ಸಂಗ್ರಹ ಚಿತ್ರ 
ವಿದೇಶ

ಮಸೂದ್ ಅಜರ್ 'ಜಾಗತಿಕ ಉಗ್ರ'; ವಿಶ್ವಸಂಸ್ಥೆ ಭದ್ರತಾ ಮಂಡಳಿ ಸಭೆಗೂ ಮುನ್ನವೇ ಪಾಕ್, ಚೀನಾಗೆ ಅಮೆರಿಕ ಶಾಕ್

ಪುಲ್ವಾಮ ಉಗ್ರ ದಾಳಿ ರೂವಾರಿ ಮತ್ತು ಜೈಶ್ ಇ ಮೊಹಮದ್ ಉಗ್ರ ಸಂಘಟನೆ ಸಂಸ್ಥಾಪಕ ಜಾಗತಿಕ ಉಗ್ರ ಎಂದು ಘೋಷಣೆ ಮಾಡುವ ಮೂಲಕ ಅಮೆರಿಕ ಪಾಕಿಸ್ತಾನ ಮತ್ತು ಚೀನಾಗೆ ಶಾಕ್ ನೀಡಿದೆ.

ವಾಷಿಂಗ್ಟನ್‌: ಪುಲ್ವಾಮ ಉಗ್ರ ದಾಳಿ ರೂವಾರಿ ಮತ್ತು ಜೈಶ್ ಇ ಮೊಹಮದ್ ಉಗ್ರ ಸಂಘಟನೆ ಸಂಸ್ಥಾಪಕ ಜಾಗತಿಕ ಉಗ್ರ ಎಂದು ಘೋಷಣೆ ಮಾಡುವ ಮೂಲಕ ಅಮೆರಿಕ ಪಾಕಿಸ್ತಾನ ಮತ್ತು ಚೀನಾಗೆ ಶಾಕ್ ನೀಡಿದೆ.
ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಭೆಗೆ ದಿನಗಣನೆ ಆರಂಭವಾಗಿರುವಂತೆಯೇ ಈ ಬಗ್ಗೆ ಅಧಿಕೃತ ಹೇಳಿಕೆ ನೀಡಿರುವ ಅಮೆರಿಕ, 'ಜೈಶ್ ಇ ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್‌ ಜಾಗತಿಕ ಭಯೋತ್ಪಾದಕ ಎಂಬ ಹಣೆಪಟ್ಟಿಗೆ ಅರ್ಹವಾಗಿದ್ದು, ಪ್ರಾದೇಶಿಕ ಸ್ಥಿರತೆ ಹಾಗೂ ಶಾಂತಿಗೆ ಅಪಾಯಕಾರಿಯಾಗಿದ್ದಾನೆ ಎಂದು ಅಮೆರಿಕ ಹೇಳಿದೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಅಜರ್ ನನ್ನು ಜಾಗತಿಕ ಭಯೋತ್ಪಾದಕ ಎಂದು ಘೋಷಿಸುವ ಪ್ರಸ್ತಾವದ ಬಗ್ಗೆ ಅಂತಿಮ ನಿರ್ಣಯ ಕೈಗೊಳ್ಳಬೇಕಿದೆ ಎಂದು ಹೇಳಿದೆ. 
'ಅಜರ್‌ ಜೈಷೆ ಮೊಹಮ್ಮದ್ ಉಗ್ರ ಸಂಘಟನೆಯ ಸ್ಥಾಪಕ ಹಾಗೂ ಮುಖ್ಯಸ್ಥ. ವಿಶ್ವಸಂಸ್ಥೆಯ ನಿಯಮಾನುಸಾರ ಜಾಗತಿಕ ಭಯೋತ್ಪಾದಕನೆಂಬ ಹಣೆಪಟ್ಟಿಗೆ ಈತ ಎಲ್ಲ ದೃಷ್ಟಿಯಿಂದಲೂ ಅರ್ಹನಾಗಿದ್ದಾನೆ' ಎಂದು ಅಮೆರಿಕ ವಿದೇಶಾಂಗ ಇಲಾಖೆ ಉಪ ವಕ್ತಾರ ರಾಬರ್ಟ್‌ ಪಲ್ಲಾಡಿನೊ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. 
ಪುಲ್ವಾಮಾ ದಾಳಿ ಬಳಿಕ ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಮೂರು ಖಾಯಂ ಸದಸ್ಯರಾದ ಅಮೆರಿಕ, ಬ್ರಿಟನ್‌ ಮತ್ತು ಫ್ರಾನ್ಸ್‌ ಅಜರ್‌ ನನ್ನು ಜಾಗತಿಕ ಉಗ್ರನೆಂದು ಘೋಷಿಸಬೇಕೆಂಬ ಪ್ರಸ್ತಾಪವನ್ನು ಮತ್ತೊಮ್ಮೆ ಮುಂದಿಟ್ಟಿವೆ. ಈ ಮೂರು ದೇಶಗಳು ಈ ಹಿಂದೆಯೂ ಸಾಕಷ್ಟು ಪ್ರಯತ್ನಪಟ್ಟಿದ್ದವು. ಆದರೆ ಚೀನಾದ ತಡೆಯಿಂದಾಗಿ ಅಜರ್‌ಗೆ ಜಾಗತಿಕ ಉಗ್ರನೆಂಬ ಹಣೆಪಟ್ಟಿ ಘೋಷಣೆ ಸಾಧ್ಯವಾಗಿಲ್ಲ. ಭದ್ರತಾ ಮಂಡಳಿಯ ಐದು ವೀಟೋ ರಾಷ್ಟ್ರಗಳ ಪೈಕಿ ಚೀನಾವೂ ಒಂದು. ಪ್ರತಿಬಾರಿ ಅಜರ್‌ ವಿರುದ್ಧ ಪ್ರಸ್ತಾವ ಮಂಡನೆಯಾದಾಗೆಲ್ಲ ಚೀನಾ ವೀಟೋ ಚಲಾಯಿಸಿ ನಿರ್ಣಯವನ್ನು ಹಾಳುಗೆಡವುತ್ತಿದೆ. 
ಭದ್ರತಾ ಮಂಡಳಿ ಸಭೆ ಇಂದು ಆರಂಭವಾಗಲಿರುವ ಹಿನ್ನೆಲೆಯಲ್ಲಿ ಅಮೆರಿಕದ ಟ್ರಂಪ್‌ ಆಡಳಿತ ಮಂಗಳವಾರವೇ, ಅಜರ್ ವಿರುದ್ಧದ ನಿರ್ಣಯಕ್ಕೆ ಸಾಕಷ್ಟು ದಾಖಲೆಗಳನ್ನು ಸಿದ್ಧಪಡಿಸಿ ಇಟ್ಟುಕೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT