ನವಜೋತ್ ಸಿಂಗ್ ಸಿಧು 
ವಿದೇಶ

ನ.9 ಕರ್ತಾರ್ ಪುರ್ ಕಾರಿಡಾರ್ ಉದ್ಘಾಟನಾ ಸಮಾರಂಭ: ಸಿಧುಗೆ ವೀಸಾ ನೀಡಿದ ಪಾಕಿಸ್ತಾನ

ನವೆಂಬರ್ 9 ರಂದು ನಡೆಯಲಿರುವ ಸಿಖ್ಖರ ಧಾರ್ಮಿಕ ಕ್ಷೇತ್ರ ಕರ್ತಾರ್ ಪುರ್ ಕಾರಿಡಾರ್ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಪಂಜಾಬ್ ಮಾಜಿ ಸಚಿವ ನವಜೋತ್ ಸಿಂಗ್ ಸಿಧು ಅವರಿಗೆ ವೀಸಾ ನೀಡಿರುವುದಾಗಿ ಪಾಕಿಸ್ತಾನ ಇಂದು ತಿಳಿಸಿದೆ. 

ಇಸ್ಲಾಮಾಬಾದ್: ನವೆಂಬರ್ 9 ರಂದು ನಡೆಯಲಿರುವ ಸಿಖ್ಖರ ಧಾರ್ಮಿಕ ಕ್ಷೇತ್ರ ಕರ್ತಾರ್ ಪುರ್ ಕಾರಿಡಾರ್ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಪಂಜಾಬ್ ಮಾಜಿ ಸಚಿವ ನವಜೋತ್ ಸಿಂಗ್ ಸಿಧು ಅವರಿಗೆ ವೀಸಾ ನೀಡಿರುವುದಾಗಿ ಪಾಕಿಸ್ತಾನ ಇಂದು ತಿಳಿಸಿದೆ. 

ಕರ್ತಾರ್ ಪುರ್ ಕಾರಿಡಾರ್ ಶಿಲಾನ್ಯಾಸ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಸಿಧು ಅವರನ್ನು ಇದೀಗ ಉದ್ಘಾಟನಾ ಕಾರ್ಯಕ್ರಮದಲ್ಲೂ ಪಾಲ್ಗೊಳ್ಳಲು ಪಾಕಿಸ್ತಾನ ಆಹ್ವಾನಿಸಿದೆ.  ತಮ್ಮ ಆಹ್ವಾನವನ್ನು  ಸಿಧು  ಒಪ್ಪಿಕೊಂಡಿರುವುದಾಗಿ ಆಡಳಿತಾ ರೂಢ ಪಕ್ಷದ ವಕ್ತಾರರು ತಿಳಿಸಿರುವುದಾಗಿ ಡಾನ್ ಪತ್ರಿಕೆ ವರದಿ ಮಾಡಿದೆ.

ಬಾಬಾ ಗುರುನಾನಕ್ ಗುರುದ್ವಾರಕ್ಕೆ ಭೇಟಿ ನೀಡಲು ಭಾರತದ ರಾಜಕಾರಣಿ ನವಜೋತ್ ಸಿಂಗ್ ಸಿಧು ಅವರಿಗೆ ಪಾಕಿಸ್ತಾನ ವೀಸಾ ನೀಡಿದೆ ಎಂದು ವಿದೇಶಾಂಗ ಕಚೇರಿ ವಕ್ತಾರ ಮೊಹಮ್ಮದ್ ಫೈಸಲ್ ಹೇಳಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್ ಶಾಸಕರಾಗಿರುವ ಸಿಧು, ಕರ್ತಾರ್ ಪುರ್ ಕಾರಿಡಾರ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅನುಮತಿ ಕೋರಿದ್ದಾರೆ.

ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ನಡೆದ ಕರ್ತಾರ್ ಪುರ್ ಕಾರಿಡಾರ್ ಭೂಮಿ ಪೂಜೆ ಸಮಾರಂಭದಲ್ಲಿ ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಕ್ವಾಮರ್ ಜಾವೇದ್ ಬಾಜ್ವ ಅವರನ್ನು  ತಬ್ಬಿಕೊಳ್ಳುವ ಮೂಲಕ ಸಿಧು ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT