ಸಂಗ್ರಹ ಚಿತ್ರ 
ವಿದೇಶ

ಇಸ್ಲಾಮಿಕ್ ಸ್ಟೇಟ್ ಉಗ್ರರ ಹೆಡೆಮುರಿ ಕಟ್ಟಲು ಭಾರತದ ನೆರವು ಕೋರಿದ ಶ್ರೀಲಂಕಾ!

ಕಳೆದ ಈಸ್ಟರ್ ಸಂಡೇ ದಿನದಂದು ರಾಜಧಾನಿ ಕೊಲಂಬೋದಲ್ಲಿ ನಡೆದಿದ್ದ ಸರಣಿ ಬಾಂಬ್ ಸ್ಫೋಟ ಪ್ರಕರಣದ ಬೆನ್ನಲ್ಲೇ ಉಗ್ರರ ವಿರುದ್ಧ ತೊಡೆ ತಟ್ಟಿ ನಿಂತಿರುವ ಶ್ರೀಲಂಕಾ, ಇಸ್ಲಾಮಿಕ್ ಸ್ಟೇಟ್ ಉಗ್ರರ ಹೆಡೆಮುರಿ ಕಟ್ಟಲು ಭಾರತದ ನೆರವು ಕೋರಿದೆ.

ಕೊಲಂಬೋ: ಕಳೆದ ಈಸ್ಟರ್ ಸಂಡೇ ದಿನದಂದು ರಾಜಧಾನಿ ಕೊಲಂಬೋದಲ್ಲಿ ನಡೆದಿದ್ದ ಸರಣಿ ಬಾಂಬ್ ಸ್ಫೋಟ ಪ್ರಕರಣದ ಬೆನ್ನಲ್ಲೇ ಉಗ್ರರ ವಿರುದ್ಧ ತೊಡೆ ತಟ್ಟಿ ನಿಂತಿರುವ ಶ್ರೀಲಂಕಾ, ಇಸ್ಲಾಮಿಕ್ ಸ್ಟೇಟ್ ಉಗ್ರರ ಹೆಡೆಮುರಿ ಕಟ್ಟಲು ಭಾರತದ ನೆರವು ಕೋರಿದೆ.
ಹೌದು.. ಈ ಹಿಂದೆ ಭಾರತದ ಗುಪ್ತಚರ ಇಲಾಖೆಗಳು ನೀಡಿದ್ದ ಸಂಭಾವ್ಯ ಉಗ್ರ ದಾಳಿ ಎಚ್ಚರಿಕೆಯನ್ನು ಕಡೆಗಣಿಸಿ ಇದೀಗ ಅದರ ಫಲ ಅನುಭವಿಸುತ್ತಿರುವ ಶ್ರೀಲಂಕಾ ಇದೀಗ ಇಸ್ಲಾಮಿಕ್ ಸ್ಟೇಟ್ ಉಗ್ರರ ದಮನ ಮಾಡಲು ಭಾರತ ಸರ್ಕಾರದ ನೆರವು ಕೋರಿದೆ. ಈ ಬಗ್ಗೆ ಖಾಸಗಿ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿರುವ ಲೆಫ್ಟಿನೆಂಟ್ ಜನರಲ್ ಸೇನಾ ನಾಯಕೆ ಅವರು, 'ಉಗ್ರರ ಸಂಚು ವಿಫಲಗೊಳಿಸುವ ಕುರಿತು ಭಾರತ ಸರ್ಕಾರದ ನೆರವು ಕೋರಿದ್ದೇವೆ. 
ಬಾಂಬ್ ನಿಷ್ಕ್ರಿಯಗೊಳಿಸುವ ಸಾಮಗ್ರಿ, ಸೈಬರ್​ ವಾರ್ ಫೇರ್​ ಅಸಿಸ್ಟೆನ್ಸ್​ ಹಾಗೂ ಕೆಲ ತರಬೇತಿ ಮತ್ತು ಸಾಮಗ್ರಿಗಳ ನೆರವು ನೀಡುವಂತೆ ಭಾರತದ ನೆರವು ಕೇಳಿದ್ದೇವೆ ಎಂದು ಹೇಳಿದ್ದಾರೆ.
ಎಲ್ ಟಿಟಿಇ ವಿರುದ್ಧ ಹೋರಾಡಿದ ನಮಗೆ ಮಿಲಿಟರಿ ಸಹಾಯ ಬೇಡ
ಇದೇ ವೇಳೆ ನಮಗೆ ಯಾವುದೇ ದೇಶದ ಮಿಲಿಟರಿ ಸಹಕಾರ ಬೇಡ ಎಂದು ಹೇಳಿದ ಸೇನಾ ನಾಯಕೆ ಅವರು, ನಮಗೆ ಬೇರೆ ದೇಶದ ಸೈನಿಕರ ಅಗತ್ಯತೆ ಇಲ್ಲ. ನಮಗೆ ಮತ್ತು ನಮ್ಮ ಸೇನೆಗೆ ಉಗ್ರರ ವಿರುದ್ಧ ತನಿಖೆಗೆ ಸಹಕಾರ ಬೇಕು. ತಾಂತ್ರಿಕತೆಯ ನೆರವು ಬೇಕು. ಎಲ್​ಟಿಟಿಇ ವಿರುದ್ಧವೇ ನಾವು ಹೋರಾಡಿದ್ದೇವೆ. ಆದ್ರೆ ಮುಂಬರುವ ದಿನಗಳಲ್ಲಿ ಭಯೋತ್ಪಾದನೆಯನ್ನು ನಿರ್ಮೂಲನೆಗೊಳಿಸಲು ನಮ್ಮ ಸಾಮರ್ಥ್ಯ ವೃದ್ಧಿ ಮಾಡಿಕೊಳ್ಳಬೇಕಾಗಿದೆ. ಹೀಗಾಗಿ ನಮಗೆ ಬೇರೆ ದೇಶಗಳಿಂದ ಟೆಕ್ನಿಕಲ್ ಸಹಕಾರ ಅಗತ್ಯ. ಈ ನಿಟ್ಟಿನಲ್ಲಿ ಭಾರತೀಯ ಸೇನೆಯ ಜೊತೆ ನಮ್ಮ ಸಂಬಂಧ ಸದಾ ಹೀಗೆ ಉತ್ತಮವಾಗಿರುತ್ತೆ ಎಂಬ ವಿಶ್ವಾಸವನ್ನು ಮಹೇಶ್ ಸೇನಾನಾಯಕೆ ವ್ಯಕ್ತಪಡಿಸಿದ್ದಾರೆ.
ಕಳೆದ ಈಸ್ಟರ್ ಸಂಡೆಯಂದು ನಡೆದಿದ್ದ ಭೀಕರ ಆತ್ಮಹತ್ಯಾ ಸರಣಿ ಬಾಂಬ್ ಸ್ಫೋಟದಲ್ಲಿ 250ಕ್ಕೂ ಅಧಿಕ ಮಂದಿ ಸಾವನ್ನಪ್ಪಿ 500ಕ್ಕೂ ಅಧಿಕಮಂದಿ ಗಾಯಗೊಂಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT