ನೇಪಾಳ ಪ್ರವಾಹ 
ವಿದೇಶ

ನೇಪಾಳ ಪ್ರವಾಹ: ಸಾವಿನ ಸಂಖ್ಯೆ 43ಕ್ಕೆ ಏರಿಕೆ, ಇನ್ನೂ 24 ಮಂದಿ ನಾಪತ್ತೆ

ನೇಪಾಳದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಉಂಟಾಗಿರುವ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ ಭಾನುವಾರ 43ಕ್ಕೆ ಏರಿಕೆಯಾಗಿದ್ದು, ಇನ್ನೂ 24ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಕಠ್ಮಂಡು: ನೇಪಾಳದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಉಂಟಾಗಿರುವ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ ಭಾನುವಾರ 43ಕ್ಕೆ ಏರಿಕೆಯಾಗಿದ್ದು, ಇನ್ನೂ 24ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ರಾಜಧಾನಿ ಕಠ್ಮಂಡು ಸೇರಿದಂತೆ ನೇಪಾಳದಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು, ಗುರುವಾರ ಒಂದೇ ದಿನ 100 ಮೀ.ಮೀ ಗೂ ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿದ ಪರಿಣಾಮ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. 2008ರ ಬಳಿಕ ಇದೇ ಮೊದಲ ಬಾರಿಗೆ ಕೋಸಿ ನದಿ ಅಪಾಯದಮಟ್ಟ ಮೀರಿ ಹರಿಯುತ್ತಿದ್ದು, ಎಲ್ಲಾ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ. 
ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ನೇಪಾಳ ಗೃಹಸಚಿವಾಲಯ, 'ರಕ್ಷಣಾ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ. ಮುಳುಗಡೆ ಪ್ರದೇಶಗಳಲ್ಲಿ ವಾಸವಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ. ನೂರಾರು ಗಂಜಿ ಕೇಂದ್ರಗಳನ್ನು ತೆರೆದು ಜನರಿಗೆ ಆಹಾರ ಮತ್ತು ಬಟ್ಟೆಯನ್ನು ವಿತರಣೆ ಮಾಡಲಾಗುತ್ತಿದೆ ಎಂದು ಹೇಳಿದೆ.
ಬಿಹಾರಕ್ಕೂ ಪ್ರವಾಹ ಭೀತಿ
ಇನ್ನು ನೇಪಾಳದ ಕೋಸಿ ನದಿಯ ತೀರವನ್ನು ಹಂಚಿಕೊಂಡಿರುವ ಭಾರತ ಬಿಹಾರಕ್ಕೂ ಪ್ರವಾಹ ಭೀತಿ ಆರಂಭವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ನದಿ ತೀರದ ಪ್ರದೇಶಗಳಲ್ಲಿನ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ಸರ್ಕಾರ ಸೂಚನೆ ನೀಡಿದೆ. ಅಂತೆಯೇ ಅಸ್ಸಾಂ ಮತ್ತು ಅರುಣಾಚಲ ಪ್ರದೇಶದಲ್ಲೂ ಭಾರಿ ಮಳೆ ಸುರಿಯುತ್ತಿದ್ದು, ಇಲ್ಲಿ ಮಳೆಯಿಂದಾಗಿ ಸಂಭವಿಸಿದ ವಿವಿಧ ದುರಂತದಲ್ಲಿ 7ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT