ಸಂಗ್ರಹ ಚಿತ್ರ 
ವಿದೇಶ

ಶ್ರೀಲಂಕಾ ಉಗ್ರ ದಾಳಿ ಎಫೆಕ್ಟ್; 200 ಇಸ್ಲಾಮಿಕ್ ಪಾದ್ರಿಗಳೂ ಸೇರಿದಂತೆ 600 ವಿದೇಶಿಗರ ಗಡಿಪಾರು!

ಭೀಕರ ಉಗ್ರ ದಾಳಿ ಬಳಿಕ ಎಚ್ಚೆತ್ತುಕೊಂಡಿರುವ ಶ್ರೀಲಂಕಾ ಸರ್ಕಾರ 200 ಇಸ್ಲಾಮಿಕ್ ಪಾದ್ರಿಗಳೂ ಸೇರಿದಂತೆ ಶ್ರೀಲಂಕಾದಲ್ಲಿ ನೆಲೆಯೂರಿದ್ದ 600ಕ್ಕೂ ಹೆಚ್ಚು ವಿದೇಶಿಗರನ್ನು ಗಡಿಪಾರು ಮಾಡಿದೆ.

ಕೊಲಂಬೊ: ಭೀಕರ ಉಗ್ರ ದಾಳಿ ಬಳಿಕ ಎಚ್ಚೆತ್ತುಕೊಂಡಿರುವ ಶ್ರೀಲಂಕಾ ಸರ್ಕಾರ 200 ಇಸ್ಲಾಮಿಕ್ ಪಾದ್ರಿಗಳೂ ಸೇರಿದಂತೆ ಶ್ರೀಲಂಕಾದಲ್ಲಿ ನೆಲೆಯೂರಿದ್ದ 600ಕ್ಕೂ ಹೆಚ್ಚು ವಿದೇಶಿಗರನ್ನು ಗಡಿಪಾರು ಮಾಡಿದೆ.
ಈ ಬಗ್ಗೆ ಶ್ರೀಲಂಕಾದ ಗೃಹ ಸಚಿವ ವಜಿರಾ ಅಬೇಯವರ್ದೆನಾ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, 200 ಇಸ್ಲಾಮಿಕ್ ಪಾದ್ರಿಗಳೂ ಸೇರಿದಂತೆ ಶ್ರೀಲಂಕಾದಲ್ಲಿ ನೆಲೆಯೂರಿದ್ದ 600ಕ್ಕೂ ಹೆಚ್ಚು ವಿದೇಶಿಗರನ್ನು ಗಡಿಪಾರು ಮಾಡಲಾಗಿದೆ. ದೇಶದಲ್ಲಿನ ಪ್ರಸ್ತುತ ಪರಿಸ್ಥಿತಿಗಳನ್ನು ಅವಲೋಕಿಸಿ ಶ್ರೀಲಂಕಾ ಸರ್ಕಾರ ಮಹತ್ವ ನಿರ್ಣಯಕ್ಕೆ ಬಂದಿದ್ದು, ಅದರಂತೆ ವೀಸಾ ನಿಯಮಾವಳಿಗಳನ್ನು ಪುನರ್ ಪರಿಶೀಲನೆ ಮಾಡಲಾಗುತ್ತಿದೆ. ಆದರೆ ಪ್ರಸ್ತುತ ವೀಸಾ ಅವಧಿ ಮುಗಿದಿದ್ದರೂ ಲಂಕಾದಲ್ಲಿರುವ ವಿದೇಶಿಗರನ್ನು ದೇಶದಿಂದ ಗಡಿಪಾರು ಮಾಡಲಾಗಿದೆ. ಇದರಲ್ಲಿ 200ಕ್ಕೂ ಹೆಚ್ಚು ಇಸ್ಲಾಮಿಕ್ ಪಾದ್ರಿಗಳೂ ಸೇರಿದ್ದಾರೆ ಎಂದು ಹೇಳಿದ್ದಾರೆ.
ಅಂತೆಯೇ 'ಪಾದ್ರಿಗಳು ಕಾನೂನಾತ್ಮಕವಾಗಿಯೇ ದೇಶಕ್ಕೆ ಆಗಮಿಸಿದ್ದರು. ಆದರೆ ವೀಸಾ ಅವಧಿ ಮುಗಿದಿದ್ದರೂ ತಮ್ಮ ದೇಶಕ್ಕೆ ವಾಪಸ್ ಆಗಿರಲಿಲ್ಲ. ಈ ಕುರಿತಂತೆ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ಕ್ರಮ ಜರುಗಿಸಿದ್ದಾರೆ. ದೇಶದಲ್ಲಿ ನೂರಾರು ಧಾರ್ಮಿಕ ಸಂಸ್ಥೆಗಳಿದ್ದು, ಇಲ್ಲಿಗೆ ದಶಕಗಳಿಂದಲೂ ನೂರಾರು ವಿದೇಶಿ ಪಾದ್ರಿಗಳು ಆಗಮಿಸುತ್ತಿದ್ದರು. ಇಲ್ಲಿನ ಮಕ್ಕಳಿಗೆ ಧಾರ್ಮಿಕತೆಯನ್ನು ಬೋಧಿಸುತ್ತಿದ್ದರು. ಆದರೆ ಇದಕ್ಕೆ ನಮ್ಮ ವಿರೋಧವೇನೂ ಇಲ್ಲ. ಆದರೆ ಈ ಪೈಕಿ ಕೆಲವರು ದೇಶವಿದ್ರೋಶ ಚಟುವಟಿಗಳಲ್ಲಿ ಭಾಗಿಯಾಗಿದ್ದಾರೆ. ಇದರ ಪರಿಣಾಮವೇ ಇತ್ತೀಚಿಗಿನ ಉಗ್ರ ದಾಳಿ. ಈ ಕುರಿತು ಸರ್ಕಾರ ಗಂಭೀರವಾಗಿ ಚಿಂತನೆಯಲ್ಲಿ ತೊಡಗಿದೆ ಎಂದು ಹೇಳಿದ್ದಾರೆ.
ಕಳೆದ ಈಸ್ಟರ್ ಸಂಡೆಯಂದು ಶ್ರೀಲಂಕಾದಲ್ಲಿ ನಡೆದಿದ್ದ ಭೀಕರ ಉಗ್ರ ದಾಳಿಯಲ್ಲಿ 253 ಮಂದಿ ಸಾವಿಗೀಡಾಗಿ 500ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ಮೂರು ಚರ್ಚ್ ಗಳು ಹಾಗೂ ಮೂರು ಹೊಟೆಲ್ ಗಳ ಮೇಲೆ ದಾಳಿ ನಡೆಸಿದ್ದ 6ಮಂದಿ ಆತ್ಮಹತ್ಯಾ ದಾಳಿಕೋರರು ತಮ್ಮನ್ನು ತಾವು ಸ್ಫೋಟಿಸಿಕೊಂಡು ಭಾರಿ ವಿಧ್ವಂಸ ನಡೆಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT