ಸಂಗ್ರಹ ಚಿತ್ರ 
ವಿದೇಶ

ಭಾರತದ ಎಸ್ಯಾಟ್ ಉಪಗ್ರಹ ನಿಗ್ರಹ ಕ್ಷಿಪಣಿ ಯೋಜನೆ ಮೇಲೆ ಅಮೆರಿಕ 'ಕಳ್ಳಗಣ್ಣು' ಇಟ್ಟಿತ್ತು: ವರದಿ

ಭಾರತದ ಮಹತ್ವಾಕಾಂಕ್ಷಿ ಎಸ್ಯಾಟ್ ಉಪಗ್ರಹ ನಿಗ್ರಹ ಕ್ಷಿಪಣಿ ಯೋಜನೆ ಮೇಲೆ ಅಮೆರಿಕ ಗೂಢಚಾರಿಕೆ ಮಾಡಿತ್ತು ಎಂಬ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.

ವಾಷಿಂಗ್ಟನ್: ಭಾರತದ ಮಹತ್ವಾಕಾಂಕ್ಷಿ ಎಸ್ಯಾಟ್ ಉಪಗ್ರಹ ನಿಗ್ರಹ ಕ್ಷಿಪಣಿ ಯೋಜನೆ ಮೇಲೆ ಅಮೆರಿಕ ಗೂಢಚಾರಿಕೆ ಮಾಡಿತ್ತು ಎಂಬ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.
ಈ ಬಗ್ಗೆ ಅಮೆರಿಕ ಮೂಲದ ಬಾಹ್ಯಾಕಾಶ ವಿಜ್ಞಾನಿಯೊಬ್ಬರು ಮಾಹಿತಿ ನೀಡಿದ್ದು, ಅಮೆರಿಕದ ಪ್ರತಿಷ್ಠಿತ ಹಾರ್ವರ್ಡ್-ಸ್ಮಿತ್ ಸನ್ ಸೆಂಟರ್ ಫಾರ್ ಆ್ಯಸ್ಟ್ರೋ ಫಿಸಿಕ್ಸ್ ಸಂಸ್ಥೆಯ  ಖ್ಯಾತ ಬಾಹ್ಯಾಕಾಶ ವಿಜ್ಞಾನಿ ಜೋನಾಥನ್ ಮೆಕ್ ಡಾವೆಲ್ ಈ ಸ್ಫೋಟಕ ಮಾಹಿತಿಯನ್ನು ಬಹಿರಂಗಗೊಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಅವರು, 'ಭಾರತದ ಎ-ಸ್ಯಾಟ್ ಕ್ಷಿಪಣಿಯನ್ನು ಅಮೆರಿಕ ವಾಯುಸೇನೆ ಪತ್ತೆ ಮಾಡಿತ್ತು. ಭಾರತದ ಬಹುಉದ್ದೇಶಿತ ಎಸ್ಯಾಟ್ ಕ್ಷಿಪಣಿ ಯೋಜನೆಯ ಮೇಲೆ ಗೂಢಚಾರಿಕೆ ನಡೆಸಲೆಂದೇ ಅಮೆರಿಕ ತನ್ನ ಅತ್ಯಾಧುನಿಕ ಸ್ಥಳಾನ್ವೇಷಣಾ ವಿಮಾನವನ್ನು ಡಿಯಾಗೋ ಗಾರ್ಷಿಯಾ ಮೂಲಕ ಹಿಂದೂ ಮಹಾಸಾಗರದ ಬಂಗಾಳಕೊಲ್ಲಿಗೆ ರವಾನೆ ಮಾಡಿತ್ತು. ಹೀಗಾಗಿ ಭಾರತದ ಎಸ್ಯಾಟ್ ಕ್ಷಿಪಣಿ ಯೋಜನೆ ಬಗ್ಗೆ ಅಮೆರಿಕಕ್ಕೆ ಮೊದಲೇ ತಿಳಿದಿತ್ತು ಎಂದು ಹೇಳಿದ್ದಾರೆ.
ಅಂತೆಯೇ ಅಮೆರಿಕದ ಈ ಕೃತ್ಯದಿಂದಾಗಿ ಭಾರತ ಮತ್ತು ಅಮೆರಿಕ ನಡುವಿನ ಸಂಬಂಧದ ಮೇಲೆ ಪರಿಣಾಮ ಬೀರದು ಎಂದೂ ಹೇಳಿರುವ ಅವರು, ಎಲ್ಲರೂ ಗೂಢಚಾರಿಕೆ ನಡೆಸುತ್ತಾರೆ. ತನ್ನ ಶತ್ರುಗಳೂ ಸೇರಿದಂತೆ ಸ್ನೇಹಿತರ ಮೇಲೂ ಗೂಢಚಾರಿಕೆ ಮಾಡುತ್ತಾರೆ. ಆಧುನಿಕ ಶಸ್ತ್ರಾಸ್ತ್ರ ಯುಗದಲ್ಲಿ ಇದು ಸಾಮಾನ್ಯ. ಇಂದಿನ ದಿನಗಳಲ್ಲಿ ಇಡೀ ಪ್ರಪಂಚ ಇದೇ ರೀತಿ ಕಾರ್ಯ ನಿರ್ವಹಿಸುತ್ತಿದೆ. ಒಂದು ವೇಳೆ ಈ ವಿಚಾರ ಅಮೆರಿಕಕ್ಕೆ ತಿಳಿಯದೇ ಇದ್ದಿದರೆ ಅದು ಆಶ್ಟರ್ಯದ ವಿಚಾರವಾಗುತ್ತಿತ್ತು ಎಂದು ಜೋನಾಥನ್ ವ್ಯಂಗ್ಯ ಮಾಡಿದ್ದಾರೆ.
ಇದೇ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಮೊಟ್ಟ ಮೊದಲ ಸಕ್ರಿಯ ಉಪಗ್ರಹ ನಿಗ್ರಹ ಕ್ಷಿಪಣಿ ಎಸ್ಯಾಟ್ ಪರೀಕ್ಷಾರ್ಥ ಉಡಾವಣೆ ಯಶಸ್ವಿಯಾಗಿದೆ ಎಂದು ಘೋಷಣೆ ಮಾಡಿದ್ದರು. ಅಲ್ಲದೆ ಯೋಜನೆಯಲ್ಲಿ ಕಾರ್ಯ ನಿರ್ವಹಿಸಿದ್ದ ಇಸ್ರೋ ಮತ್ತು ಡಿಆರ್ ಡಿಒ ವಿಜ್ಞಾನಿಗಳಿಗೆ ಅಭಿನಂದನೆ ಕೂಡ ಸಲ್ಲಿಕೆ ಮಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಸಿ ಮಹತ್ವದ ಚರ್ಚೆ; ಬಳಿಕ ಸಿಎಂ ಹೇಳಿದ್ದೇನು? Video

ಬ್ಲಿಂಕಿಟ್, ಸ್ವಿಗ್ಗಿ, ಜೆಪ್ಟೊಗೆ 10 ನಿಮಿಷಗಳ ಡೆಲಿವರಿ ಸೇವೆ ನಿಲ್ಲಿಸುವಂತೆ ಸರ್ಕಾರ ಸೂಚನೆ; ಯಾಕೆ ಗೊತ್ತಾ?

'ಹಾವು ಕಚ್ಚಿದೆ ಬೇಗ ಚಿಕಿತ್ಸೆ ಕೊಡಿ'; ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂದ ಆಟೋ ಚಾಲಕ, Video

ಜಮ್ಮು-ಕಾಶ್ಮೀರ: ಇದೇ ಮೊದಲು, ಮಸೀದಿಯ ಇಮಾಮ್ ಸೇರಿದಂತೆ ಎಲ್ಲರ ವೈಯಕ್ತಿಕ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು! ಕಾರಣವೇನು ಗೊತ್ತಾ?

ಉಗ್ರ ನಂಟು: ಜಮ್ಮು ಮತ್ತು ಕಾಶ್ಮೀರದ ಐವರು ಸರ್ಕಾರಿ ನೌಕರರು ವಜಾ

SCROLL FOR NEXT