ಕೊಲಂಬೊಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಗೆ ಭವ್ಯ ಸ್ವಾಗತ ಕೋರಿದ ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘೆ 
ವಿದೇಶ

ಶ್ರೀಲಂಕಾಕ್ಕೆ ಬಂದಿಳಿದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ; ಈಸ್ಟರ್ ಬಾಂಬ್ ದಾಳಿಯಲ್ಲಿ ಮೃತಪಟ್ಟವರಿಗೆ ಗೌರವ ನಮನ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ ಮಾಲ್ಡೀವ್ಸ್ ನಿಂದ ಮತ್ತೊಂದು ದ್ವೀಪ ರಾಷ್ಟ್ರ ಶ್ರೀಲಂಕಾಕ್ಕೆ ಬಂದಿಳಿದರು. ದ್ವೀಪ ರಾಷ್ಟ್ರಗಳೊಂದಿಗೆ ...

ಕೊಲಂಬೊ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ ಮಾಲ್ಡೀವ್ಸ್ ನಿಂದ ಮತ್ತೊಂದು ದ್ವೀಪ ರಾಷ್ಟ್ರ ಶ್ರೀಲಂಕಾಕ್ಕೆ ಬಂದಿಳಿದರು. ದ್ವೀಪ ರಾಷ್ಟ್ರಗಳೊಂದಿಗೆ ದ್ವಿಪಕ್ಷೀಯ ಸಂಬಂಧವನ್ನು ಬಲಪಡಿಸಲು ಮೋದಿಯವರ ಈ ಭೇಟಿಯಾಗಿದ್ದು ಭಾರತ ನೆರೆ ದೇಶಗಳೊಂದಿಗೆ ಹೊಂದಲು ಉದ್ದೇಶಿಸಿರುವ ಬಾಂಧವ್ಯ ನೀತಿಯನ್ನು ಇದು ಸಾರುತ್ತದೆ. 
ಶ್ರೀಲಂಕಾಗೆ ಬಂದಿಳಿದ ಮೋದಿಯವರನ್ನು ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘೆ ಬಂಡಾರನಾಯಿಕೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಭೂತಪೂರ್ವವಾಗಿ ಸ್ವಾಗತಿಸಿದರು. ತಮ್ಮ ಭೇಟಿಯಲ್ಲಿ ಮೋದಿಯವರು ಇಂದು ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಮತ್ತು ಅಲ್ಲಿನ ವಿರೋಧ ಪಕ್ಷದ ನಾಯಕರನ್ನು ಭೇಟಿ ಮಾಡಲಿದ್ದಾರೆ.
ಕೊಲಂಬೊ ರಾಜಧಾನಿಗೆ ಬಂದಿಳಿದ ಮೋದಿಯವರು ಕಳೆದ ಏಪ್ರಿಲ್ ನಲ್ಲಿ ಈಸ್ಟರ್ ಸಂಡೆ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟವರಿಗೆ ಗೌರವ ನಮನ ಸಲ್ಲಿಸಿದರು. ಬಾಂಬ್ ಸ್ಫೋಟ ನಡೆದ ಸ್ಥಳಕ್ಕೆ ಹೋಗಿ ಅಲ್ಲಿ ಗಿಡ ನೆಟ್ಟು ಶಾಂತಿ, ಸೌಹಾರ್ದತೆಯ ಸಂದೇಶ ಸಾರಿದರು. 
ಕಳೆದ ಏಪ್ರಿಲ್ ನಲ್ಲಿ ಇಸ್ಲಾಮಿಕ್ ಸ್ಟೇಟ್ ಸಂಘಟನೆಯ ಬಾಂಬ್ ದಾಳಿಯಲ್ಲಿ ಸುಮಾರು 253 ಮಂದಿ ಶ್ರೀಲಂಕಾ ನಾಗರಿಕರು ಮೃತಪಟ್ಟಿದ್ದರು. 
ಇನ್ನು ಮಾಲ್ಡೀವ್ಸ್ ನಲ್ಲಿ ತಮಗೆ ಸಿಕ್ಕಿರುವ ಅಭೂತಪೂರ್ವ ಸ್ವಾಗತ ಮತ್ತು ಪ್ರೀತಿಗೆ ಪ್ರಧಾನಿ ಮೋದಿ ಮಾರು ಹೋಗಿದ್ದು ತಮ್ಮ ಎರಡು ದಿನಗಳ ದ್ವೀಪ ರಾಷ್ಟ್ರಗಳ ಭೇಟಿಯಿಂದ ಉತ್ತಮವಾದ ಫಲಿತಾಂಶ ಹೊರಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ರಿಪಬ್ಲಿಕನ್ ಮಾಲ್ಡೀವ್ ದೇಶದ ನಾಗರಿಕರೇ, ನಿಮ್ಮ ದೇಶದಲ್ಲಿ ಸಿಕ್ಕಿರುವ ನನಗೆ ಸಿಕ್ಕಿರುವ ಅಭೂತಪೂರ್ವ ಸ್ವಾಗತಕ್ಕೆ ನಾನು ಮಾರುಹೋದೆ. ಸರ್ಕಾರದ ಆತಿಥ್ಯ ಕೂಡ ಇಷ್ಟವಾಗಿದೆ. ದ್ವಿಪಕ್ಷೀಯ ಸಂಬಂಧಕ್ಕೆ ಹೊಸ ದಿಕ್ಕು ನೀಡಲಿದೆ ಎಂದು ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
ಎರಡನೇ ಬಾರಿಗೆ ಪ್ರಧಾನಿಯಾದ ನಂತರ ವಿದೇಶಕ್ಕೆ ಪ್ರಧಾನಿ ಮೋದಿ ಮೊದಲು ಭೇಟಿ ನೀಡಿದ ದೇಶ ಮಾಲ್ಡೀವ್ಸ್.
ಇಂದು ಸಂಜೆ ಮೋದಿಯವರು ನೇರವಾಗಿ ತಿರುಪತಿ ದೇವಸ್ಥಾನಕ್ಕೆ ಆಗಮಿಸಿ ನಂತರ ದೆಹಲಿಗೆ ವಾಪಸ್ಸಾಗಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!