ಸಂಗ್ರಹ ಚಿತ್ರ 
ವಿದೇಶ

ಕಣ್ಣೊರೆಸುವ ತಂತ್ರಗಾರಿಕೆ ಬೇಡ.. ಉಗ್ರರ ವಿರುದ್ಧ ಕಠಿಣ ಕ್ರಮ ಜರುಗಿಸಿ: ಮತ್ತೆ ಪಾಕ್ ಗೆ ತಿವಿದ ಅಮೆರಿಕ

ಉಗ್ರ ಹಫೀಜ್ ಸಯ್ಯೀದ್ ನನ್ನು ಬಂಧಿಸಿದ ಪಾಕಿಸ್ತಾನ ಸರ್ಕಾರದ ಕ್ರಮಕ್ಕೆ ಅಮೆರಿಕ ಸರ್ಕಾರ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಉಗ್ರನ ಬಂಧನವನ್ನು ಕಣ್ಣೊರೆಸುವ ತಂತ್ರಗಾರಿಕೆ ಎಂದು ಕಿಡಿಕಾರಿದೆ.

ವಾಷಿಂಗ್ಟನ್: ಉಗ್ರ ಹಫೀಜ್ ಸಯ್ಯೀದ್ ನನ್ನು ಬಂಧಿಸಿದ ಪಾಕಿಸ್ತಾನ ಸರ್ಕಾರದ ಕ್ರಮಕ್ಕೆ ಅಮೆರಿಕ ಸರ್ಕಾರ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಉಗ್ರನ ಬಂಧನವನ್ನು ಕಣ್ಣೊರೆಸುವ ತಂತ್ರಗಾರಿಕೆ ಎಂದು ಕಿಡಿಕಾರಿದೆ.
ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಶ್ವೇತಭವನ, ಪಾಕಿಸ್ತಾನ ಉಗ್ರರ ವಿರುದ್ಧ ಕ್ರಮ ಕೈಗೊಂಡರೆ ಅದಕ್ಕೆ ನಮ್ಮ ಬೆಂಬಲವಿದೆ. ಆದರೆ ಈ ಕಾರ್ಯ ಕೇವಲ ಕಣ್ಣೊರೆಸುವ ತಂತ್ರಗಾರಿಕೆಯಾಗಬಾರದು. ಪಾಕಿಸ್ತಾನದೊಂದಿಗೆ ಹಳಿಸಿರುವ ಬಾಂಧವ್ಯವನ್ನು ಸರಿಪಡಿಸಿಕೊಳ್ಳಲು ಅಮೆರಿಕ ಸಿದ್ಧವಿದೆ. ಆದರೆ ಪಾಕಿಸ್ತಾನ ತನ್ನ ನೆಲದಲ್ಲಿರುವ ಉಗ್ರರರನ್ನು ಮೊದಲು ಮಟ್ಟ ಹಾಕಬೇಕು. ಈ ಕುರಿತ ಪ್ರಾಮಾಣಿಕ ಪ್ರಯತ್ನವಾದರೆ ಮಾತ್ರ ಪಾಕಿಸ್ತಾನಕ್ಕೆ ಅಮೆರಿಕದ ಬೆಂಬಲ ವಿರಲಿದೆ ಎಂದು ಸ್ಪಷ್ಟಪಡಿಸಿದೆ.
ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರ ಬಹು ನಿರೀಕ್ಷಿತ ಅಮೆರಿಕ ಪ್ರವಾಸಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಅಮೆರಿಕ ಸರ್ಕಾರದ ಈ ಪ್ರಕ್ರಿಯೆ ಪಾಕಿಸ್ತಾನವನ್ನು ತೀವ್ರ ಮುಜುಗರಕ್ಕೀಡು ಮಾಡಿದೆ. ಈ ಹಿಂದೆ ಭಾರತ ಸರ್ಕಾರ ನೀಡಿದ್ದ ಡಾಸಿಯರ್ ಹೊರತಾಗಿಯೂ ಯಾವುದೇ ಕ್ರಮ ಕೈಗೊಳ್ಳದ ಪಾಕಿಸ್ತಾನ, ಇದೀಗ ಇಮ್ರಾನ್ ಖಾನ್ ಅವರ ಅಮೆರಿಕ ಪ್ರವಾಸ ಹತ್ತಿರವಾಗುತ್ತಲೇ ಉಗ್ರ ಹಫೀಜ್ ಸಯ್ಯೀದ್ ನನ್ನು ಬಂಧಿಸಿದೆ. ಆ ಮೂಲಕ ಪರೋಕ್ಷವಾಗಿ ಪರೋಕ್ಷವಾಗಿ ಅಮೆರಿಕವನ್ನು ಸಂತೈಸುವ ಕ್ರಮಕ್ಕೆ ಮುಂದಾಗಿದೆ. ಅಲ್ಲದೆ ಪಾಕಿಸ್ತಾನ ಸರ್ಕಾರಕ್ಕೆ ಅಮೆರಿಕ ನೀಡುತ್ತಿದ್ದ, ರಕ್ಷಣಾ ಪರಿಹಾರ ಧನ ಕೂಡ ಸ್ಥಗಿತವಾಗಿದ್ದು, ಈಗಾಗಲೇ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಪಾಕಿಸ್ತಾನಕ್ಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ.  ಇದೇ ಕಾರಣಕ್ಕೆ ಪಾಕಿಸ್ತಾನ ಉಗ್ರ ಹಫೀಜ್ ಸಯ್ಯೀದ್ ಬಂಧನದ ಮೂಲಕ ವಿಶ್ವ ಸಮುದಾಯವನ್ನು ಸಂತೈಸುವ ಕೆಲಸಕ್ಕೆ ಮುಂದಾಗಿದೆ. 
ಇದೇ ಸೋಮವಾರ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರು ಅಮೆರಿಕಕ್ಕೆ ತೆರಳಲಿದ್ದು, ಈ ವೇಳೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರನ್ನು ಭೇಟಿ ಮಾಡಿ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT