡೇಟು ತಗುಲಿದೆ ಎನ್ನಲಾಗಿದೆ.  ವಿಮಾನವನ್ನು ವಶಕ್ಕೆ ಪಡೆಯಲು ಯತ್ನಿಸಿದ ಹೈಜಾಕರ್ ಯಾರೆಂಬುದು ಇನ್ನೂ ಗೊತ್ತಾಗಿಲ್ಲ. ಆತ ಕಾಕ್​ಪಿಟ್ ಗೆ ನುಗ್ಗಿ ಪೈಲಟ್ ಗಳನ್ನು ಬೆದರಿಸಿ ಚಿತ್ತಗಾಂಗ್​ನಲ್ಲೇ ಲ್ಯಾಂಡ್ ಮಾಡಿಸಿದ್ದಾನೆ. ತಾನು ಪ್ರಧಾನಿಯೊಂದಿಗೆ ಮಾತನಾಡಬೇಕು ಎಂದು ಬೇಡಿಕೆ ಇಟ್ಟಿದ್ದ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿಕೆ ನೀಡಿದ್ದನ್ನು ಕೆಲ ಮಾಧ್ಯಮಗಳು ವರದಿ ಮಾಡಿವೆ.
ಆದರೆ, ಇನ್ನೂ ಕೆಲ ವರದಿಗಳ ಪ್ರಕಾರ ಚಿತ್ತಗಾಂಗ್ ನಿಂದ ದುಬೈಗೆ ಹೊರಟಿದ್ದ ವಿಮಾನದಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬನ ಬಳಿ ಗನ್ ಇದ್ದದ್ದನ್ನ ಸಹಪ್ರಯಾಣಿಕರು ಗಮನಿಸಿದ್ದಾರೆ. ಈ ವೇಳೆ ವಿಮಾನದ ಸಿಬ್ಬಂದಿಯನ್ನು ಈ ಬಗ್ಗೆ ಎಚ್ಚರಿಸಿದ್ದಾರೆ. ಆಗ ಕೂಡಲೇ ಏರ್ ಪೋರ್ಟ್​​ನಲ್ಲೇ ವಿಮಾನವನ್ನು ತುರ್ತಾಗಿ ಇಳಿಸಲಾಗಿದೆ. ಆ ಬಳಿಕ ಎಲ್ಲಾ 142 ಪ್ರಯಾಣಿಕರನ್ನು ಸುರಕ್ಷಿತವಾಗಿ ಇಳಿಸಿ, ಬಂದೂಕುಧಾರಿಯನ್ನು ಬಂಧಿಸಲಾಗಿದೆ.
ಬಾಂಗ್ಲಾದೇಶದ ಪೊಲೀಸರ ಪ್ರಕಾರ ಈ ಶಂಕಿತ ವ್ಯಕ್ತಿಯ ಕೈಯಲ್ಲಿ ಬಾಂಬ್ ಇತ್ತೆನ್ನಲಾಗಿದೆ. ಆತನನ್ನು ವಿಚಾರಣೆಗೊಳಪಡಿಸಿದಾಗ ಆತನಿಗೆ ಮಾನಸಿಕ ಸಮಸ್ಯೆ ಇರುವುದು ಗೊತ್ತಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT