ಜಾಕಿರ್ ನಾಯ್ಕ್ 
ವಿದೇಶ

ಜಾಕಿರ್ ನಾಯ್ಕ್ ನ್ನು ಗಡಿಪಾರು ಮಾಡದೇ ಇರುವ ಹಕ್ಕು ಮಲೇಷ್ಯಾಗೆ ಇದೆ: ಪ್ರಧಾನಿ ಮಹತಿರ್ ಮೊಹಮ್ಮದ್

ವಿವಾದಿತ ಇಸ್ಲಾಮಿಕ್ ಧರ್ಮ ಪ್ರಚಾರಕ ಜಾಕಿರ್ ನಾಯ್ಕ್ ನ್ನು ಗಡಿಪಾರು ಮಾಡದೇ ಇರುವ ಹಕ್ಕು ಮಲೇಷ್ಯಾಗೆ ಇದೆ ಎಂದು ಅಲ್ಲಿನ ಪ್ರಧಾನಿ ಮಹತಿರ್ ಮೊಹಮ್ಮದ್ ಹೇಳಿದ್ದಾರೆ.

ಕೌಲಾಲಾಂಪುರ್: ವಿವಾದಿತ ಇಸ್ಲಾಮಿಕ್ ಧರ್ಮ ಪ್ರಚಾರಕ ಜಾಕಿರ್ ನಾಯ್ಕ್ ನ್ನು ಗಡಿಪಾರು ಮಾಡದೇ ಇರುವ ಹಕ್ಕು ಮಲೇಷ್ಯಾಗೆ ಇದೆ ಎಂದು ಅಲ್ಲಿನ ಪ್ರಧಾನಿ ಮಹತಿರ್ ಮೊಹಮ್ಮದ್ ಹೇಳಿದ್ದಾರೆ. 
ಭಾರತಕ್ಕೆ ಮರಳಿದರೆ ತಮ್ಮ ವಿರುದ್ಧದ ಪ್ರಕರಣಗಳಲ್ಲಿ ನ್ಯಾಯಸಮ್ಮತವಾದ ವಿಚಾರಣೆ ನಡೆಯುವುದಿಲ್ಲ ಎಂದು ಹೇಳಿರುವ ಜಾಕಿರ್ ನಾಯ್ಕ್ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾನೆ. 
2016 ರಲ್ಲಿ ಭಾರತವನ್ನು ತೊರೆದಿದ್ದ ಜಾಕಿರ್ ನಾಯ್ಕ್ ಮುಸ್ಲಿಂ ರಾಷ್ಟ್ರ ಮಲೇಷ್ಯಾದಲ್ಲಿ ಆಶ್ರಯ ಪಡೆದಿದ್ದು, ಶಾಶ್ವತ ವಾಸಸ್ಥಾನವನ್ನು ಪಡೆದುಕೊಂಡಿದ್ದಾನೆ. ಜಾಕಿರ್ ನಾಯ್ಕ್ ಬಗ್ಗೆ ಅಲ್ಲಿನ ಪ್ರಧಾನಿ ಮಹತಿರ್ ಮಾತನಾಡಿದ್ದು, ಆತ  ಭಾರತಕ್ಕೆ ಹೋದರೆ ನ್ಯಾಯ ಸಮ್ಮತವಾದ ವಿಚಾರಣೆ ನಡೆಯುವುದಿಲ್ಲ ಎಂದೆನಿಸಿದೆ ಎಂದು ನೀಡಿರುವ ಹೇಳಿಕೆ ಈಗ ಬಹಿರಂಗವಾಗಿದೆ.  
ಇದೇ ಪ್ರಕರಣವನ್ನು ಆಸ್ಟ್ರೇಲಿಯಾದಲ್ಲಿ ತಲೆ ಮರೆಸಿಕೊಂಡಿದ್ದ ಮಲೇಷ್ಯಾಗೆ ಬೇಕಿದ್ದ ಮಾಜಿ ಪೊಲೀಸ್ ಕಮಾಂಡೋ ಸಿರೌಲ್ ಅಝರ್ ಉಮರ್ ಪ್ರಕರಣಕ್ಕೆ ಹೋಲಿಸಿರುವ ಮಹತಿರ್, ನಾವು ಆಸ್ಟ್ರೇಲಿಯಾದವರಿಗೆ ಸಿರೌಲ್ ನನ್ನು ಗಡಿಪಾರು ಮಾಡುವಂತೆ ಮನವಿ ಮಾಡಿದ್ದೆವು, ಆದರೆ ಅವರು ನಾವು ಅವನನ್ನು ಗಲ್ಲಿಗೇರಿಸುತ್ತೇವೆ ಎಂದು ಹೆದರಿದ್ದರು ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ