ಜಾಕಿರ್ ನಾಯ್ಕ್ 
ವಿದೇಶ

ಜಾಕಿರ್ ನಾಯ್ಕ್ ನ್ನು ಗಡಿಪಾರು ಮಾಡದೇ ಇರುವ ಹಕ್ಕು ಮಲೇಷ್ಯಾಗೆ ಇದೆ: ಪ್ರಧಾನಿ ಮಹತಿರ್ ಮೊಹಮ್ಮದ್

ವಿವಾದಿತ ಇಸ್ಲಾಮಿಕ್ ಧರ್ಮ ಪ್ರಚಾರಕ ಜಾಕಿರ್ ನಾಯ್ಕ್ ನ್ನು ಗಡಿಪಾರು ಮಾಡದೇ ಇರುವ ಹಕ್ಕು ಮಲೇಷ್ಯಾಗೆ ಇದೆ ಎಂದು ಅಲ್ಲಿನ ಪ್ರಧಾನಿ ಮಹತಿರ್ ಮೊಹಮ್ಮದ್ ಹೇಳಿದ್ದಾರೆ.

ಕೌಲಾಲಾಂಪುರ್: ವಿವಾದಿತ ಇಸ್ಲಾಮಿಕ್ ಧರ್ಮ ಪ್ರಚಾರಕ ಜಾಕಿರ್ ನಾಯ್ಕ್ ನ್ನು ಗಡಿಪಾರು ಮಾಡದೇ ಇರುವ ಹಕ್ಕು ಮಲೇಷ್ಯಾಗೆ ಇದೆ ಎಂದು ಅಲ್ಲಿನ ಪ್ರಧಾನಿ ಮಹತಿರ್ ಮೊಹಮ್ಮದ್ ಹೇಳಿದ್ದಾರೆ. 
ಭಾರತಕ್ಕೆ ಮರಳಿದರೆ ತಮ್ಮ ವಿರುದ್ಧದ ಪ್ರಕರಣಗಳಲ್ಲಿ ನ್ಯಾಯಸಮ್ಮತವಾದ ವಿಚಾರಣೆ ನಡೆಯುವುದಿಲ್ಲ ಎಂದು ಹೇಳಿರುವ ಜಾಕಿರ್ ನಾಯ್ಕ್ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾನೆ. 
2016 ರಲ್ಲಿ ಭಾರತವನ್ನು ತೊರೆದಿದ್ದ ಜಾಕಿರ್ ನಾಯ್ಕ್ ಮುಸ್ಲಿಂ ರಾಷ್ಟ್ರ ಮಲೇಷ್ಯಾದಲ್ಲಿ ಆಶ್ರಯ ಪಡೆದಿದ್ದು, ಶಾಶ್ವತ ವಾಸಸ್ಥಾನವನ್ನು ಪಡೆದುಕೊಂಡಿದ್ದಾನೆ. ಜಾಕಿರ್ ನಾಯ್ಕ್ ಬಗ್ಗೆ ಅಲ್ಲಿನ ಪ್ರಧಾನಿ ಮಹತಿರ್ ಮಾತನಾಡಿದ್ದು, ಆತ  ಭಾರತಕ್ಕೆ ಹೋದರೆ ನ್ಯಾಯ ಸಮ್ಮತವಾದ ವಿಚಾರಣೆ ನಡೆಯುವುದಿಲ್ಲ ಎಂದೆನಿಸಿದೆ ಎಂದು ನೀಡಿರುವ ಹೇಳಿಕೆ ಈಗ ಬಹಿರಂಗವಾಗಿದೆ.  
ಇದೇ ಪ್ರಕರಣವನ್ನು ಆಸ್ಟ್ರೇಲಿಯಾದಲ್ಲಿ ತಲೆ ಮರೆಸಿಕೊಂಡಿದ್ದ ಮಲೇಷ್ಯಾಗೆ ಬೇಕಿದ್ದ ಮಾಜಿ ಪೊಲೀಸ್ ಕಮಾಂಡೋ ಸಿರೌಲ್ ಅಝರ್ ಉಮರ್ ಪ್ರಕರಣಕ್ಕೆ ಹೋಲಿಸಿರುವ ಮಹತಿರ್, ನಾವು ಆಸ್ಟ್ರೇಲಿಯಾದವರಿಗೆ ಸಿರೌಲ್ ನನ್ನು ಗಡಿಪಾರು ಮಾಡುವಂತೆ ಮನವಿ ಮಾಡಿದ್ದೆವು, ಆದರೆ ಅವರು ನಾವು ಅವನನ್ನು ಗಲ್ಲಿಗೇರಿಸುತ್ತೇವೆ ಎಂದು ಹೆದರಿದ್ದರು ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

SCROLL FOR NEXT