ಭಾರತದ ಉಪಗ್ರಹ-ವಿರೋಧಿ ಕ್ಷಿಪಣಿ ಪರೀಕ್ಷೆ: ರಕ್ಷಣಾತ್ಮಕ ಪ್ರತಿಕ್ರಿಯೆ ನಿಡಿದ ಚೀನಾ 
ವಿದೇಶ

ಭಾರತದ ಉಪಗ್ರಹ-ವಿರೋಧಿ ಕ್ಷಿಪಣಿ ಪರೀಕ್ಷೆ: ರಕ್ಷಣಾತ್ಮಕ ಪ್ರತಿಕ್ರಿಯೆ ನಿಡಿದ ಚೀನಾ

ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತೀಯ ವಿಜ್ಞಾನಿಗಳುಎ-ಸ್ಯಾಟ್ ಆ್ಯಂಟಿ ಸ್ಯಾಟೆಲೈಟ್ ಮಿಸೈಲ್ ಮೂಲಕ ಲೈವ್ ಸ್ಯಾಟೆಲೈಟ್ ಅನ್ನು ಯಶಸ್ವಿಯಾಗಿ ಹೊಡೆದುರುಳಿಸಿ ದಾಖಲೆ ನಿರ್ಮಿಸಿದ್ದು ಇದಕ್ಕೆ ಚೀನಾ ರಕ್ಷಣಾತ್ಮಕವಾಗಿ ಪ್ರತಿಕ್ರಯಿಸಿದೆ.

ಬೀಜಿಂಗ್ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತೀಯ ವಿಜ್ಞಾನಿಗಳು ಎ-ಸ್ಯಾಟ್ ಆ್ಯಂಟಿ ಸ್ಯಾಟೆಲೈಟ್ ಮಿಸೈಲ್ ಮೂಲಕ ಲೈವ್ ಸ್ಯಾಟೆಲೈಟ್ ಅನ್ನು ಯಶಸ್ವಿಯಾಗಿ ಹೊಡೆದುರುಳಿಸಿ ದಾಖಲೆ ನಿರ್ಮಿಸಿದ್ದು ಇದಕ್ಕೆ ಚೀನಾ ರಕ್ಷಣಾತ್ಮಕವಾಗಿ ಪ್ರತಿಕ್ರಯಿಸಿದೆ. "ಜಗತ್ತಿನ ಎಲ್ಲಾ ರಾಷ್ಟ್ರಗಳು ಬಾಹ್ಯಾಕಾಶದಲ್ಲಿ ಶಾಂತಿ ಕಾಪಾಡಿಕೊಳ್ಲಲು ಬದ್ದವಾಗಿರಲಿದೆ ಎಂದು ಭಾವಿಸುತ್ತೇನೆ" ಚೀನಾ ಹೇಳಿದೆ.
ಜಾಗತಿಕ ಉಪಗ್ರಹವೊಂದನ್ನು ಹೊಡೆದುಹಾಕುವ ಮೂಲಕ ಭಾರತ ಉಪಗ್ರಹ-ವಿರೋಧಿ ಕ್ಷಿಪಣಿ ಪರೀಕ್ಷೆಯನ್ನು ಯಶಸ್ವಿಯಾಗಿ ಮುಗಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಘೋಷಿಸಿದರು. ಇದು ಭಾರತವನ್ನು ಜಾಗತಿಕ ಸೂಪರ್ ಪವರ್ ರಾಷ್ಟ್ರಗಳ ಸಾಲಿನಲ್ಲಿ ಸೇರಿಸುವಂತಹಾ ಅಪರೂಪದ ಸಾಧನೆಯಾಗಿದೆ.
ಜಗತ್ತಿನಲ್ಲಿ ಅಮೆರಿಕಾ, ರಷ್ಯಾ, ಚೀನಾ ಹೊರತಾಗಿ ಶತ್ರುರಾಷ್ಟ್ರಗಳ ಉಪಗ್ರಹಗಳನ್ನು ಹೊಡೆದುರುಳಿಸಬಲ್ಲ  ಕಾರ್ಯತಂತ್ರದ ಸಾಮರ್ಥ್ಯವನ್ನು ಪಡೆದುಕೊಂಡ ಜಗತ್ತಿನ ನಾಲ್ಕನೇ ರಾಷ್ಟ್ರ ಭಾರತವಾಗಿದೆ.
"ಭಾರತ ಉಪಗ್ರಹ-ವಿರೋಧಿ ಕ್ಷಿಪಣಿ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರೈಸಿದೆ ಎನ್ನುವ ವರದಿಯನ್ನು ನಾವು ಗಮನಿಸಿದ್ದೇವೆ. ಪ್ರತಿ ದೇಶವೂ ಬಾಹ್ಯಾಕಾಶದಲ್ಲಿ ಶಾಂತಿಯನ್ನು ಎತ್ತಿಹಿಡಿಯಲು ಬದ್ದವಾಗಿದೆ ಎಂದು ನಾವು ಭಾವಿಸುತ್ತೇವೆ" ಚೀನಾ ವಿದೇಶಾಂಗ ಸಚಿವಾಲಯ ಹೇಳಿದೆ.
2007 ರ ಜನವರಿಯಲ್ಲಿ ಹವಾಮಾನ ಉಪಗ್ರಹವನ್ನು ನಾಶಗೊಳಿಸುವ ಮೂಲಕ ಚೀನಾ ಉಪಗ್ರಹ ವಿರೋಧಿ ಕ್ಷಿಪಣಿ ನಿರ್ನಾಮ ಕಾರ್ಯಾಚರಣೆ ಪರೀಕ್ಷೆ ನಡೆಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel