ಹಿಂದೂ ಧರ್ಮದವರ ಅಂಗಡಿಗೆ ಬೆಂಕಿ 
ವಿದೇಶ

ಧರ್ಮನಿಂದನೆ ಆರೋಪ; ಪಾಕಿಸ್ತಾನದಲ್ಲಿ ಹಿಂದೂ ವೈದ್ಯ ಬಂಧನ, ಅಂಗಡಿಗೆ ಬೆಂಕಿ

ಧರ್ಮನಿಂದನೆ ಆರೋಪದ ಮೇಲೆ ಸ್ಥಳೀಯ ಪಾದ್ರಿಯೊಬ್ಬರು ಪೊಲೀಸ್ ದೂರು ನೀಡಿದ...

ಕರಾಚಿ: ಧರ್ಮನಿಂದನೆ ಆರೋಪದ ಮೇಲೆ ಸ್ಥಳೀಯ ಪಾದ್ರಿಯೊಬ್ಬರು ಪೊಲೀಸ್ ದೂರು ನೀಡಿದ ಹಿನ್ನಲೆಯಲ್ಲಿ ಹಿಂದೂ ಪಶುವೈದ್ಯರನ್ನು ಪಾಕಿಸ್ತಾನದ ದಕ್ಷಿಣ ಸಿಂಧ್ ಪ್ರಾಂತ್ಯದಲ್ಲಿ ಬಂಧಿಸಿದ ಘಟನೆ ನಡೆದಿದೆ.
ಸಿಂಧ್ ಪ್ರಾಂತ್ಯದ ಮಿರ್ಪುಕ್ಷಾಸ್ ಜಿಲ್ಲೆಯ ಫುಲಡ್ಯೊನ್ ಪಟ್ಟಣದಲ್ಲಿರುವ ಹಿಂದೂ ಜನರ ಅಂಗಡಿಗಳು ಮತ್ತು ಟಯರ್ ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದರಿಂದ ಹಿಂದೂ ವೈದ್ಯರಾದ ರಮೇಶ್ ಕುಮಾರ್ ನನ್ನು ಕಸ್ಟಡಿಗೆ ಕರೆದೊಯ್ಯಲಾಯಿತು.
ಸ್ಥಳೀಯ ಮಸೀದಿಯ ಮುಖ್ಯ ಪಾದ್ರಿ ಮೌಲ್ವಿ ಇಶಾಖ್ ನೊಹ್ರಿ ಪೊಲೀಸರಿಗೆ ನೀಡಿದ್ದ ದೂರಿನಲ್ಲಿ, ಹಿಂದೂ ವೈದ್ಯ ಮುಸಲ್ಮಾನರ ಪವಿತ್ರ ಗ್ರಂಥದ ಪುಟಗಳನ್ನು ಹರಿದು ಅದರಲ್ಲಿ ರೋಗಿಗಳಿಗೆ ಔಷಧಿಯನ್ನು ಕಟ್ಟಿ ಕೊಡುತ್ತಿದ್ದರು. ಈ ಸಂಬಂಧ ವೈದ್ಯರ ವಿರುದ್ಧ ಕೇಸು ದಾಖಲಿಸಲಾಗಿದೆ ಎಂದು ಪೊಲೀಸ್ ಠಾಣೆಯ ಅಧಿಕಾರಿ ಜಾಹಿದ್ ಹುಸೇನ್ ಲೆಗ್ಹರಿ ತಿಳಿಸಿದ್ದಾರೆ.
ಪಟ್ಟಣದಲ್ಲಿ ಗಲಭೆ ಎದ್ದ ಹಿನ್ನಲೆಯಲ್ಲಿ ತನಿಖೆ ನಡೆಸಿ ವೈದ್ಯರನ್ನು ಸೂಕ್ತ ಸುರಕ್ಷಿತ ಜಾಗಕ್ಕೆ ಕರೆದೊಯ್ಯಲಾಯಿತು ಎಂದು ಲೆಗ್ಹರಿ ತಿಳಿಸಿದ್ದಾರೆ.
ಕರಾಚಿ ಮತ್ತು ಸಿಂಧ್ ಪ್ರಾಂತ್ಯದ ಒಳ ಪ್ರದೇಶಗಳಲ್ಲಿ ಅಧಿಕ ಸಂಖ್ಯೆಯಲ್ಲಿ ಹಿಂದೂ ಜನರಿದ್ದು ಇಲ್ಲಿ ಅಲ್ಪಸಂಖ್ಯಾತ ಸಮುದಾಯದವರ ಮೇಲೆ ವೈಯಕ್ತಿಕ ದ್ವೇಷಗಳಿಂದ ಬಹಳ ಹಿಂದಿನಿಂದಲೂ ಧರ್ಮನಿಂದನೆ ನಡೆಯುತ್ತಿದೆ ಎಂದು ಪಾಕಿಸ್ತಾನ ಹಿಂದೂ ಕೌನ್ಸಿಲ್ ಆರೋಪಿಸಿತ್ತು.
1987ರಿಂದ 2016ರವರೆಗೆ ಪಾಕಿಸ್ತಾನ ಧರ್ಮ ನಿಂದನೆ ಕಾನೂನಿನಡಿಯಲ್ಲಿ ಕನಿಷ್ಠ ಸಾವಿರದ 472 ಜನರ ವಿರುದ್ಧ ಕೇಸು ದಾಖಲಾಗಿದೆ. ಅಂಕಿಅಂಶ ಪ್ರಕಾರ ಪಾಕಿಸ್ತಾನದಲ್ಲಿ ಸುಮಾರು 75 ಲಕ್ಷ ಹಿಂದೂಗಳು ವಾಸಿಸುತ್ತಿದ್ದಾರೆ. ಆದರೆ ಹಿಂದೂ ಧರ್ಮೀಯರ ಪ್ರಕಾರ ಅವರ ಸಂಖ್ಯೆ ಅಲ್ಲಿ ಸುಮಾರು 90 ಲಕ್ಷ.
ಪಾಕಿಸ್ತಾನದಲ್ಲಿನ ಬಹುತೇಕ ಹಿಂದೂ ಜನರು ಸಿಂಧ್ ಪ್ರಾಂತ್ಯದಲ್ಲಿ ವಾಸಿಸುತ್ತಿದ್ದು ಅಲ್ಲಿನ ಮುಸಲ್ಮಾನರ ಸಂಸ್ಕೃತಿ, ಸಂಪ್ರದಾಯ, ಭಾಷೆ, ಆಚಾರ, ವಿಚಾರಗಳನ್ನು ಅನುಸರಿಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

SCROLL FOR NEXT