ಇಮ್ರಾನ್ ಖಾನ್ 
ವಿದೇಶ

ಭಾರತ ಶಾಂತಿ ಪ್ರಸ್ತಾಪಗಳಿಗೆ ಪ್ರತಿಕ್ರಿಯಿಸುತ್ತಿಲ್ಲ- ಇಮ್ರಾನ್ ಖಾನ್

ಭಾರತ ಶಾಂತಿ ಪ್ರಸ್ತಾಪಗಳಿಗೆ ಪ್ರತಿಕ್ರಿಯಿಸುತ್ತಿಲ್ಲ ಎಂದು ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್ ಆರೋಪಿಸಿದ್ದಾರೆ. ಪರಮಾಣು ಶಸ್ತ್ರಸಜ್ಜಿತ ರಾಷ್ಟ್ರಗಳ ನಡುವಿನ ಯಾವುದೇ ಯುದ್ಧವು ನಮ್ಮನ್ನು ನಾವೇ ಹತ್ಯೆ ಮಾಡಿಕೊಂಡಂತಾಗುತ್ತದೆ ಎಂದಿದ್ದಾರೆ.

ಇಸ್ಲಾಮಾಬಾದ್ : ಭಾರತ ಶಾಂತಿ ಪ್ರಸ್ತಾಪಗಳಿಗೆ ಪ್ರತಿಕ್ರಿಯಿಸುತ್ತಿಲ್ಲ ಎಂದು ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್ ಆರೋಪಿಸಿದ್ದಾರೆ. ಪರಮಾಣು ಶಸ್ತ್ರಸಜ್ಜಿತ ರಾಷ್ಟ್ರಗಳ ನಡುವಿನ ಯಾವುದೇ ಯುದ್ಧವು ನಮ್ಮನ್ನು ನಾವೇ ಹತ್ಯೆ ಮಾಡಿಕೊಂಡಂತಾಗುತ್ತದೆ ಎಂದಿದ್ದಾರೆ.

ಟರ್ಕಿ ದೇಶದ ನ್ಯೂಸ್ ಎಜೆನ್ಸಿಯೊಂದಕ್ಕೆ ನೀಡಿದ ಸಂದರ್ಶದಲ್ಲಿ ಮಾತನಾಡಿರುವ ಇಮ್ರಾನ್ ಖಾನ್, ಶೀತಲ ಸಮರವೂ ಸಹ ಎರಡು ದೇಶಗಳ ಹಿತಾಸಕ್ತಿಯಲ್ಲ , ಭಾರತದೊಂದಿಗೆ ಮತ್ತೆ ಮಾತುಕತೆ ನಡೆಸಬೇಕೆಂದು ಬಯಸಿರುವುದಾಗಿ ತಿಳಿಸಿದ್ದಾರೆ.

ಪರಮಾಣು ಶಸ್ತ್ರಸಜ್ಜಿತ ಎರಡು ರಾಷ್ಟ್ರಗಳು ಯುದ್ಧ ಮಾಡುವ ಅಥವಾ ಶೀತಲ ಸಮರದ ಉದ್ದೇಶ ಹೊಂದಿಲ್ಲ. ಏಕೆಂದರೆ ಇದರಿಂದ ಯಾವುದೇ ಸಮಯದಲ್ಲೂ ಹೆಚ್ಚಿನ ಹಾನಿಯಾಗಬಹುದು, ದ್ವಿಪಕ್ಷೀಯ ಮಾತುಕತೆಯೊಂದೆ ಪರ್ಯಾಯ ಮಾರ್ಗವಾಗಿದೆ. ಎರಡು ರಾಷ್ಟ್ರಗಳ ನಡುವಿನ ಯುದ್ಧ ಆತ್ಮಹತ್ಯೆ ಮಾಡಿಕೊಂಡಂತೆ ಎಂದು ಅವರು ಹೇಳಿದ್ದಾರೆ.

ಶಾಂತಿ ಪ್ರಸ್ತಾಪಗಳಿಗೆ ಭಾರತ  ಪ್ರತಿಕ್ರಿಯಿಸುತ್ತಿಲ್ಲ, ಈ ನಿಟ್ಟಿನಲ್ಲಿ ಭಾರತ ಒಂದು ಹೆಜ್ಜೆ ಮುಂದಿಟ್ಟರೆ ನಾವು ಎರಡು ಹೆಜ್ಡೆ ಮುಂದಿಡುತ್ತೇವೆ. ಆದರೆ, ಮಾತುಕತೆಗಾಗಿ ಅನೇಕ ಬಾರಿ ಪ್ರಯತ್ನಿಸಿದ್ದರೂ ಭಾರತ ತಿರಸ್ಕರಿಸುತ್ತಿದೆ ಎಂದು ಖಾನ್ ಹೇಳಿದ್ದಾರೆ.


2016ರಲ್ಲಿ ಪಾಕಿಸ್ತಾನದ ಮೂಲಕ ಉಗ್ರರು ದಾಳಿ ನಡೆಸಿದ ನಂತರ ಭಾರತ- ಪಾಕಿಸ್ತಾನ ನಡುವಿನ ಒಪ್ಪಂದಗಳು ತಗ್ಗಿದ್ದವು. ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾರತ ಸರ್ಜಿಕಲ್ ಸ್ಟ್ರೈಕ್ ನಡೆಸಿದ ಬಳಿಕ ಉಭಯ ರಾಷ್ಟ್ರಗಳ ನಡುವೆ ಯಾವುದೇ ದ್ವಿಪಕ್ಷೀಯ ಮಾತುಕಗಳು ನಡೆದಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

SCROLL FOR NEXT