ಜೈಶ್ ಇ ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ 
ವಿದೇಶ

ನಮ್ಮ ದೇಶದಲ್ಲಿ ಜೈಶ್ ಉಗ್ರ ಸಂಘಟನೆ ಅಸ್ತಿತ್ವದಲ್ಲೇ ಇಲ್ಲ: ಪಾಕ್ ಸೇನೆ

ಪುಲ್ವಾಮ ಉಗ್ರ ದಾಳಿಯ ಹೊಣೆಹೊತ್ತ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಸಂಬಂಧಿಸಿದಂತೆ ಯೂಟರ್ನ್ ಹೊಡೆದಿರುವ ಪಾಕಿಸ್ತಾನ...

ಇಸ್ಲಾಮಾಬಾದ್: ಪುಲ್ವಾಮ ಉಗ್ರ ದಾಳಿಯ ಹೊಣೆಹೊತ್ತ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಸಂಬಂಧಿಸಿದಂತೆ ಯೂಟರ್ನ್ ಹೊಡೆದಿರುವ ಪಾಕಿಸ್ತಾನ, ಅದು ನಮ್ಮ ದೇಶದಲ್ಲಿ ಅಸ್ತಿತ್ವದಲ್ಲೇ ಇಲ್ಲ ಎಂದು ಬುಧವಾರ ಹೇಳಿದೆ.
ಫೆಬ್ರವರಿ 28ರಂದು ಸಿಎನ್ಎನ್ ಗೆ ನೀಡಿದ ಸಂದರ್ಶದಲ್ಲಿ ಪಾಕಿಸ್ತಾನದ ವಿದೇಶಾಂಗ ಸಚಿವ ಶಾಹ್ ಮಹಮ್ಮೂದ್ ಖುರೇಷಿ ಅವರು, ಜೈಶ್ ಮುಖ್ಯಸ್ಥ ತಮ್ಮ ದೇಶದಲ್ಲೇ ಇರುವುದಾಗಿ ಹೇಳಿದ್ದರು. ಈಗ ಖುರೇಷಿ ಹೇಳಿಕೆಯನ್ನು ತಳ್ಳಿಹಾಕಿರುವ ಪಾಕ್ ಸೇನೆಯ ವಕ್ತಾರ ಮೇಜರ್​ ಜನರಲ್​ ಆಸಿಫ್​ ಗಫೂರ್​ ಅವರು, ಜೈಶ್ - ಇ-ಮೊಹಮ್ಮದ್ ಸಂಘಟನೆ ನಮ್ಮ ದೇಶದಲ್ಲಿ ಅಸ್ತಿತ್ವದಲ್ಲಿಯೇ ಇಲ್ಲ ಎಂದಿದ್ದಾರೆ.
ಜೈಶ್ ಉಗ್ರ ಸಂಘಟನೆ ಪುಲ್ವಾಮ ಉಗ್ರ ದಾಳಿಯ ಹೊಣೆ ಹೊತ್ತಿರುವುದಾಗಿ ನಮ್ಮ ದೇಶದಿಂದ ಹೇಳಿಲ್ಲ. ಆ ಸಂಘಟನೆಯನ್ನು ಪಾಕಿಸ್ತಾನ ಮತ್ತು ವಿಶ್ವಸಂಸ್ಥೆ ಸಹ ನಿಷೇಧಿಸಿವೆ ಎಂದು ಗಫೂರ್ ಅವರು ಹೇಳಿದ್ದಾರೆ.
ಬಾಲಕೋಟ್ ವೈಮಾನಿಕ ದಾಳಿಯ ನಂತರ ಭಾರತ-ಪಾಕ್ ನಡುವೆ ಯುದ್ಧ ಪರಿಸ್ಥಿತಿ ನಿರ್ಮಾಣವಾದ ಬಗ್ಗೆ ಸಿಎನ್ಎನ್ ಗೆ ಪ್ರತಿಕ್ರಿಯಿಸಿದ ಗಫೂರ್ ಅವರು, ಭಾರತ ಆಕ್ರಮಣಶೀಲತೆ ಪ್ರದರ್ಶಿಸಿದ್ದರಿಂದ ಯುದ್ಧ ಸನ್ನಿವೇಶ ನಿರ್ಮಾಣವಾಗಿತ್ತು. ಅದಕ್ಕೆ ನಾವು ತಕ್ಕ ಪ್ರತ್ಯುತ್ತರ ಸಹ ನೀಡಿದ್ದೇವೆ ಎಂದರು.
ಎಲ್ಒಸಿ ಬಳಿ ದಶಕದಿಂದಲೂ ಉಭಯ ದೇಶಗಳ ಸೇನಾಪಡೆಗಳಿವೆ. ಆದರೆ ಅವರು ನಮ್ಮ ವಾಯುಗಡಿಯನ್ನು ಉಲ್ಲಂಘಿಸಿದ್ದರಿಂದ ನಾವು ಪ್ರತಿದಾಳಿ ನಡೆಸಿ ಮಿಗ್-21 ಯುದ್ಧ ವಿಮಾನವನ್ನು ಹೊಡೆದುರುಳಿಸಿ, ಅದರ ಪೈಲಟ್ ಅಭಿನಂದನ್ ವರ್ಧಮಾನ್ ಅವರನ್ನು ಸೆರೆ ಹಿಡಿದಿದ್ದೇವು. ಬಳಿಕ ಭಾರತಕ್ಕೆ ಒಪ್ಪಿಸಲಾಯಿತು ಎಂದರು.
ಬಾಲಕೋಟ್ ವೈಮಾನಿಕ ದಾಳಿ ನಡೆದ ಸ್ಥಳದಲ್ಲಿ ಒಂದೇ ಒಂದು ಇಟ್ಟಿಗೆ ಸಹ ಪತ್ತೆಯಾಗಿಲ್ಲ ಮತ್ತು ಯಾವುದೇ ಜೀವಹಾನಿಯಾಗಿಲ್ಲ. ಈ ಕುರಿತು ಭಾರತ ಸುಳ್ಳು ಹೇಳುತ್ತಿದೆ ಎಂದು ಪಾಕ್ ಸೇನಾ ವಕ್ತಾರರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT