ಸಂಗ್ರಹ ಚಿತ್ರ 
ವಿದೇಶ

ಭಾರತ ಇನ್ನು ನಮಗೆ ಮತ್ತಷ್ಟು ಕಠಿಣ ದೇಶ; ಮೋದಿ ಗೆಲುವಿನ ಕುರಿತು ಪಾಕ್ ಮಾಜಿ ಸಚಿವರ ಹೇಳಿಕೆ

ಭಾರತ ಇನ್ನು ನಮಗೆ ಮತ್ತಷ್ಟು ಕಠಿಣ ದೇಶವಾಗಲಿದೆ ಎಂದು ಪಾಕಿಸ್ತಾನದ ಮಾಜಿ ಸಚಿವರೊಬ್ಬರು ಮಾಡಿರುವ ಟ್ವೀಟ್ ವೈರಲ್ ಆಗುತ್ತಿದೆ.

ಇಸ್ಲಾಮಾಬಾದ್: ಭಾರತ ಇನ್ನು ನಮಗೆ ಮತ್ತಷ್ಟು ಕಠಿಣ ದೇಶವಾಗಲಿದೆ ಎಂದು ಪಾಕಿಸ್ತಾನದ ಮಾಜಿ ಸಚಿವರೊಬ್ಬರು ಮಾಡಿರುವ ಟ್ವೀಟ್ ವೈರಲ್ ಆಗುತ್ತಿದೆ.
ಲೋಕಸಭಾ ಚುನಾವಣೆಯಲ್ಲಿನ ಮೋದಿ ಮತ್ತು ಬಿಜೆಪಿ ಗೆಲುವು ಕೇವಲ ದೇಶದಲ್ಲಿ ಮಾತ್ರವಲ್ಲ.. ಬದಲಿಗೆ ನೆರೆಯ ಪಾಕಿಸ್ತಾನದಲ್ಲೂ ಬಾರಿ ಸುದ್ದಿಗೆ ಗ್ರಾಸವಾಗುತ್ತಿದ್ದು, ಪಾಕಿಸ್ತಾನದಲ್ಲಿ ಭಾರತದ ಚುನಾವಣಾ ಫಲಿತಾಂಶವನ್ನು ನೇರ ಪ್ರಸಾರದಲ್ಲಿ ವೀಕ್ಷಣೆ ಮಾಡಲಾಗುತ್ತಿದೆ. ಆ ಮೂಲಕ ಪಾಕಿಸ್ತಾನದಲ್ಲೂ ಭಾರತದ ಲೋಕಸಭಾ ಚುನಾವಣೆ ಪ್ರಾಮುಖ್ಯತೆ ಪಡೆದಿದೆ.
ಇದಕ್ಕೆ ಇಂಬು ನೀಡುವಂತೆ ಪಾಕಿಸ್ತಾನದ ಮಾಜಿ ಮಾಹಿತಿ ಸಚಿವೆ ಹಾಗೂ ಪಾಕಿಸ್ತಾನ ಪೀಪಲ್ ಪಕ್ಷದ ನಾಯಕಿ ಶೆರ್ರಿ ರೆಹಮಾನ್ ಈ ಕುರಿತಂತೆ ಟ್ವೀಟ್ ಮಾಡಿದ್ದು, ಭಾರತದ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಮತ್ತು ಎನ್ ಡಿಎ ಮೈತ್ರಿಕೂಟ ಭರ್ಜರಿ ಗೆಲುವಿನತ್ತ ದಾಪುಗಾಲಿರಿಸಿದೆ. ಎಕ್ಸಿಟ್ ಪೋಲ್ ನಂತೆಯೇ ಫಲಿತಾಂಶ ಬಂದರೆ, ಭಾರತ ಇನ್ನು ಮುಂದೆ ಮತ್ತಷ್ಟು ಕಠಿಣ ನೆರೆಯ ದೇಶವಾಗಲಿದೆ ಎಂಬ ಆತಂಕ ಅವರು ವ್ಯಕ್ತಪಡಿಸಿದ್ದಾರೆ. ಅಂತೆಯೇ ತಮ್ಮ ಐಎಸ್ಐ ಸಂಸ್ಥೆಯ ಸಾಮರ್ಥ್ಯದ ಕುರಿತು ಮಾತನಾಡಿರುವ ಅವರು ಮೋದಿ ಮಿಠಾಯಿಗೆ ಐಎಸ್ಐ ಹಲ್ಲು ಮಜುಭೂತಾಗಿದೆ ಎಂದು ವ್ಯಂಗ್ಯ ಮಾಡಿದ್ದಾರೆ.
ಪಾಕಿಸ್ತಾನದ ರಾಯಭಾರ ಕಚೇರಿಯಲ್ಲಿ ಲೋಕಸಭಾ ಚುನಾವಣೆಯ ನೇರ ಪ್ರಸಾರ
ಇನ್ನು ಭಾರತದ ಲೋಕಸಭಾ ಚುನಾವಣೆ ಪಾಕಿಸ್ತಾನದಲ್ಲೂ ಭಾರಿ ಸದ್ದು ಮಾಡುತ್ತಿದ್ದು, ಪಾಕಿಸ್ತಾನದಲ್ಲಿ ಚುನಾವಣಾ ಫಲಿತಾಂಶವನ್ನೂ ಕೂಡ ನೇರ ಪ್ರಸಾರ ಮಾಡಲಾಗುತ್ತಿದೆ. ಪಾಕಿಸ್ತಾನ ಪ್ರಮುಖ ಸುದ್ಧಿ ಸಂಸ್ಥೆ ಡಾನ್ ಸೇರಿದಂತೆ ಹಲವು ಖ್ಯಾತನಾಮ ಪತ್ರಿಕೆಗಳು ಲೋಕಸಭಾ ಚುನಾವಣೆಯ ಫಲಿತಾಂಶದ ತತ್ ಕ್ಷಣದ ವರದಿ ಮಾಡುತ್ತಿವೆ. ಡಾನ್ ಸುದ್ದಿಸಂಸ್ಥೆ ಭಾರತದ ಲೋಕಸಭಾ ಚುನಾವಣೆಗಾಗಿಯೇ ಪ್ರತ್ಯೇಕ ವೆಬ್ ಪುಟವನ್ನು ತೆರೆದಿದ್ದು, ಡಾನ್ ಮಾತ್ರವಲ್ಲದೇ ಪಾಕಿಸ್ತಾನದ ಬಹುತೇಕ ಸುದ್ದಿ ಮಾಧ್ಯಮಗಳು ಚುನಾವಣಾ ಫಲಿತಾಂಶದ ಲೈವ್ ಕವರೇಜ್ ನೀಡುತ್ತಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT