ಸಂಗ್ರಹ ಚಿತ್ರ 
ವಿದೇಶ

ನೈಜಿರಿಯಾ: 5 ಮಂದಿ ಭಾರತೀಯ ನಾವಿಕರ ಅಪಹರಿಸಿದ ಕಡಲ್ಗಳ್ಳರು!

ನೈಜಿರಿಯಾದಲ್ಲಿ ಮತ್ತೆ ಕಡಲ್ಗಳ್ಳರು ಅಟ್ಟಹಾಸ ಮೆರೆದಿದ್ದು, ಸರಕು ಸಾಗಾಣಿಕಾ ಹಡಗಿನ ಮೇಲೆ ದಾಳಿ ಮಾಡಿ ಭಾರತ ಮೂಲದ ಐದು ನಾವಿಕರನ್ನು ಅಪಹರಿಸಿದ್ದಾರೆ ಎಂದು ತಿಳಿದುಬಂದಿದೆ.

ಅಬುಜಾ: ನೈಜಿರಿಯಾದಲ್ಲಿ ಮತ್ತೆ ಕಡಲ್ಗಳ್ಳರು ಅಟ್ಟಹಾಸ ಮೆರೆದಿದ್ದು, ಸರಕು ಸಾಗಾಣಿಕಾ ಹಡಗಿನ ಮೇಲೆ ದಾಳಿ ಮಾಡಿ ಭಾರತ ಮೂಲದ ಐದು ನಾವಿಕರನ್ನು ಅಪಹರಿಸಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಸ್ವತಃ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಟ್ವೀಟ್ ಮಾಡಿದ್ದು, ಅಪಹರಣಕ್ಕೀಡಾದ ಭಾರತೀಯ ನಾವಿಕರ ಸುರಕ್ಷಿತ ಬಿಡುಗಡೆ ಬೇಕಾಗ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ನೈಜಿರಿಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
'ನೈಜಿರಿಯಾದಲ್ಲಿ ಭಾರತೀಯ ನಾವಿಕರ ಅಪಹರಣ ವಿಚಾರಕ್ಕೆ ಸಂಬಂದಧಪಟ್ಟಂತೆ ಪತ್ರಿಕೆಯಲ್ಲಿ ವರದಿಗಳನ್ನು ತಾವು ಓದಿದ್ದು, ಈ ಕುರಿತಂತೆ ನೈಜಿರಿಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಈ ಸಂಬಂಧ ವಿಚಾರ ಮುಟ್ಟಿಸಿದ್ದೇವೆ. ಅಂತೆಯೇ ಕಡಳ್ಗಳ್ಳರ ವಶದಲ್ಲಿರುವ ಭಾರತೀಯ ನಾವಿಕರ ಬಿಡುಗಡೆ ಸಂಬಂಧ ನೈಜಿರಿಯಾ ಸರ್ಕಾರದೊಂದಿಗೆ ಭಾರತ ಸರ್ಕಾರ ಚರ್ಚೆ ನಡೆಸಿದೆ ಎಂದು ಸುಷ್ಮಾ ಟ್ವೀಟ್ ಮಾಡಿದ್ದಾರೆ. 
ಕಳೆದ ತಿಂಗಳು ನೈಜಿರಿಯಾ ಸಮುದ್ರ ಮಾರ್ಗದಲ್ಲಿ ಚಲಿಸುತ್ತಿದ್ದ ಸರಕು ಸಾಗಾಣಿಕಾ ಹಡಗಿನ ಮೇಲೆ ದಾಳಿ ನಡೆಸಿದ್ದ ಕಡಲ್ಗಳ್ಳರು ನೌಕೆಯನ್ನು ವಶಕ್ಕೆ ಪಡೆದಿದ್ದು ಮಾತ್ರವಲ್ಲದೇ ನೌಕೆಯಲ್ಲಿದ್ದ ಎಲ್ಲ ಭಾರತೀಯರ್ನು ಅಪಹರಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

TVK ಶಾಸಕಾಂಗ ಪಕ್ಷದ ನಾಯಕನಾಗಿ ವಿಜಯ್ ಆಯ್ಕೆ; ಮೇ 7ರಂದು ಸಿಎಂ ಆಗಿ ಪ್ರಮಾಣ ವಚನ?

ದಳಪತಿ ವಿಜಯ್ ಗೆಲುವಿನ ಬಗ್ಗೆ ಮೊದಲೇ ಭವಿಷ್ಯ ನುಡಿದಿದ್ದ ನಟಿ ಪೂಜಾ ಹೆಗ್ಡೆ: Video Goes Viral

ಚುನಾವಣೆಯಲ್ಲಿ ನಾನು ಸೋತಿಲ್ಲ, ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ; ಮಮತಾ ಬ್ಯಾನರ್ಜಿ; Video

ಸಿಎಂ ಸ್ಥಾನಕ್ಕೆ ಮಮತಾ ರಾಜೀನಾಮೆ ನೀಡದಿದ್ರೆ, ಕಿತ್ತೆಸೆಯಲಾಗುವುದು- ಹಿಮಂತಾ ಬಿಸ್ವಾ ಶರ್ಮಾ!

Video: ಪ್ಲಾಟ್​ಫಾರ್ಮ್​ನಲ್ಲಿ ರೈಲಿಗೆ ಸಿಲುಕಿ ಇಬ್ಬರು ಮಹಿಳೆಯರು ಪೀಸ್ ಪೀಸ್‌; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

SCROLL FOR NEXT