ಸಂಗ್ರಹ ಚಿತ್ರ 
ವಿದೇಶ

ನೈಜಿರಿಯಾ: 5 ಮಂದಿ ಭಾರತೀಯ ನಾವಿಕರ ಅಪಹರಿಸಿದ ಕಡಲ್ಗಳ್ಳರು!

ನೈಜಿರಿಯಾದಲ್ಲಿ ಮತ್ತೆ ಕಡಲ್ಗಳ್ಳರು ಅಟ್ಟಹಾಸ ಮೆರೆದಿದ್ದು, ಸರಕು ಸಾಗಾಣಿಕಾ ಹಡಗಿನ ಮೇಲೆ ದಾಳಿ ಮಾಡಿ ಭಾರತ ಮೂಲದ ಐದು ನಾವಿಕರನ್ನು ಅಪಹರಿಸಿದ್ದಾರೆ ಎಂದು ತಿಳಿದುಬಂದಿದೆ.

ಅಬುಜಾ: ನೈಜಿರಿಯಾದಲ್ಲಿ ಮತ್ತೆ ಕಡಲ್ಗಳ್ಳರು ಅಟ್ಟಹಾಸ ಮೆರೆದಿದ್ದು, ಸರಕು ಸಾಗಾಣಿಕಾ ಹಡಗಿನ ಮೇಲೆ ದಾಳಿ ಮಾಡಿ ಭಾರತ ಮೂಲದ ಐದು ನಾವಿಕರನ್ನು ಅಪಹರಿಸಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಸ್ವತಃ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಟ್ವೀಟ್ ಮಾಡಿದ್ದು, ಅಪಹರಣಕ್ಕೀಡಾದ ಭಾರತೀಯ ನಾವಿಕರ ಸುರಕ್ಷಿತ ಬಿಡುಗಡೆ ಬೇಕಾಗ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ನೈಜಿರಿಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
'ನೈಜಿರಿಯಾದಲ್ಲಿ ಭಾರತೀಯ ನಾವಿಕರ ಅಪಹರಣ ವಿಚಾರಕ್ಕೆ ಸಂಬಂದಧಪಟ್ಟಂತೆ ಪತ್ರಿಕೆಯಲ್ಲಿ ವರದಿಗಳನ್ನು ತಾವು ಓದಿದ್ದು, ಈ ಕುರಿತಂತೆ ನೈಜಿರಿಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಈ ಸಂಬಂಧ ವಿಚಾರ ಮುಟ್ಟಿಸಿದ್ದೇವೆ. ಅಂತೆಯೇ ಕಡಳ್ಗಳ್ಳರ ವಶದಲ್ಲಿರುವ ಭಾರತೀಯ ನಾವಿಕರ ಬಿಡುಗಡೆ ಸಂಬಂಧ ನೈಜಿರಿಯಾ ಸರ್ಕಾರದೊಂದಿಗೆ ಭಾರತ ಸರ್ಕಾರ ಚರ್ಚೆ ನಡೆಸಿದೆ ಎಂದು ಸುಷ್ಮಾ ಟ್ವೀಟ್ ಮಾಡಿದ್ದಾರೆ. 
ಕಳೆದ ತಿಂಗಳು ನೈಜಿರಿಯಾ ಸಮುದ್ರ ಮಾರ್ಗದಲ್ಲಿ ಚಲಿಸುತ್ತಿದ್ದ ಸರಕು ಸಾಗಾಣಿಕಾ ಹಡಗಿನ ಮೇಲೆ ದಾಳಿ ನಡೆಸಿದ್ದ ಕಡಲ್ಗಳ್ಳರು ನೌಕೆಯನ್ನು ವಶಕ್ಕೆ ಪಡೆದಿದ್ದು ಮಾತ್ರವಲ್ಲದೇ ನೌಕೆಯಲ್ಲಿದ್ದ ಎಲ್ಲ ಭಾರತೀಯರ್ನು ಅಪಹರಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT