ನೆಚ್ಚಿನ ಸ್ಥಳದಲ್ಲಿ ಈದ್ ಪ್ರಾರ್ಥನೆ ಸಲ್ಲಿಸಲು ಉಗ್ರ ಹಫೀಜ್ ಸಯೀದ್ ಗೆ ಅನುಮತಿ ನಿರಾಕರಿಸಿದ ಪಾಕ್! 
ವಿದೇಶ

ನೆಚ್ಚಿನ ಸ್ಥಳದಲ್ಲಿ ಈದ್ ಪ್ರಾರ್ಥನೆ ಸಲ್ಲಿಸಲು ಉಗ್ರ ಹಫೀಜ್ ಸಯೀದ್ ಗೆ ಅನುಮತಿ ನಿರಾಕರಿಸಿದ ಪಾಕ್!

ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಉಗ್ರ ಹಫೀಜ್ ಸಯೀದ್ ಗೆ ಆತನ ನೆಚ್ಚಿನ ಸ್ಥಳದಲ್ಲಿ ಈದ್ ಪ್ರಾರ್ಥನೆ ಸಲ್ಲಿಸಲು ಅಲ್ಲಿನ ಸರ್ಕಾರ ಅನುಮತಿ ನಿರಾಕರಿಸಿದೆ.

ಲಾಹೋರ್: ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಉಗ್ರ ಹಫೀಜ್ ಸಯೀದ್ ಗೆ ಆತನ ನೆಚ್ಚಿನ ಸ್ಥಳದಲ್ಲಿ ಈದ್ ಪ್ರಾರ್ಥನೆ ಸಲ್ಲಿಸಲು ಅಲ್ಲಿನ ಸರ್ಕಾರ ಅನುಮತಿ ನಿರಾಕರಿಸಿದೆ. 
ಲಾಹೋರ್ ನಲ್ಲಿರುವ ಕಡ್ಡಾಫಿ ಸ್ಟೇಡಿಯಂ ಹಫೀಜ್ ಸಯೀದ್ ನ ನೆಚ್ಚಿನ ತಾಣವಾಗಿದ್ದು, ಅಲ್ಲಿ ಪ್ರಾರ್ಥನೆ ಸಲ್ಲಿಸಲು ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ  ಆತ ಲಾಹೋರ್ ನಲ್ಲಿರುವ ಜೌಹಾರ್ ಟೌನ್ ನಿವಾಸದ ಬಳಿ ಇರುವ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾನೆ.
ಕಡ್ಡಾಫಿ ಸ್ಟೇಡಿಯಂ ನಲ್ಲಿ ಪ್ರಾರ್ಥನೆ ಸಲ್ಲಿಸುವಂತಿಲ್ಲ, ಒಂದು ವೇಳೆ ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಹೋದದ್ದೇ ಆದರೆ ಬಂಧಿಸಲಾಗುವುದು ಎಂಬ ಎಚ್ಚರಿಕೆಯನ್ನು ಪಂಜಾಬ್ ಸರ್ಕಾರ ರವಾನೆ ಮಾಡಿತ್ತು. ಬೇರೆ ಮಾರ್ಗವಿಲ್ಲದೇ ಹಫೀದ್ ಸಯೀದ್ ತನ್ನ ನೆಚ್ಚಿನ ಸ್ಥಳದ ಬದಲು ಮನೆಯ ಬಳಿಯೇ ಇದ್ದ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾನೆ. ಹಫೀಜ್ ಸಯೀದ್ ಈ ವರೆಗೂ ಆತ ಪ್ರತಿ ವರ್ಷದ ಈದ್ ಪ್ರಾರ್ಥನೆಯನ್ನು ಯಾವುದೇ ಹಿಂಜರಿಕೆ ಇಲ್ಲದೇ ಕಡ್ಡಾಫಿ ಸ್ಟೇಡಿಯಂ ನಲ್ಲೇ ಮುಂದುವರೆಸುತ್ತಿದ್ದ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT