ಮಾರ್ಕಂಡೇಯ ಕಾಟ್ಜು-ಇಮ್ರಾನ್ ಖಾನ್ 
ವಿದೇಶ

ಪಾಕ್ ಪ್ರಧಾನಿ ಇಮ್ರಾನ್ ಖಾನ್‌ಗೆ ನೊಬೆಲ್ ಶಾಂತಿ ಪ್ರಶಸ್ತಿ ಕೊಡ್ಬೇಕು! ಮಾರ್ಕಂಡೇಯ ಕಾಟ್ಜು ಹೀಗೆ ಹೇಳಿದ್ದೇಕೆ?

ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರನ್ನು ಸುರಕ್ಷಿತವಾಗಿ ಭಾರತಕ್ಕೆ ಹಸ್ತಾಂತರಿಸುವ ಹೇಳಿಕೆ ನೀಡಿದ್ದ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಇದರೊಂದಿಗೆ...

ನವದೆಹಲಿ: ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರನ್ನು ಸುರಕ್ಷಿತವಾಗಿ ಭಾರತಕ್ಕೆ ಹಸ್ತಾಂತರಿಸುವ ಹೇಳಿಕೆ ನೀಡಿದ್ದ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಇದರೊಂದಿಗೆ ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆಯನ್ನು ಶಮನಗೊಳಿಸಲು ಯತ್ನಿಸಿದ್ದು ಅವರು ನೊಬೆಲ್ ಶಾಂತಿ ಪ್ರಶಸ್ತಿಗೆ ಅರ್ಹರು ಎಂದು ಮಾಜಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾದ ಮಾರ್ಕಂಡೇಯ ಕಾಟ್ಜು ಹೇಳಿರುವುದಾಗಿ ಪಾಕ್ ಮಾಧ್ಯಮ ವರದಿ ಮಾಡಿದೆ.
ಮಾರ್ಕಂಡೇಯ ಕಾಟ್ಜು ಅವರು ಟ್ವೀಟ್ ಮಾಡಿದ್ದು ಅದರಲ್ಲಿ ಪಾಕ್ ಸಂಸತ್ ನಲ್ಲಿ ಇಮ್ರಾನ್ ಖಾನ್ ಅವರ ಭಾಷಣವು ಪ್ರೌಢತೆ, ಸಮತೋಲಿನ ಮತ್ತು ಸಂಪೂರ್ಣ ಬುದ್ಧಿವಂತಿಕೆಯಿಂದ ಕೂಡಿತ್ತು. ಎರಡು ದೇಶಗಳ ನಡುವೆ ಯುದ್ಧ ಯಾವುದಕ್ಕೂ ಪರಿಹಾರವಲ್ಲ ಎಂಬುದನ್ನು ಶಾಂತವಾಗಿ ವಿವರಿಸಿದ್ದರು. ಅವರ ಈ ಮಾತು ಇಡೀ ಜಗತ್ತಿಗೆ ಅನ್ವಯಿಸುತ್ತದೆ. ಅವರು ನೊಬೆಲ್ ಪ್ರಶಸ್ತಿಗೆ ಅರ್ಹರಾಗಿದ್ದಾರೆ ಎಂದು ಟ್ವೀಟಿಸಿದ್ದರು.
ಇದೇ ಟ್ವೀಟ್ ಅನ್ನು ಮುಂದಿಟ್ಟುಕೊಂಡು ಪಾಕಿಸ್ತಾನ ಮಾಧ್ಯಮ ಕಾಟ್ಜು ಅವರನ್ನು ಮಾತನಾಡಿ ಅಭಿಪ್ರಾಯವನ್ನು ಕೇಳಿದ್ದು ಈ ವೇಳೆ ಸಹ ಕಾಟ್ಜು ಅವರು ಇಮ್ರಾನ್ ಖಾನ್ ರನ್ನು ಹೊಗಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT