ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ 
ವಿದೇಶ

ಶಾಂತಿ ಸ್ಥಾಪನೆಗೆ ಒಂದು ಅವಕಾಶ ಕೊಡಿ: ಭಾರತಕ್ಕೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಮನವಿ

ಪುಲ್ವಾಮಾ ಭಯೋತ್ಪಾದಕ ದಾಳಿ ಬಗ್ಗೆ ಭಾರತ ಕ್ರಿಯಾಶೀಲ ಗುಪ್ತಚರ ಒದಗಿಸಿದರೆ ಪಾಕಿಸ್ತಾನ ತಕ್ಷಣವೇ ಅದಕ್ಕೆ ಪ್ರತಿಕ್ರಿಯೆ ನೀಡಲಿದೆ.ತಮ್ಮ ಮಾತಿಗೆ ಬದ್ಧನಾಗಿದ್ದು ಶಾಂತಿ ನೆಲೆಸಲು ಅವಕಾಶ ನೀಡಬೇಕೆಂದು ...

ಇಸ್ಲಾಮಾಬಾದ್: ಪುಲ್ವಾಮಾ ಭಯೋತ್ಪಾದಕ ದಾಳಿ ಬಗ್ಗೆ ಭಾರತ ಕ್ರಿಯಾಶೀಲ ಗುಪ್ತಚರ ಒದಗಿಸಿದರೆ ಪಾಕಿಸ್ತಾನ ತಕ್ಷಣವೇ ಅದಕ್ಕೆ ಪ್ರತಿಕ್ರಿಯೆ ನೀಡಲಿದೆ. ತಮ್ಮ ಮಾತಿಗೆ ಬದ್ಧನಾಗಿದ್ದು ಶಾಂತಿ ನೆಲೆಸಲು ಅವಕಾಶ ನೀಡಬೇಕೆಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಪುನರುಚ್ಛರಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ರಾಜಸ್ತಾನದಲ್ಲಿ ರ್ಯಾಲಿಯೊಂದರಲ್ಲಿ ಮಾತನಾಡುತ್ತಿದ್ದಾಗ, ಭಯೋತ್ಪಾದನೆ ವಿರುದ್ಧ ಇಡೀ ವಿಶ್ವದಲ್ಲಿ ಸಹಮತ ವ್ಯಕ್ತವಾಗಿದೆ. ಭಯೋತ್ಪಾದನೆ ನಡೆಸುವವರನ್ನು ಮತ್ತು ಅದಕ್ಕೆ ಕುಮ್ಮಕ್ಕು ನೀಡುವವರನ್ನು ಶಿಕ್ಷಿಸಲು ನಾವು ಮುಂದಡಿ ಇಡುತ್ತಿದ್ದೇವೆ. ಈ ಬಾರಿ ಭಯೋತ್ಪಾದನೆ ವಿರುದ್ಧ ಹೋರಾಡುವ ಸೂಕ್ತ ಸಮಯ ಬಂದಿದೆ. ಭಾರತ ಬದಲಾಗುತ್ತಿದೆ. ಸೈನಿಕರು ಹುತಾತ್ಮರಾದ ನೋವನ್ನು ಮರೆಯಲು ಸಾಧ್ಯವಿಲ್ಲ. ಭಯೋತ್ಪಾದನೆ ವಿರುದ್ಧ ಹೇಗೆ ಹೋರಾಡಬೇಕೆಂದು ಮತ್ತು ಅದನ್ನು ಹೇಗೆ ಮಟ್ಟ ಹಾಕಬೇಕೆಂದು ನಮಗೆ ಗೊತ್ತಿದೆ ಎಂದು ಹೇಳಿದ್ದರು.
ನಾನು ಪ್ರಧಾನಿಯಾದಾಗ ನರೇಂದ್ರ ಮೋದಿ ಅವರಿಗೆ ಮಾತು ಕೊಟ್ಟಿದ್ದೆ. ಬಡತನ ಮತ್ತು ಅನಕ್ಷರಸ್ಥತೆಯ ವಿರುದ್ಧ ಒಟ್ಟಾಗಿ ಹೋರಾಡೋಣ ಎಂದು. ಆ ಮಾತಿಗೆ ನಾನು ಬದ್ಧನಾಗಿದ್ದೇನೆ. ಶಾಂತಿಗೆ ಒಂದು ಅವಕಾಶ ನೀಡಿ. ಪುಲ್ವಾಮಾ ದಾಳಿಗೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು ನಾನು ನಿಮಗೆ ನೀಡುತ್ತೇನೆ" ಎಂದು ಇಮ್ರಾನ್ ಖಾನ್ ಮನವಿ ಮಾಡಿದ್ದಾರೆ.
ಇಮ್ರಾನ್ ಖಾನ್ ಅವರು ಪಾಕಿಸ್ತಾನದ ಪ್ರಧಾನಿಯಾದ ನಂತರ ತಾವು ದೂರವಾಣಿ ಕರೆ ಮಾಡಿ ಅವರಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿದ ಸಂದರ್ಭದಲ್ಲಿ ಬಡತನ ಮತ್ತು ಅನಕ್ಷರತೆ ವಿರುದ್ಧ ಒಟ್ಟಾಗಿ ಹೋರಾಡಬೇಕು ಎಂದು ಹೇಳಿದ್ದಾಗ ನಾನು ಪ್ಯಾಥನ್ ಮಗ ಎಂದು ಇಮ್ರಾನ್ ಹೇಳಿದ್ದರು,ಪ್ಯಾಥನ್ ಎಂದರೆ ಇರಾನಿನ ಒಂದು ಜನಾಂಗ. ಇವರು ಪ್ರಾಮಾಣಿಕತೆ ಮತ್ತು ಸತ್ಯಕ್ಕೆ ಹೆಸರಾದವರು. ಆದರೆ ಇಂದು ಅವರು ತಮ್ಮ ಮಾತಿನ ಪ್ರಕಾರ ನಡೆದುಕೊಳ್ಳುತ್ತಿಲ್ಲ ಎಂದು ಮೋದಿ ಟೀಕಿಸಿದ್ದರು.
ಈ ಎಲ್ಲಾ ಬೆಳವಣಿಗೆಗಳ ನಂತರ ನಿನ್ನೆ ಪಾಕಿಸ್ತಾನ ಪ್ರಧಾನಿ ಸಚಿವಾಲಯ ಹೇಳಿಕೆ ಹೊರಡಿಸಿದ್ದು ಅದರಲ್ಲಿ, ಪ್ರಧಾನಿ ಇಮ್ರಾನ್ ಖಾನ್ ಅವರು ತಮ್ಮ ಮಾತಿಗೆ ಬದ್ಧವಾಗಿದ್ದು ಭಾರತ ನಮಗೆ ಕ್ರಿಯಾಶೀಲ ಗುಪ್ತಚರ ಕೊಟ್ಟರೆ ನಾವು ತಕ್ಷಣವೇ ಕಾರ್ಯಪ್ರವೃತ್ತವಾಗುತ್ತೇವೆ ಎಂದು ಹೇಳಿದ್ದಾರೆ. ಪ್ರಧಾನಿ ಮೋದಿ ಶಾಂತಿಗೆ ಒಂದು ಅವಕಾಶ ಕೊಡಿ ಎಂದು ಇಮ್ರಾನ್ ಖಾನ್ ಹೇಳಿದ್ದಾರೆ ಎಂದು ಹೇಳಿಕೆಯಲ್ಲಿ ಇದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT