ಜೈಷ್ ಉಗ್ರ ರಾಣಾ ಜಾವೇದ್ ವಿಡಿಯೋ 
ವಿದೇಶ

ಆತ್ಮಹತ್ಯೆಗೆ ಮುನ್ನ ಫೇಸ್ ಬುಕ್ ಲೈವ್ ನಲ್ಲಿ ಬಾಲಾಕೋಟ್ ರೋಚಕ ಮಾಹಿತಿ ಬಿಚ್ಚಿಟ್ಟ ಮಾಜಿ ಜೈಷ್ ಉಗ್ರ!

ಉಗ್ರ ವಿಚಾರಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ನೀಚ ಬುದ್ದಿ ಮತ್ತೆ ಜಗತ್ತಿನ ಮುಂದೆ ಬಟಾ ಬಯಲಾಗಿದ್ದು, ಈ ಬಾರಿ ಸ್ವತಃ ಪಾಕಿಸ್ತಾನದ ಪ್ರಜೆ ಹಾಗೂ ಮಾಜಿ ಜೈಷ್ ಉಗ್ರ ಫೇಸ್ ಬುಕ್ ಲೈವ್ ಮೂಲಕ ಪಾಕಿಸ್ತಾನಗ ನಿಜ ಮುಖವಾಡದ ದರ್ಶನ ಮಾಡಿಸಿದ್ದಾನೆ.

ಇಸ್ಲಾಮಾಬಾದ್​: ಉಗ್ರ ವಿಚಾರಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ನೀಚ ಬುದ್ದಿ ಮತ್ತೆ ಜಗತ್ತಿನ ಮುಂದೆ ಬಟಾ ಬಯಲಾಗಿದ್ದು, ಈ ಬಾರಿ ಸ್ವತಃ ಪಾಕಿಸ್ತಾನದ ಪ್ರಜೆ ಹಾಗೂ ಮಾಜಿ ಜೈಷ್ ಉಗ್ರ ಫೇಸ್ ಬುಕ್ ಲೈವ್ ಮೂಲಕ ಪಾಕಿಸ್ತಾನಗ ನಿಜ ಮುಖವಾಡದ ದರ್ಶನ ಮಾಡಿಸಿದ್ದಾನೆ.
ದಶಕಗಳಿಂದಲೂ ಉಗ್ರರನ್ನು ಪೋಷಣೆ ಮಾಡುತ್ತಾ ಬಂದಿರುವ ಪಾಕಿಸ್ತಾನ ಜಾಗತಿಕ ಸಮುದಾಯಕ್ಕೆ ಮಾತ್ರ ತಾನು ಉಗ್ರ ವಿರೋಧಿ ಎಂದು ಹೇಳಿಕೊಳ್ಳುತ್ತಿತ್ತು. ಉಗ್ರರೊಂದಿಗೆ ನಾವು ಕೈ ಜೋಡಿಸಿಲ್ಲ, ಉಗ್ರರ ದಮನಕ್ಕೆ ನಾವು ಕ್ರಮಕೈಗೊಳುತ್ತಿದ್ದೇವೆ ಎಂದು ಹೇಳಿಕೊಳ್ಳುತ್ತಿತ್ತು. ಆದರೆ ಇದೀಗ ಸ್ವತಃ ಪಾಕಿಸ್ತಾನ ಕೃಪಾ ಪೋಷಿತ ಜೈಶ್ ಇ ಮೊಹಮದ್ ಉಗ್ರ ಸಂಘಟನೆಯ ಮಾಜಿ ಉಗ್ರನೋರ್ವ ಪಾಕಿಸ್ತಾನ ಸರ್ಕಾರ ಮತ್ತು ಸೇನೆಯ ಮುಖವಾಡವನ್ನು ಫೇಸ್ ಬುಕ್ ಲೈವ್ ನಲ್ಲಿ ಕಳಚಿದ್ದಾನೆ. 
ರಾಣಾ ಜಾವೇದ್​ ಎಂಬ ಪಾಕ್​ ಪ್ರಜೆ ಸೋಮವಾರ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ತನ್ನ ಫೇಸ್​ಬುಕ್​ ಖಾತೆಯಲ್ಲಿ ವಿಡಿಯೋ ಅಪ್​ಲೋಡ್​ ಮಾಡಿದ್ದಾನೆ. ವಿಡಿಯೋದಲ್ಲಿ ಭಾರತ ಸೇರಿದಂತೆ ವಿಶ್ವದೆಲ್ಲೆಡೆ ಭಯೋತ್ಪಾದನೆಯನ್ನು ಹರಡಲು ಪಾಕಿಸ್ತಾನ ಉಗ್ರರಿಗೆ ನೆರವಾಗಿ ನಿಂತಿದ್ದು, ಆರ್ಥಿಕವಾಗಿ ಮತ್ತು ನೈತಿಕವಾಗಿ ಬೆಂಬಲ ನೀಡುತ್ತಿದೆ. ಉಗ್ರರಿಗಾಗಿಯೇ ನಿಧಿಯನ್ನು ಸಂಗ್ರಹಿಸಿ ಉಗ್ರ ಕೃತ್ಯಕ್ಕೆ ವಿನಿಯೋಗ ಮಾಡುತ್ತಿರುವ ಬಗ್ಗೆ ಆತ ಮಾಹಿತಿ ನೀಡಿದ್ದಾನೆ ತಿಳಿಸಿದ್ದಾನೆ. 
ರಾಣಾ ಪಾಕ್​ನ ಮಾಜಿ ಯೋಧ ಹಾಗೂ ಜೈಷ್​ ಇ ಮೊಹಮ್ಮದ್​ ಸಂಘಟನೆಯ ಮಾಜಿ ಉಗ್ರ. ತಾನು ಅಪ್​ಲೋಡ್​ ಮಾಡಿರುವ 42 ಸೆಂಕೆಡಿನ ವಿಡಿಯೋ ಸಂದೇಶದಲ್ಲಿ ಪಾಕಿಸ್ತಾನಿ ಸೇನೆ ಯುವಕರನ್ನು ಜಿಹಾದ್​ ಕಡೆ ಪ್ರಚೋದಿಸುತ್ತದೆ ಎಂಬ ಕರಾಳತೆಯನ್ನು ಬಿಚ್ಚಿಟ್ಟಿದ್ದಾನೆ. ವಿಡಿಯೋದಲ್ಲಿ ಪಾಕಿಸ್ತಾನದ ಬಾಲಾಕೋಟ್ ​ನಲ್ಲಿನ ಜೈಷ್​ ಇ ಮೊಹಮ್ಮದ್​ ಉಗ್ರ ಸಂಘಟನೆಯ ವಿರುದ್ಧ ಭಾರತ ನಡೆಸಿದ ವೈಮಾನಿಕ ದಾಳಿಯ ಕುರಿತು ಮಾತನಾಡಿರುವ ರಾಣಾ, ಬಾಲಾಕೋಟ್ ನಲ್ಲಿ ಉಗ್ರರ ಕ್ಯಾಂಪ್​ ಇಲ್ಲ ಎಂಬ ಪಾಕ್​ ವಾದವನ್ನೇ ತಳ್ಳಿಹಾಕಿದ್ದಾನೆ. ಬಾಲಾಕೋಟ್ ನಲ್ಲಿ ಜೆಇಎಂ ಉಗ್ರ ತರಬೇತಿ ಕೇಂದ್ರಗಳನ್ನು ಹೊಂದಿದ್ದು, ಭಾರತದೊಳಗೆ ಉಗ್ರರನ್ನು ಕಳುಹಿಸಲು ಅಲ್ಲಿ ತಯಾರಿ ನಡೆಯುತ್ತಿರುತ್ತದೆ. ಅಲ್ಲದೇ ವಿಶ್ವದೆಲ್ಲಡೆ ದಾಳಿಗಳನ್ನು ನಡೆಸಲು ಸಂಚು ರೂಪಿಸಲಾಗುತ್ತದೆ ಎಂದು ಬಹಿರಂಗಪಡಿಸಿದ್ದಾನೆ.
ಉಗ್ರ ಸಂಘಟನೆಯಲ್ಲಿದ್ದು ಪಡಬಾರದ ಹಿಂಸೆ ಪಟ್ಟಿದ್ದೆ. ಬಳಿಕ ನನ್ನ ತಂದೆಯ ಮನವಿಯ ಮೇರೆಗೆ ನಾನು ಭಯೋತ್ಪಾದನೆಯನ್ನು ಬಿಟ್ಟು ಮುಖ್ಯವಾಹಿನಿಗೆ ಮರಳಿದೆ. ಇಸ್ಲಾಂ ಹೆಸರಿನಲ್ಲಿ ಈ ದೇಶದ ಸೇನೆ ಪಾಕ್​ ನಲ್ಲಿ ವಿಷಬೀಜವನ್ನು ಬಿತ್ತುತ್ತಿದೆ. ಆದರೆ, ಪಾಕ್ ನಲ್ಲಿ ಪ್ರಜಾಪ್ರಭುತ್ವವನ್ನು ಉಳಿಸುವಂತೆ ಅಂತಾರಾಷ್ಟ್ರೀಯ ಸಮುದಾಯಗಳ ಮುಂದೆ ಮನವಿ ಮಾಡುವುದು ನಾಚಿಕೆಗೇಡಿನ ಸಂಗತಿ ಎಂದು ತಮ್ಮ ದೇಶದ ವ್ಯವಸ್ಥೆಯನ್ನೇ ಜರಿದಿದ್ದಾನೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಮುಂದಿನ CM ಡಿಕೆ.ಶಿವಕುಮಾರ್; ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ, ಮಧ್ಯಾಹ್ನ 2.30ಕ್ಕೆ ರಾಜೀನಾಮೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT