ಸಂಗ್ರಹ ಚಿತ್ರ 
ವಿದೇಶ

ಭಾರತೀಯ ರಾಯಭಾರ ಕಚೇರಿಯಲ್ಲಿ ಇಫ್ತಾರ್ ಔತಣಕೂಟ, ಅಧಿಕಾರಿಗಳಿಗೆ ಪಾಕ್ ಸೇನಾಪಡೆಗಳ ಕಿರುಕುಳ

ಪವಿತ್ರ ರಂಜಾನ್​ ಮಾಸದ ನಿಮಿತ್ತ ಪಾಕಿಸ್ತಾನದಲ್ಲಿನ ಭಾರತೀಯ ರಾಯಭಾರ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ಇಫ್ತಾರ್​ ಕೂಟದಲ್ಲಿ ಭಾರತೀಯ ಅಧಿಕಾರಿಗಳಿಗೆ ಪಾಕ್ ಸೇನಾಪಡೆ ಅಧಿಕಾರಿಗಳು ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದೆ.

ಇಸ್ಲಾಮಾಬಾದ್: ಪವಿತ್ರ ರಂಜಾನ್​ ಮಾಸದ ನಿಮಿತ್ತ ಪಾಕಿಸ್ತಾನದಲ್ಲಿನ ಭಾರತೀಯ ರಾಯಭಾರ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ಇಫ್ತಾರ್​ ಕೂಟದಲ್ಲಿ ಭಾರತೀಯ ಅಧಿಕಾರಿಗಳಿಗೆ ಪಾಕ್ ಸೇನಾಪಡೆ ಅಧಿಕಾರಿಗಳು ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದೆ.
ಪಾಕಿಸ್ತಾನದ ಇಸ್ಲಾಮಾಬಾದ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ಅಧಿಕಾರಿಗಳು ಇಫ್ತಾರ್ ಔತಣಕೂಟ ಆಯೋಜಿಸಿದ್ದರು. ಭಾರತದ ರಾಯಭಾರ ಕಚೇರಿ ಅಧಿಕಾರಿಗಳು ಇಸ್ಲಾಮಾಬಾದ್​ನ ಹೋಟೆಲ್​ ಸೆರೆನಾದಲ್ಲಿ ಇಫ್ತಾರ್​ ಕೂಟ ಆಯೋಜಿಸಿದ್ದರು. ಪಾಕಿಸ್ತಾನದ ಹಲವು ಅತಿಗಣ್ಯ, ಗಣ್ಯ ವ್ಯಕ್ತಿಗಳು ಸೇರಿ ಸಹಸ್ರಾರು ಜನರನ್ನು ಕೂಟಕ್ಕೆ ಆಹ್ವಾನಿಸಿದ್ದರು. ಆಹ್ವಾನ ಮನ್ನಿಸಿ ದೊಡ್ಡ ಸಂಖ್ಯೆಯಲ್ಲಿ ಅತಿಥಿಗಳು ಆಗಮಿಸಿದ್ದರು.
ಆದರೆ, ಹೋಟೆಲ್​ ಅನ್ನು ಸುತ್ತುವರಿದ ಪಾಕ್​ ಸೇನಾಪಡೆ ಯೋಧರು ಇಫ್ತಾರ್​ ಕೂಟಕ್ಕೆ ಆಗಮಿಸುತ್ತಿದ್ದ ಅತಿಥಿಗಳಿಗೆ ಪ್ರಾಣಭೀತಿ ಒಡ್ಡಿದ್ದಲ್ಲದೆ, ಮೊನಚಾದ ಮಾತುಗಳಿಂದ ಚುಚ್ಚಿ ಮಾನಸಿಕ ಕಿರುಕುಳ ನೀಡಿದರು. ಅವರೆಲ್ಲರನ್ನೂ ಅವಮಾನಿಸಿ ಕೂಟದಲ್ಲಿ ಪಾಲ್ಗೊಳ್ಳದೆ ಹಾಗೆಯೇ ಹಿಂದಿರುಗುವಂತೆ ಮಾಡಿದ್ದಾಗಿ ಭಾರತದ ರಾಯಭಾರ ಕಚೇರಿ ಅಧಿಕಾರಿಗಳು ದೂರಿದ್ದಾರೆ.
ಕೂಟದಲ್ಲಿ ಪಾಲ್ಗೊಳ್ಳಲು ಪಾಕಿಸ್ತಾನದ ನೂರಾರು ಗಣ್ಯರು ಕೂಡ ಆಗಮಿಸಿದ್ದರು. ಇದೇ ಸಂದರ್ಭದಲ್ಲಿ ಭದ್ರತೆಗೆ ಆಗಮಿಸಿದ್ದ ಪಾಕ್​ ಸೇನಾ ಸಿಬ್ಬಂದಿ ಗಣ್ಯರಿಗೆ ಪ್ರಾಣ ಭೀತಿ ಒಡ್ಡಿದ್ದಲ್ಲದೆ, ನಾನಾ ಬಗೆಯ ಕಿರುಕುಳ ಕೊಟ್ಟು, ಅವಮಾನ ಮಾಡಿ ವಾಪಸು ಕಳುಹಿಸಿದ್ದಾರೆ ಎನ್ನಲಾಗಿದೆ. ಯೋಧರು ಅಕ್ಷರಶಃ ಹೋಟೆಲ್​ ಅನ್ನು ಸುತ್ತುವರಿದ್ದಿದ್ದರು. ನಂಬರ್​ ಮರೆಮಾಚಿದ ಮೊಬೈಲ್​ಫೋನ್​ನಿಂದ ಕರೆ ಮಾಡಿ, ಅತಿಥಿಗಳನ್ನು ಹೊರಕರೆದು ಅವಮಾನಿಸಿದ್ದಾಗಿ ಭಾರತದ ರಾಯಭಾರ ಕಚೇರಿ ಅಧಿಕಾರಿಗಳು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!